![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
Social Media ದಲ್ಲಿ ತಮಾಷೆಯ ರೀಲ್ಸ್ ಹಾಕಿ 34 ವರ್ಷದ ಮಹಿಳೆಯ ಮನಗೆದ್ದ 80ರ ವೃದ್ಧ
ಸೋಶಿಯಲ್ ಮೀಡಿಯಾದಲ್ಲಿ ಅರಳಿದ ಪ್ರೀತಿ...
Team Udayavani, Apr 4, 2024, 1:35 PM IST
![Social Media ದಲ್ಲಿ ತಮಾಷೆಯ ರೀಲ್ಸ್ ಹಾಕಿ 34 ವರ್ಷದ ಮಹಿಳೆಯ ಮನಗೆದ್ದ 80ರ ವೃದ್ಧ](https://www.udayavani.com/wp-content/uploads/2024/04/wedding-620x331.jpg)
ಮಧ್ಯಪ್ರದೇಶ: ಮಧ್ಯಪ್ರದೇಶದ ವೃದ್ಧನೊಬ್ಬ 34 ವರ್ಷದ ಮಹಿಳೆಯನ್ನು ಮದುವೆಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾನೆ. ಈ ಮದುವೆಯಲ್ಲಿ ವರನ ವಯಸ್ಸು 80 ಮತ್ತು ವಧುವಿನ ವಯಸ್ಸು 34. ಇಬ್ಬರ ಪ್ರೀತಿ ಹುಟ್ಟಿಕೊಂಡಿದ್ದೇ ಸಾಮಾಜಿಕ ಜಾಲತಾಣದಲ್ಲಿಯಂತೆ.
ಮಧ್ಯಪ್ರದೇಶದ ಸುಸ್ನೇರ್ ಸಮೀಪದ ಮಗರಿಯಾ ಗ್ರಾಮದ ನಿವಾಸಿ ಬಲುರಾಮ್ ಬಗ್ರಿ ಅವರು ಮಹಾರಾಷ್ಟ್ರದ ಅಮರಾವತಿ ನಿವಾಸಿ ಶೀಲಾ ಇಂಗ್ಲೆ ಅವರನ್ನು ಏಪ್ರಿಲ್ 1 ರಂದು ವಿವಾಹವಾಗಿದ್ದಾರೆ. ಈ ಇಬ್ಬರೂ ವಿವಾಹವಾಗಲು ಸೋಶಿಯಲ್ ಮೀಡಿಯಾದಲ್ಲಿ ಆಕ್ಟಿವ್ ಆಗಿದ್ದ 80 ರ ಹರೆಯದ ಬಲುರಾಮ್ ಅವರೇ ಕಾರಣವಂತೆ…
ಒಂದಾಗಿದ್ದು ಹೇಗೆ:
ಮೂಲತಃ ಮಧ್ಯಪ್ರದೇಶದ ಮಗರಿಯ ಗ್ರಾಮದಲ್ಲಿ ವಾಸಿಸುತ್ತಿದ್ದ ಬಾಲುರಾಮ್ ಅವರಿಗೆ ಈಗಾಗಲೇ ಒಂದು ಮದುವೆಯಾಗಿದ್ದು ಕೆಲ ವರ್ಷಗಳ ಹಿಂದೆ ಅವರ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದರು ಬಾಲುರಾಮ್ ಅವರಿಗೆ ಓರ್ವ ಪುತ್ರನಿದ್ದು ಮೂವರು ಪುತ್ರಿಯರಿದ್ದಾರೆ ಆದರೆ ಅವರೆಲ್ಲರೂ ಬೇರೆ ಬೇರೆಯಾಗಿ ವಾಸಮಾಡುತ್ತಿದ್ದಾರೆ ಹೆಂಡತಿಯನ್ನು ಕಳೆದುಕೊಂಡ ಬಳಿಕ ಬಾಲುರಾಮ್ ಗೆ ಒಂಟಿ ತನ ಕಾಡ ತೊಡಗಿದೆ ಇದರಿಂದ ಖಿನ್ನತೆಗೆ ಒಳಗಾಗಿದ್ದರು ಈ ವೇಳೆ ಅರೋಗ್ಯ ವಿಚಾರಿಸಲು ಬಂದ ಬಾಲುರಾಮ್ ಅವರ ಸ್ನೇಹಿತನಾದ ವಿಷ್ಣು ಗುಜ್ಜರ್ ಖಿನ್ನತೆಯಿಂದ ಬಳಲುತ್ತಿದ್ದ ತನ್ನ ಸ್ನೇಹಿತನಿಗೆ ಒಂದು ಸಲಹೆ ನೀಡಿದ್ದಾನೆ ಅದೇನೆಂದರೆ ಈಗಿನ ಕಾಲದಲ್ಲಿ ಹೆಚ್ಚಿನವರು ಸೋಶಿಯಲ್ ಮೀಡಿಯಾ ದಲ್ಲಿ ರೀಲ್ಸ್ ಗಳನ್ನು ಮಾಡುತ್ತಾರೆ ಅದರಂತೆ ನೀನು ಕೂಡ ರೀಲ್ಸ್ ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಹಾಕುವ ವಿಧಾನಗಳನ್ನು ಹೇಳಿಕೊಟ್ಟಿದ್ದಾರೆ ಸ್ನೇಹಿತನ ಮಾತು ಕೇಳಿ ಕೆಲ ಸಣ್ಣ ಸಣ್ಣ ತಮಾಷೆಯ ವಿಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುತ್ತಿದ್ದರು ಇದಾದ ಕೆಲವೇ ಸಮಯದಲ್ಲಿ ಬಾಲುರಾಮ್ ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ಹೆಚ್ಚಿನ ಸಂಖ್ಯೆಯಲ್ಲಿ ಫಾಲ್ಲೋ ಮಾಡಲು ಆರಂಭಿಸಿದ್ದರು ಅದರಲ್ಲಿ ಮಹಾರಾಷ್ಟ್ರದ ಶೀಲಾ ಇಂಗ್ಲೆ ಅವರೂ ಒಬ್ಬರಾಗಿದ್ದರು. ಹೀಗೆ ಬಾಲುರಾಮ್ ಅವರು ಹಾಕುತ್ತಿದ್ದ ಎಲ್ಲಾ ರೀಲ್ಸ್ ಗಳಿಗೆ ಶೀಲಾ ಅವರು ಲೈಕ್ ಕೊಡುತ್ತಿದ್ದರು ಹೀಗೆ ಮುಂದುವರೆಯುತ್ತಾ ಇಬ್ಬರೂ ಚಾಟ್ ಮಾಡುವ ಹಂತಕ್ಕೆ ಬಂದಿದ್ದಾರೆ ಇದೇ ಚಾಟ್ ಮುಂದೆ ಇಬ್ಬರ ನಡುವೆ ಪ್ರೀತಿ ಹೆಚ್ಚಾಗಲು ಕಾರಣವಾಗಿದೆ.
ಬಳಿಕ ಇಬ್ಬರೂ ಮದುವೆಯ ನಿರ್ಧಾರಕ್ಕೆ ಬಂದು ಏಪ್ರಿಲ್ 1 ರಂದು ಶೀಲಾ ಅವರು ಮಧ್ಯಪ್ರದೇಶಕ್ಕೆ ಬಂದು ಬಾಲುರಾಮ್ ಜೊತೆ ರಿಜಿಸ್ಟರ್ ಮದುವೆಯಾಗಿದ್ದಾರೆ ಇದಾದ ಬಳಿಕ ಹಿಂದೂ ಸಂಪ್ರದಾಯದಂತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು ಇಬ್ಬರ ವಿವಾಹಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬಂದಿದೆ.
ಇದನ್ನೂ ಓದಿ: CM ಸ್ಥಾನದಿಂದ ಕೇಜ್ರಿವಾಲ್ ವಜಾಗೊಳಿಸಿ-ಪಿಐಎಲ್ ತಿರಸ್ಕರಿಸಿದ ದೆಹಲಿ ಹೈಕೋರ್ಟ್
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.