ಇರಾನ್ ಮಿಸೈಲ್ಸ್ ದಾಳಿಗೆ 80 ಅಮೆರಿಕನ್ ಸೈನಿಕರ ಸಾವು: ಇರಾನ್ ಮಾಧ್ಯಮ
ಇರಾನ್ ಮಿಸೈಲ್ಸ್ ದಾಳಿಯಲ್ಲಿ ಅಮೆರಿಕದ ಹೆಲಿಕಾಪ್ಟರ್ ಗಳು ಮತ್ತು ಮಿಲಿಟರಿ ಯುದ್ಧೋಪಕರಣಗಳು ಹಾನಿ
Team Udayavani, Jan 8, 2020, 12:08 PM IST
ಟೆಹ್ರಾನ್: ಇರಾಕ್ ವಾಯುನೆಲೆಯಲ್ಲಿರುವ ಅಮೆರಿಕ ಪಡೆಗಳನ್ನು ಗುರಿಯಾಗಿರಿಸಿಕೊಂಡು ಇರಾನ್ ನಡೆಸಿದ 15 ಮಿಸೈಲ್ಸ್ ದಾಳಿಯಲ್ಲಿ 80 ಅಮೆರಿಕನ್ ಟೆರರಿಸ್ಟ್ (ಸೈನಿಕರು) ಸಾವನ್ನಪ್ಪಿರುವುದಾಗಿ ಇರಾನ್ ಸ್ಟೇಟ್ ಟೆಲಿವಿಷನ್ ವರದಿ ಮಾಡಿದೆ.
ನಮ್ಮ ಯಾವುದೇ ಮಿಸೈಲ್ಸ್ ಗಳಿಗೆ ತಡೆಯೊಡ್ಡಲು ಸಾಧ್ಯವಾಗಿಲ್ಲ ಎಂದು ಇರಾನ್ ಹೇಳಿದೆ. ರೆವಲ್ಯೂಷನರಿ ಗಾರ್ಡ್ಸ್ ಮೂಲಗಳ ಪ್ರಕಾರ, ಒಂದು ವೇಳೆ ಅಮೆರಿಕ ಪ್ರತ್ಯುತ್ತರ ನೀಡಲು ಮುಂದಾದರೆ ಇರಾನ್ ಕೂಡಾ ನೂರು ಇತರ ಪ್ರದೇಶಗಳ ಮೇಲೆ ದಾಳಿ ನಡೆಸಲು ಗುರಿ ಇರಿಸಿಕೊಂಡಿದೆ ಎಂದು ವರದಿ ತಿಳಿಸಿದೆ.
ಇರಾನ್ ಮಿಸೈಲ್ಸ್ ದಾಳಿಯಲ್ಲಿ ಅಮೆರಿಕದ ಹೆಲಿಕಾಪ್ಟರ್ ಗಳು ಮತ್ತು ಮಿಲಿಟರಿ ಯುದ್ಧೋಪಕರಣಗಳು ಹಾನಿಗೊಂಡಿರುವುದಾಗಿ ವರದಿ ತಿಳಿಸಿದೆ.
ಇರಾಕ್ ನಲ್ಲಿರುವ ಅಮೆರಿಕ ಮೈತ್ರಿಕೂಟದ ಪಡೆಗಳ ಮೇಲೆ ಬುಧವಾರ ನಸುಕಿನ ವೇಳೆ ಇರಾನ್ ಮಿಸೈಲ್ ದಾಳಿ ನಡೆಸಿದೆ. ಇತ್ತೀಚೆಗೆ ಅಮೆರಿಕದ ವೈಮಾನಿಕ ಪಡೆ ದಾಳಿ ನಡೆಸಿ ಇರಾನ್ ಮಿಲಿಟರಿ ಜನರಲ್ ಕಮಾಂಡರ್ ಖಾಸಿಂ ಸೊಲೆಮನಿಯನ್ನು ಹತ್ಯೆಗೈದಿತ್ತು. ಅಮೆರಿಕದ ವಿರುದ್ಧ ಪ್ರತೀಕಾರಕ್ಕಾಗಿ ಮಿಸೈಲ್ ದಾಳಿ ನಡೆಸಿರುವುದಾಗಿ ಇರಾನ್ ಹೇಳಿದೆ.
ಮಿಲಿಟರಿ ಜನರಲ್ ಖಾಸಿಂ ಸೊಲೆಮನಿ ಹತ್ಯೆಗೆ ಪ್ರತೀಕಾರ ತೀರಿಸಿಕೊಳ್ಳದೇ ಬಿಡುವುದಿಲ್ಲ. ಮಿಸೈಲ್ ದಾಳಿ ಅಮೆರಿಕಕ್ಕೆ ನೀಡಿದ ಎಚ್ಚರಿಕೆಯಾಗಿದೆ. ಒಂದು ವೇಳೆ ಅಮೆರಿಕ ಪ್ರತ್ಯುತ್ತರಕ್ಕೆ ಮುಂದಾದರೆ ನಾವು ಇನ್ನಷ್ಟು ಹಿಂಸಾತ್ಮಕ ದಾಳಿ ನಡೆಸಬೇಕಾಗುತ್ತದೆ ಎಂದು ಇರಾನ್ ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.
ಮಧ್ಯ ಏಷ್ಯಾದಿಂದ ಅಮೆರಿಕ ತನ್ನ ಪಡೆಗಳನ್ನು ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಇರಾನ್ ಒತ್ತಾಯಿಸಿರುವುದಾಗಿ ಇರಾನ್ ಸ್ವಾಮಿತ್ವದ ಟಿವಿ ವರದಿ ಮಾಡಿದೆ.
ಇದೀಗ ಅಮೆರಿಕಕ್ಕೆ ನಮ್ಮ ಶಕ್ತಿ ಏನೆಂಬುದು ಅರ್ಥವಾಗಿದೆ. ಮಧ್ಯ ಏಷ್ಯಾದಿಂದ ಅಮೆರಿಕ ಪಡೆಗಳನ್ನು ವಾಪಸ್ ಕರೆಯಿಸಿಕೊಳ್ಳಲು ಇದೀಗ ಸಮಯ ಬಂದಿದೆ ಎಂದು ಇರಾನ್ ಸೇನಾಪಡೆಯ ಜನರಲ್ ಮೊಹಮ್ಮದ್ ಬಾಖೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್