ಅಪಾಯ ತಡೆಗೆ ನಿಷೇಧಾಜ್ಞೆ
ಬಿಸಿ ಗಾಳಿಯಿಂದಾಗಿ ಬಿಹಾರದಲ್ಲಿ 76 ಮಂದಿ ಸಾವು
Team Udayavani, Jun 18, 2019, 5:50 AM IST
ಪಾಟ್ನಾ: ಸಾಮಾನ್ಯವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಂತಹ ಸಂದರ್ಭದಲ್ಲಿ ನಿಷೇಧಾಜ್ಞೆ ಜಾರಿಗೊಳಿಸುವುದನ್ನು ನೋಡಿರುತ್ತೀರಿ. ಆದರೆ, ಬಿಹಾರದ ಗಯಾದಲ್ಲಿ ಬಿಸಿ ಹವೆಯ ಅಬ್ಬರಕ್ಕೆ ಬೆದರಿಕೆ ಸೆಕ್ಷನ್ 144 ಅನ್ನು ಸರಕಾರ ಜಾರಿ ಮಾಡಿದೆ. ಹೆಚ್ಚಿನ ಸಂಖ್ಯೆಯ ಜನರು ಒಂದೇ ಕಡೆ ಸೇರುವಂತಿಲ್ಲ ಎಂಬ ಫರ್ಮಾನನ್ನು ಹೊರಡಿಸಲಾಗಿದೆ.
ಒಣ ಹವೆ ಮತ್ತು ಧೂಳಿನಿಂದ ಕೂಡಿದ ನಗರ ಎಂದೇ ಹೆಸರು ಪಡೆದಿರುವ ಗಯಾ ನಗರವು ಬಿಸಿ ಹವೆಯಿಂದ ಕಂಗೆಟ್ಟಿದೆ. ಬಿಸಿ ಗಾಳಿಗೆ ಇಲ್ಲಿ 76 ಮಂದಿ ಬಲಿಯಾಗಿದ್ದಾರೆ. ಈ ಸಾವಿನ ನರ್ತನಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಇಲ್ಲಿನ ಜಿಲ್ಲಾಡಳಿತವು ಹಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ.
ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರೂ 76 ಮಂದಿಯ ಸಾವಿನ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮನೆಗಳಿಂದ ಹೊರಬರದಂತೆ ಜನರಿಗೆ ಸಲಹೆ ನೀಡಿದ್ದಾರೆ.
ಏನೇನು ಕ್ರಮಗಳು?
ಬೆಳಗ್ಗೆ 11 ರಿಂದ ಸಂಜೆ 4 ಗಂಟೆಯೊಳಗಿನ ಅವಧಿಯಲ್ಲಿ ನಿರ್ಮಾಣ ಕಾಮಗಾರಿ ಸೇರಿದಂತೆ ಇತರೆ ಬಾಹ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಗೆ ಸಂಬಂಧಿಸಿದ ಕೆಲಸವನ್ನೂ ಬೆಳಗ್ಗೆ 10.30ರ ನಂತರ ಮಾಡುವಂತಿಲ್ಲ
ನಿಷೇಧಾಜ್ಞೆ ಹೊರಡಿಸಲಾಗಿದ್ದು, ಹೆಚ್ಚಿನ ಜನರು ಒಂದೇ ಕಡೆ ಸೇರುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ