ರಾಂಚಿಯಲ್ಲಿ ಒಂದೇ ಕುಟುಂಬದ 7 ಮಂದಿಯಿಂದ ಸಾಮೂಹಿಕ ಆತ್ಮಹತ್ಯೆ
Team Udayavani, Jul 30, 2018, 11:53 AM IST
ರಾಂಚಿ : ರಾಷ್ಟ್ರ ರಾಜಧಾನಿಯ ಬುರಾರಿಯಲ್ಲಿ ಒಂದೇ ಕುಟುಂಬದ 11 ಮಂದಿ ಈಚೆಗೆ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜನಮನದಲ್ಲಿ ಇನ್ನೂ ಮಾಸದಿರುವ ನಡುವೆಯೇ ಇದೀಗ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ಒಂದೇ ಕುಟುಂಬದ 7 ಮಂದಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ರಾಂಚಿಯ ಕಾಂಕೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಸಾಮೂಹಿಕ ಆತ್ಮಹತ್ಯೆ ಘಟನೆಯನ್ನು ಪೊಲೀಸರು ತನಿಖೆ ನಡುಸುತ್ತಿದ್ದಾರೆ; ಆದರೆ ಆತ್ಮಹತ್ಯೆಗೆ ಕಾರಣವೇನೆಂಬುದು ಮಾತ್ರ ಈ ತನಕ ಗೊತ್ತಾಗಿಲ್ಲ.
ಈ ತಿಂಗಳ ಆದಿಯಲ್ಲಿ ಜಾರ್ಖಂಡ್ನ ಹಜಾರಿಬಾಗ್ನಲ್ಲಿನ ಅಪಾರ್ಟ್ಮೆಂಟ್ ಒಂದರಲ್ಲಿ ಒಂದೇ ಕುಟುಂಬದ ಆರು ಮಂದಿ ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಅದೇ ರೀತಿ ಒಂದೇ ಕುಟುಂಬದ 7 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದು ಹಣಕಾಸು ಬಿಕ್ಕಟ್ಟೇ ಈ ಘಟನೆಗಳಿಗೆ ಕಾರಣ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ದಿಲ್ಲಿಯ ಬುರಾರಿಯ ಕುಟುಂಬದ 11 ಮಂದಿಯ ಸಾಮೂಹಿಕ ಆತ್ಮಹತ್ಯೆ ನಿಗೂಢ ಪ್ರಕರಣವಾಗಿತ್ತು. ಅದಾಗಿ ಕೇವಲ ಒಂದು ತಿಂಗಳ ಒಳಗೆ ಜಾರ್ಖಂಡ್ ರಾಜಧಾನಿಯಲ್ಲಿ ಈ ಎರಡು ಘಟನೆಗಳು ಸಂಭವಿಸಿವೆ.
ದಿಲ್ಲಿಯ ಬುರಾರಿಯಲ್ಲಿನ ಭಾಟಿಯಾ ಕುಟುಂಬದ 11 ಮಂದಿಯ ಸಾಮೂಹಿಕ ಆತ್ಮಹತ್ಯೆಗೆ ಮೋಕ್ಷ ಪಡೆಯುವ ಅಪೇಕ್ಷೆ ಕಾರಣವೆಂದು ಕೂಡ ಶಂಕಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ