ಆಸ್ತಿ ವಿವರ ಸಲ್ಲಿಸಿಲ್ಲ ರಾಜ್ಯದ 82 ಐಎಎಸ್ ಅಧಿಕಾರಿಗಳು
Team Udayavani, May 22, 2017, 12:08 PM IST
ಹೊಸದಿಲ್ಲಿ: ಕರ್ನಾಟಕದ 82 ಮಂದಿ ಸೇರಿದಂತೆ ದೇಶದ 1800ಕ್ಕೂ ಹೆಚ್ಚು ಐಎಎಸ್ ಅಧಿಕಾರಿಗಳು ನಿಗದಿತ ಅವಧಿಯೊಳಗೆ ತಮ್ಮ ಸ್ಥಿರಾಸ್ತಿ ವಿವರವನ್ನು ಸಲ್ಲಿಸಲು ವಿಫಲರಾಗಿದ್ದಾರೆ. ಕೇಂದ್ರ ಸಿಬಂದಿ ಮತ್ತು ತರಬೇತಿ ಸಚಿವಾಲಯವೇ ಈ ಮಾಹಿತಿ ನೀಡಿದೆ.
ಕೇಂದ್ರ ಸರಕಾರದ ಆದೇಶದ ಪ್ರಕಾರ ದೇಶದ ಎಲ್ಲ ಐಎಎಸ್ ಅಧಿಕಾರಿಗಳು ಜನವರಿ ಅಂತ್ಯದವರೆಗಿನ ತಮ್ಮ ಸ್ಥಿರಾಸ್ತಿ ವಿವರಗಳನ್ನು ವರ್ಷಾಂತ್ಯದ ವೇಳೆಗೆ ಕಡ್ಡಾಯವಾಗಿ ಸಲ್ಲಿಸಬೇಕು. ಆದರೆ ಸಚಿವಾಲಯ ನೀಡಿರುವ ಮಾಹಿತಿ ಪ್ರಕಾರ, 1856 ಮಂದಿ ಐಎಎಸ್ ಅಧಿಕಾರಿಗಳು 2016ನೇ ಸಾಲಿನ ತಮ್ಮ ಆಸ್ತಿ ವಿವರವನ್ನು ಈವರೆಗೂ ಸಲ್ಲಿಸಿಲ್ಲ.
ಈ ಪೈಕಿ ಉತ್ತರ ಪ್ರದೇಶ ಕೇಡರ್ ಮುಂಚೂಣಿಯಲ್ಲಿದ್ದು, ಇಲ್ಲಿನ 255 ಅಧಿಕಾರಿಗಳು ವರದಿ ಸಲ್ಲಿಸಿಲ್ಲ. ಉಳಿದಂತೆ ಕರ್ನಾಟಕದ 82, ಮಧ್ಯಪ್ರದೇಶದ 118, ಪಶ್ಚಿಮ ಬಂಗಾಲದ 109, ಅರುಣಾಚಲಪ್ರದೇಶ, ಗೋವಾ, ಮಿಜೋರಾಮ್ ಕೇಂದ್ರಾಡಳಿತ ಪ್ರದೇಶಗಳ ಕೇಡರ್ನ 104 ಅಧಿಕಾರಿಗಳು ಮಾಹಿತಿ ಸಲ್ಲಿಸಿಲ್ಲ.
ಹೀಗೆ ಮಾಹಿತಿ ಸಲ್ಲಿಸದ ಅಧಿಕಾರಿಗಳ ಭಡ್ತಿ ಮತ್ತಿತರ ವೃತ್ತಿ ಸಂಬಂಧಿ ಅಂಶಗಳನ್ನು ತಡೆಹಿಡಿಯಲು ಸರಕಾರಕ್ಕೆ ಅವಕಾಶವಿದೆ. ನಿಯಮಗಳ ಪ್ರಕಾರ, ದೇಶದ ಎಲ್ಲ ನಾಗರಿಕ ಸೇವಾ ಅಧಿಕಾರಿಗಳು ಪ್ರತಿ ವರ್ಷ ತಮ್ಮ ಸ್ಥಿರಾಸ್ತಿ ಹಾಗೂ ತಮ್ಮ ಭೋಗ್ಯದಲ್ಲಿರುವ ವಸ್ತುಗಳ ವಿವರವನ್ನು ಸರಕಾರಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು