
ತನ್ನ ಪತಿ ಮೊದಲು ‘ಮಹಿಳೆ’ಯಾಗಿದ್ದ ಎಂದು ಪತ್ನಿಗೆ ತಿಳಿದಿದ್ದು ಎಂಟು ವರ್ಷಗಳ ಬಳಿಕ!
Team Udayavani, Sep 16, 2022, 10:25 AM IST

ವಡೋದರಾ: ತಾನು ಮದುವೆಯಾದ ಗಂಡನು ಗಂಡಸೇ ಅಲ್ಲ ಎಂದು ತಿಳಿದರೆ ಪತ್ನಿಗೆ ಹೇಗಾಗಬೇಡ! ಅಂತಹುದೇ ಘಟನೆ ಗುಜರಾತ್ ನ ವಡೋದರಾದಲ್ಲಿ ನಡೆದಿದೆ. ತಾನು 2014 ರಲ್ಲಿ ಮದುವೆಯಾದ ವ್ಯಕ್ತಿ ಪುರುಷನಾಗಲು ಲಿಂಗ ಬದಲಾವಣೆಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಎಂದು ಇದೀಗ ಮಹಿಳೆಗೆ ಗೊತ್ತಾಗಿದೆ.
ವರದಿಯ ಪ್ರಕಾರ, ಮಹಿಳೆ ಬುಧವಾರ ಗೋತ್ರಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನ ಪತಿ ವಿರಾಜ್ ವರ್ಧನ್ ವಿರುದ್ಧ ವಂಚನೆ ಮತ್ತು ಅಸ್ವಾಭಾವಿಕ ಲೈಂಗಿಕತೆಯ ಬಗ್ಗೆ ದೂರು ನೀಡಿರುವ ಆಕೆ, ಎಫ್ ಐಆರ್ ನಲ್ಲಿ ಅವರ ಕುಟುಂಬದ ಸದಸ್ಯರನ್ನೂ ಹೆಸರಿಸಿದ್ದಾಳೆ.
ಇದನ್ನೂ ಓದಿ:ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ನಕಲಿ ಆರ್ ಟಿಸಿಯಿಂದ ಭೂಮಿ ಮಾರಾಟ: ಆರು ಮಂದಿ ಬಂಧನ
ತಾನು ಮದುವೆಯಾದ ವಿರಾಜ್ ವರ್ಧನ್ ಈ ಹಿಂದೆ ‘ವಿಜೇತಾ’ ಆಗಿದ್ದ ಎಂದು ಮಹಿಳೆ ದೂರಿದ್ದಾರೆ. ಮೊದಲ ಪತಿ 2011 ರಲ್ಲಿ ರಸ್ತೆ ಅಪಘಾತದಲ್ಲಿ ನಿಧನರಾದ ಬಳಿಕ ಒಂಬತ್ತು ವರ್ಷಗಳ ಹಿಂದೆ ವಿರಾಜ್ ವರ್ಧನ್ ಅವರನ್ನು ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಭೇಟಿಯಾಗಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾಳೆ.
ಅವರು ಫೆಬ್ರವರಿ 2014 ರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹವಾದರು ಮತ್ತು ಹನಿಮೂನ್ ಗೆ ಕಾಶ್ಮೀರಕ್ಕೆ ಹೋಗಿದ್ದರು. “ಆದರೆ, ವಿರಾಜ್ ವರ್ಧನ್ ಅವರು ಲೈಂಗಿಕ ಕ್ರಿಯೆಯಿಂದ ದೂರವೇ ಉಳಿಯುತ್ತಿದ್ದರು. ಅವಳು ಅವನ ಮೇಲೆ ಒತ್ತಡ ಹೇರಿದಾಗ, ಕೆಲವು ವರ್ಷಗಳ ಹಿಂದೆ ರಷ್ಯಾದಲ್ಲಿದ್ದಾಗ ನಡೆದ ಅಪಘಾತದಲ್ಲಿ ತಾನು ಲೈಂಗಿಕ ಸಾಮರ್ಥ್ಯವನ್ನು ಕಳೆದುಕೊಂಡಿದ್ದೇನೆ ಎಂದು ಅವನು ಹೇಳಿಕೊಂಡಿದ್ದಾನೆ, ”ಎಂದು ಎಫ್ಐಆರ್ ನಲ್ಲಿ 40 ವರ್ಷದ ದೂರುದಾರ ಮಹಿಳೆ ಹೇಳಿದ್ದಾರೆ.
ಸಣ್ಣ ಶಸ್ತ್ರ ಚಿಕಿತ್ಸೆ ಮಾಡಿಸಿದರೆ ಸರಿಯಾಗಲಿದೆ ಎಂದು ವಿರಾಜ್ ವರ್ಧನ್ ಪತ್ನಿಗೆ ಹೇಳಿದ್ದ. 2020ರ ಜನವರಿಯಲ್ಲಿ ತಾನು ದೇಹತೂಕ ಕಡಿಮೆ ಮಾಡಿಕೊಳ್ಳಬೇಕು, ಅದಕ್ಕಾಗಿ ಶಸ್ತ್ರ ಚಿಕಿತ್ಸೆ ಮಾಡಿಸಲೆಂದು ಕೋಲ್ಕತ್ತಾಗೆ ತೆರಳಿದ್ದ. ಆದರೆ ಆತ ಅಲ್ಲಿ ಅವರು ಪುರುಷ ಅಂಗಗಳನ್ನು ಅಳವಡಿಸಲು ಲೈಂಗಿಕ ಬದಲಾವಣೆಯ ಶಸ್ತ್ರಚಿಕಿತ್ಸೆಯನ್ನು ಮಾಡಿದ್ದ. ಈ ವಿಚಾರವನ್ನು ಬಳಿಕ ತನ್ನೊಂದಿಗೆ ಹೇಳಿಕೊಂಡಿದ್ದ ಎಂದು ಹೇಳಿದರು.
ಬಳಿಕ ಆತ ಅವನು ತನ್ನೊಂದಿಗೆ ಅಸ್ವಾಭಾವಿಕ ಲೈಂಗಿಕತೆ ನಡೆಸಲು ಪ್ರಾರಂಭಿಸಿದ. ಅಲ್ಲದೆ ಇದರ ಬಗ್ಗೆ ಯಾರೊಂದಿಗಾದರೂ ಮಾತನಾಡಿದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್ ಜೋಡೋ ಯಾತ್ರೆ ಎಲ್ಲಾ ಸಮಾಜ ವಿರೋಧಿ ಅಂಶಗಳನ್ನು ಒಟ್ಟುಗೂಡಿಸಿತು: ಬಿಜೆಪಿ

ಸಲಿಂಗ ವಿವಾಹ : ಅರ್ಜಿಗಳ ಸಮೂಹ ಸುಪ್ರೀಂಗೆ ಸಲ್ಲಿಸಿದ ದೆಹಲಿ ಹೈಕೋರ್ಟ್

ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧ ಪ್ರಶ್ನಿಸಿದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹಿಮಾಚಲ ಪ್ರದೇಶ ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಏಪ್ರಿಲ್ 1 ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ವಾಹನಗಳು ಗುಜರಿಗೆ: ಗಡ್ಕರಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
