370ನೇ ವಿಧಿ ರದ್ಧತಿ ಬಳಿಕ ಯೋಧರ ಸಾವಿನ ಸಂಖ್ಯೆ ಇಳಿಮುಖ
Team Udayavani, Feb 5, 2020, 11:09 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಕೇಂದ್ರ ಸರಕಾರ ರದ್ಧುಗೊಳಿಸಿದ ಬಳಿಕ ಭಾರತೀಯ ಯೋಧರ ಸಾವಿನ ಸಂಖ್ಯೆ ಇಳಿಮುಖವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೇಂದ್ರ ಗೃಹವ್ಯವಹಾರಗಳ ರಾಜ್ಯ ಸಚಿವ ಕಿಶನ್ ರೆಡ್ಡಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ.
ರಾಜ್ಯಸಭೆಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಲಿಖಿತ ಉತ್ತರ ನೀಡುತ್ತಾ ಕಿಶನ್ ರೆಡ್ಡಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಕಳೆದ ವರ್ಷ ಫೆಬ್ರವರಿ 13ರಿಂದ ಆಗಸ್ಟ್ 4ರವರೆಗಿನ 173 ದಿನಗಳ ಅವಧಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಯ 82 ಯೋಧರು ಹುತಾತ್ಮರಾಗಿದ್ದಾರೆ. ಆದರೆ ಆಗಸ್ಟ್ 5ರಂದು 370ನೇ ವಿಧಿ ರದ್ದುಗೊಂಡ ಬಳಿಕ 2020ರ ಜನವರಿ 24ರವರೆಗೆ ಈ ಭಾಗದಲ್ಲಿ ವಿವಿಧ ಪ್ರಕರಣಗಳಲ್ಲಿ ಭದ್ರತಾ ಪಡೆಯ 22 ಯೋಧರು ಹುತಾತ್ಮರಾಗಿದ್ದಾರೆ ಎಂಬ ಮಾಹಿತಿಯನ್ನು ಕಿಶನ್ ರೆಡ್ಡಿ ಅವರು ಸದನಕ್ಕೆ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ಕಳೆದ ವರ್ಷ ಆಗಸ್ಟ್ 5ರ ಬಳಿಕ ಒಟ್ಟು 32 ಉಗ್ರಗಾಮಿಗಳು ಹತರಾಗಿದ್ದಾರೆ, 10 ಉಗ್ರರನ್ನು ಬಂಧಿಸಲಾಗಿದೆ ಮತ್ತು ಭಯೋತ್ಪಾದಾನಾ ಸಂಬಂಧಿತ ಘಟನೆಗಳಲ್ಲಿ 19 ನಾಗರಿಕರು ಮೃತಪಟ್ಟಿದ್ದಾರೆ ಎಂದು ಸಚಿವ ಕಿಶನ್ ರೆಡ್ಡಿ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ