Accident: ಪೊಲೀಸ್ ವಾಹನ ಢಿಕ್ಕಿ; 8 ವರ್ಷದ ಮಗಳು ಸಾವು, ತಾಯಿ ಗಂಭೀರ; ಭುಗಿಲೆದ್ದ ಆಕ್ರೋಶ
Team Udayavani, Jul 6, 2023, 1:16 PM IST
ಚೆನ್ನೈ: ಪೊಲೀಸ್ ವಾಹನ ಢಿಕ್ಕಿಯಾಗಿ 8 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಕಂಗಯಂ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ತಾಯಿ ರಾಜೇಶ್ವರಿ ತನ್ನ ಮಗಳು ದಿವ್ಯದರ್ಶಿನಿಯೊಂದಿಗೆ ಶಾಲೆಯಿಂದ ವಾಪಾಸ್ ಆಗುತ್ತಿದ್ದರು. ಮಗಳನ್ನು ತನ್ನ ಸ್ಕೂಟಿಯಲ್ಲಿ ಮನೆಗೆ ಕರೆ ತರುತ್ತಿದ್ದ ವೇಳೆ ದಿವ್ಯದರ್ಶಿನಿ ಅವರ ಬ್ಯಾಗ್ ಸ್ಕೂಟರ್ ನ ಕೆಳಗೆ ಬಿದ್ದಿದೆ. ಪರಿಣಾಮ ಇಬ್ಬರು ಕೆಳಗೆ ಬಿದ್ದಿದ್ದಾರೆ. ಆದರೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಪೊಲೀಸ್ ವಾಹನವೊಂದು ಕೆಳಗೆ ಬಿದ್ದಿದ್ದ ತಾಯಿ – ಮಗಳ ಮೇಲೆ ಹರಿದಿದೆ.
ಘಟನೆಯಲ್ಲಿ 8 ರ ವರ್ಷದ ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ತಾಯಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಇದನ್ನೂ ಓದಿ: Btown: ಅಂದು ಹಣಕ್ಕಾಗಿ ಬಟರ್ ಚಿಕನ್ ಮಾರಾಟ ಮಾಡುತ್ತಿದ್ದವ ಇಂದು ಬಾಲಿವುಡ್ನ ಸ್ಟಾರ್ ನಟ
ಪೊಲೀಸ್ ವಾಹನದ ಚಾಲಕನನ್ನು ಇಲಾಖೆಯ ಗೃಹರಕ್ಷಕ ದಳದ ವೀರ ಚಿನ್ನ ಕಣ್ಣನ್ ಎಂದು ಗುರುತಿಸಲಾಗಿದ್ದು, ಈ ಘಟನೆಯ ಬಳಿಕ ಸ್ಥಳೀಯರು ಪ್ರತಿಭಟನೆ ನಡೆಸಿ ರಸ್ತೆ ಬ್ಲಾಕ್ ಮಾಡಿದ್ದಾರೆ. ಪರಿಸ್ಥಿತಿ ಅರಿತ ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ಸದ್ಯ ಈ ಕುರಿತು ನಲ್ಲೂರು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಅಪಘಾತದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ ಮತ್ತು ಗಾಯಗೊಂಡ ತಾಯಿಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?