ತೈಲ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಅವಘಡ: ಉಸಿರುಗಟ್ಟಿ 7 ಕಾರ್ಮಿಕರ ದುರ್ಮರಣ
Team Udayavani, Feb 9, 2023, 1:11 PM IST
ಆಂಧ್ರಪ್ರದೇಶ: ತೈಲಗಾರದ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ 7 ಮಂದಿ ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕಾಕಿನಡ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ.
ಕಾಕಿನಡ ಜಿಲ್ಲೆಯ ಅಂಬಟಿ ಸುಬ್ಬಣ್ಣಎಂಬ ತೈಲ ಕಾರ್ಖಾನೆಯಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆಯೆಂದು ಹೇಳಲಾಗಿದೆ. ಟ್ಯಾಂಕ್ ಸ್ವಚ್ಛಗೊಳಿಸಲು ಕಾರ್ಮಿಕರು ಒಬ್ಬೊಬ್ಬರಾಗಿ ಟ್ಯಾಂಕ್ ಒಳಗೆ ಇಳಿದಿದ್ದು ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ವೆಚಂಗಿ ಕೃಷ್ಣ, ವೆಚಂಗಿ ನರಸಿಂಹಂ, ವೆಚಂಗಿ ಸಾಗರ್, ಕೊರತಡು ಬಾಬು, ಕರಿ ರಾಮ ರಾವ್, ಕಟ್ಟಮುರಿ ಜಗದೀಶ್, ಪ್ರಸಾದ್ ಎಂದು ಗುರುತಿಸಲಾಗಿದೆ.
ಮೃತ 7 ಮಂದಿ ಕಾರ್ಮಿಕರು ಕೂಡಾ ಕೇವಲ 10 ದಿನದ ಮೊದಲಷ್ಟೇ ಕೆಲಸಕ್ಕೆ ಸೇರಿಕೊಂಡಿದ್ದರು ಎಂದು ಕಾರ್ಖಾನೆ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ದುರಂತ ನಡೆದ ತೈಲ ಕಾರ್ಖಾನೆ, ಕಾರ್ಖಾನೆ ಕಾಯ್ದೆಯ ಅಡಿಯಲ್ಲಿ ಗುರುತಿಸಿಕೊಂಡಿಲ್ಲ. ಅಲ್ಲದೆ ಕಲುಷಿತವಾದ ಅನಿಲವನ್ನು ಸೇವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಮಾಹಿತಿ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು