ಮೊಬೈಲ್ ಸ್ಫೋಟಗೊಂಡು ಬಾಲಕಿ ಮೃತ್ಯು; ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಂಸ್ಥೆ
Team Udayavani, Apr 27, 2023, 1:14 PM IST
ತ್ರಿಶೂರ್: ಇತ್ತೀಚೆಗೆ ಕೇರಳದ ತ್ರಿಶೂರ್ ನಲ್ಲಿ ಮೊಬೈಲ್ ಸ್ಪೋಟಗೊಂಡು ಬಾಲಕಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಇದೀಗ ಮೊಬೈಲ್ ಫೋನ್ ಕಂಪೆನಿ ಪ್ರತಿಕ್ರಿಯೆ ನೀಡಿದೆ.
ಘಟನೆ ವಿವರ: ಸೋಮವಾರ (ಎ.24 ರಂದು) ರಾತ್ರಿ 10:30 ರ ವೇಳೆಗೆ ಬಾಲಕಿ ಆದಿತ್ಯಶ್ರೀ ಮೊಬೈಲ್ ನಲ್ಲಿ ಸಿನಿಮಾ ನೋಡುತ್ತಿರುವಾಗ ಮೊಬೈಲ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಮುಖ,ಕೈಗೆ ಗಂಭೀರ ಗಾಯಗೊಂಡ ಪರಿಣಾಮ ಮೃತಪಟ್ಟಿದ್ದಳು.
ಮೊಬೈಲ್ ನಲ್ಲಿ ವಿಡಿಯೋವನ್ನು ಹೆಚ್ಚಿನ ಸಮಯದಿಂದ ನೋಡುತ್ತಿದ್ದ ಪರಿಣಾಮ ಮೊಬೈಲ್ ನ ಬ್ಯಾಟರಿ ಬಿಸಿಯಾಗಿದೆ ಇದರಿಂದ ಮೊಬೈಲ್ ಸ್ಫೋಟಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ.
ಸ್ಥಳೀಯ ಪೊಲೀಸ್ ಅಧಿಕಾರಿಗಳ ತಂಡವು ತನಿಖೆಯನ್ನು ಪ್ರಾರಂಭಿಸಿದೆ ಮತ್ತು ಈ ವಿಷಯವನ್ನು ಪರಿಶೀಲಿಸಲು ವಿಧಿವಿಜ್ಞಾನ ತಂಡವನ್ನು ಸಹ ನಿಯೋಜಿಸಲಾಗಿದೆ. ಕೆಲ ಮಾಹಿತಿಯ ಪ್ರಕಾರ ಬಾಲಕಿ ರೆಡ್ಮಿ ಮೊಬೈಲ್ ಫೋನನ್ನು ಬಳಸುತ್ತಿದ್ದಳ ಎನ್ನಲಾಗಿದೆ.
ಇದನ್ನೂ ಓದಿ: ಸೋಲಿನ ಸುಳಿಯಲ್ಲಿರುವ SRH ತಂಡಕ್ಕೆ ಬಿಗ್ ಶಾಕ್: IPLನಿಂದ ಹೊರಬಿದ್ದ ಖ್ಯಾತ ಆಲ್ ರೌಂಡರ್
ಆರೋಪಗಳನ್ನು ಕೇಳಿರುವ ಕ್ಸಿಯೋಮಿ ಒಡೆತನದ ರೆಡ್ಮಿ ಈ ಬಗ್ಗೆ “ಕ್ಸಿಯೋಮಿ ಇಂಡಿಯಾದಲ್ಲಿ ಗ್ರಾಹಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಈ ಕಷ್ಟದ ಸಮಯದಲ್ಲಿ ನಾವು ಬಾಲಕಿಯ ಕುಟುಂಬದೊಂದಿಗೆ ನಿಲ್ಲುತ್ತೇವೆ ಮತ್ತು ಯಾವುದೇ ರೀತಿಯ ಸಹಾಯಬೇಕಾದರೆ ನಾವು ಅದನ್ನು ಮಾಡಲು ಸಿದ್ದ. ಅವರು ಬಳಸುತ್ತಿದ್ದ ಮೊಬೈಲ್ ರೆಡ್ಮಿ ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಘಟನೆಯ ನಿಜವಾದ ಕಾರಣವನ್ನು ತಿಳಿಯಲು ನಾವು ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತೇವೆ ಮತ್ತು ಅಗತ್ಯವಿರುವಲ್ಲಿ ಅವರರೊಂದಿಗೆ ಸಹಕಾರ ನೀಡುತ್ತೇವೆ” 91 ಮೊಬೈಲ್ ಗೆ ಸಂಸ್ಥೆ ಹೇಳಿದೆ.
ಮೊಬೈಲ್ ಸ್ಫೋಟ ಹಾಗೂ ಮೊಬೈಲ್ ಸಂಬಂಧಿರ ಅಪಘಾತಗಳು ನಡೆದಿರುವುದು ಇದೇ ಮೊದಲಲ್ಲ ಕೆಲ ದಿನಗಳ ಹಿಂದೆ ಉತ್ತರ ಪ್ರದೇಶದ ಬದುವಾನ್ನಲ್ಲಿ ಬಾಲಕನೊಬ್ಬ ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ್ದ. ಫೋನ್ ಚಾರ್ಜ್ ಇಟ್ಟೇ ಮಾತನಾಡುತ್ತಿದ್ದ 68 ವರ್ಷದ ವ್ಯಕ್ತಿಯೊಬ್ಬ ಮೊಬೈಲ್ ಸ್ಫೋಟಗೊಂಡು ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ