81.35 ಕೋಟಿ ಜನರಿಗೆ ಕೇಂದ್ರದಿಂದ ಉಚಿತ ಪಡಿತರ


Team Udayavani, Jul 3, 2021, 6:50 AM IST

81.35 crore free rations from the center

ದೇಶದಲ್ಲಿ ಕಳೆದೆರಡು ವರ್ಷಗಳಿಂದ ಕೊರೊನಾದಿಂದಾಗಿ ಅದೆಷ್ಟೋ ಕುಟುಂಬಗಳು ಆಹಾರಕ್ಕಾಗಿ ಪರದಾಡುವಂತಾಗಿದೆ. ದಿನಗೂಲಿಯಿಂದ ಜೀವನ ಸಾಗಿಸುತ್ತಿದ್ದವರಿಗೆ ಈಗ ದುಡಿಮೆಯೂ ಇಲ್ಲ, ತಿನ್ನಲು ಆಹಾರವೂ ಇಲ್ಲ ಎಂಬಂಥ ಸ್ಥಿತಿ ನಿರ್ಮಾಣವಾಗಿದೆ. ಬಡವರ ಸಂಕಷ್ಟಕ್ಕೆ ಸ್ಪಂದಿಸಿರುವ ಕೇಂದ್ರ ಸರಕಾರ ಉಚಿತ ಪಡಿತರ ವಿತರಿಸುವ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಈಗಾಗಲೇ ಪ್ರಕಟಿಸಿರುವಂತೆ ಮುಂದಿನ ದೀಪಾವಳಿ ತನಕ ದೇಶದ 80 ಕೋಟಿ ಜನರಿಗೆ ಉಚಿತ ಪಡಿತರ ಲಭಿಸಲಿದೆ. ಕಳೆದ ವರ್ಷ ಕೊರೊನಾ ಹಿನ್ನೆಲೆಯಲ್ಲಿ ದೇಶಾದ್ಯಂತ ಜಾರಿಗೊಳಿಸಲಾದ ಲಾಕ್‌ಡೌನ್‌ ಅವಧಿಯಲ್ಲಿ 2020ರ ಎಪ್ರಿಲ್‌ನಿಂದ ನವೆಂಬರ್‌ವರೆಗೆ ಉಚಿತ ಪಡಿತರ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಅದರಂತೆಯೇ ಈ ವರ್ಷ ಆರಂಭದಲ್ಲಿ ಮೇಯಿಂದ ಜುಲೈವರೆಗೆ ಬಡವರಿಗೆ ಉಚಿತ ಪಡಿತರ ವಿತರಣೆಯ ಘೋಷಣೆ ಮಾಡಲಾಗಿತ್ತಾದರೂ ಇದೀಗ ಇದನ್ನು ನವೆಂಬರ್‌ವರೆಗೆ ವಿಸ್ತರಿಸಲಾಗಿದ್ದು ಇದಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಕೇಂದ್ರ ಸರಕಾರದ ಅಂದಾಜಿನಂತೆ ಈ ಯೋಜನೆಯಡಿ ದೇಶದ 80 ಕೋಟಿ ಮಂದಿಗೆ ಉಚಿತ ಪಡಿತರ ಲಭಿಸಲಿದೆ. ಅಷ್ಟು ಮಾತ್ರವಲ್ಲದೆ ಈ ಯೋಜನೆಯ ಫ‌ಲಾನುಭವಿಗಳ ಆಯ್ಕೆ ಸಂಬಂಧ ಕೇಂದ್ರ ಸರಕಾರ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಸಂಬಂಧಪಟ್ಟಂತೆ ಪ್ರತ್ಯೇಕ ಮಾನದಂಡವನ್ನು ರೂಪಿಸಿದೆ.

ಅಂಕಿಅಂಶಗಳ ಪ್ರಕಾರ ಯೋಜ ನೆಯ ಗರಿಷ್ಠ ಪ್ರಯೋಜನವನ್ನು ಉತ್ತರ ಪ್ರದೇಶದ ಜನತೆ ಪಡೆಯಲಿದೆ. ಈ ರಾಜ್ಯದ ಸುಮಾರು 20 ಕೋಟಿ ಜನಸಂಖ್ಯೆ ಯಲ್ಲಿ 15.21 ಕೋಟಿ ಅಂದರೆ ಸುಮಾರು ಶೇ. 76ರಷ್ಟು ಜನರು ಈ ಯೋಜನೆಯ ಫ‌ಲಾನುಭವಿಗಳಾಗಿದ್ದಾರೆ. ಇವರಿಗೆ ಸರ ಕಾರ ಪ್ರತೀ ತಿಂಗಳು 5 ಕೆ.ಜಿ. ಅಕ್ಕಿ ಅಥವಾ ಗೋಧಿ ನೀಡುತ್ತಿದೆ.

81.35 ಕೋಟಿಗೆ ಏರಿಕೆ
ಪ್ರಧಾನ್‌ ಮಂತ್ರಿ ಗರೀಬ್‌ ಕಲ್ಯಾಣ್‌ ಅನ್ನ ಯೋಜನೆಯಡಿ ಸರಕಾರ ಉಚಿತ ಪಡಿತರ ನೀಡುತ್ತಿದ್ದು ಬಡತನ ರೇಖೆಗಿಂತ ಕೆಳಗಿರುವವರ ಜತೆಯಲ್ಲಿ ಕೋವಿಡ್‌ನಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವವರನ್ನು ಸ್ಥಳೀಯ ಮಟ್ಟದಲ್ಲಿ ಗುರುತಿಸಿ, ಪರೀಶಿಲನೆ ನಡೆಸಿ ಅವರನ್ನೂ ಈ ಯೋಜನೆಯ ಫ‌ಲಾನುಭವಿಗಳ ಪಟ್ಟಿಗೆ ಸೇರ್ಪಡೆಗೊಳಿ ಸಲಾಗಿದೆ. ಇದರಿಂದಾಗಿ ಪ್ರಸಕ್ತ ವರ್ಷ ಉಚಿತ ಪಡಿತರ ಪಡೆಯಲಿರುವ ಫ‌ಲಾನುಭವಿಗಳ ಸಂಖ್ಯೆ 81.35 ಕೋಟಿಗೆ ಏರಿಕೆಯಾಗಿದೆ.

ಸಪ್ತ ರಾಜ್ಯಗಳ ಚುನಾವಣೆಯತ್ತ ದೃಷ್ಟಿ?
2022ರಲ್ಲಿ ದೇಶದ ಏಳು ರಾಜ್ಯಗಳ ವಿಧಾನ ಸಭೆಗಳಿಗೆ ಚುನಾವಣೆ ನಡೆಯಲಿದೆ. ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಗುಜರಾತ್‌, ಮಣಿಪುರ, ಪಂಜಾಬ್‌, ಹಿಮಾಚಲಪ್ರದೇಶ ವಿಧಾನ ಸಭೆಗಳಿಗೆ ಚುನಾವಣೆ ನಡೆಯಲಿದೆ. ಇದೀಗ ಕೇಂದ್ರ ಸರಕಾರ ಘೋಷಿಸಿರುವ ಉಚಿತ ಪಡಿತರ ಯೋಜನೆಯಡಿಯಲ್ಲಿ ಈ ರಾಜ್ಯಗಳಿಗೆ ಸೇರಿದ 20 ಕೋಟಿಗೂ ಅಧಿಕ ಮಂದಿಗೆ ಉಚಿತ ಪಡಿತರ ಲಭಿಸಲಿದೆ. ಸದ್ಯ ಕೋವಿಡ್‌ನ‌ 2ನೇ ಅಲೆ ದೇಶದ ಬಹುತೇಕ ರಾಜ್ಯಗಳಲ್ಲಿ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಮತ್ತು ಇನ್ನಿತರ ಕಠಿನ ನಿರ್ಬಂಧಗಳನ್ನು ಸಡಿಲಿಸಿ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿದೆ. ಇದರ ಹೊರತಾಗಿಯೂ ಮುಂಬರುವ ವಿಧಾನ ಸಭೆ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿ ಕೊಂಡೇ ಕೇಂದ್ರ ಸರಕಾರ ಉಚಿತ ಪಡಿತರ ಯೋಜನೆಯನ್ನು ನವೆಂಬರ್‌ವರೆಗೆ ಮುಂದುವರಿಸುವ ತೀರ್ಮಾನ ಕೈಗೊಂಡಿದೆ ಎಂದು ರಾಜಕೀಯ ವಲಯ ದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.