ಹೆಚ್ಚಿನ ರೈತ ಸಂಘಟನೆಗಳಿಂದ ಕೃಷಿ ಕಾಯ್ದೆಗಳಿಗೆ ಬೆಂಬಲ
ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ಸಮಿತಿಯ ವರದಿ
Team Udayavani, Mar 22, 2022, 7:35 AM IST
ನವದೆಹಲಿ: “ದೇಶದ 3.3 ಕೋಟಿ ರೈತರನ್ನು ಒಳಗೊಂಡ 61 ಸಂಘಟನೆಗಳು ಕೇಂದ್ರದ ಮೂರೂ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದವು.’ ಹೀಗೆಂದು ಹೇಳಿರುವುದು ವಿವಾದಾತ್ಮಕ ಕೃಷಿ ಕಾಯ್ದೆಗಳ ಪರಿಶೀಲನೆಗಾಗಿ ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ಸಮಿತಿ.
ನಾವು ಸಂಪರ್ಕಿಸಿ ಸಮಾಲೋಚನೆ ನಡೆಸಿರುವ ರೈತರ ಪೈಕಿ ಬಹುತೇಕ ರೈತ ಸಂಘಟನೆಗಳು ಕೇಂದ್ರದ ಕಾನೂನುಗಳ ಪರವೇ ಮಾತನಾಡಿವೆ ಎಂದು ಈ ಸಮಿತಿಯ ವರದಿಯಲ್ಲಿ ಉಲ್ಲೇಖೀಸಲಾಗಿದೆ.
ಕಾಯ್ದೆಗೆ ದೇಶಾದ್ಯಂತದ ಅನ್ನದಾತರಿಂದ ಭಾರೀ ವಿರೋಧ ವ್ಯಕ್ತವಾಗಿ, ಒಂದು ವರ್ಷಕ್ಕೂ ಹೆಚ್ಚು ಕಾಲ ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸಿದ ಬಳಿಕ 2021ರ ನವೆಂಬರ್ನಲ್ಲಿ ಮೂರೂ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದು ಪ್ರಧಾನಿ ಮೋದಿ ಘೋಷಿಸಿದ್ದರು.
ಸುಪ್ರೀಂ ಕೋರ್ಟ್ಗೂ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾಯ್ದೆಗಳ ಪರಿಶೀಲನೆಗಾಗಿ ನ್ಯಾಯಾಲಯವು ಮೂವರು ಸದಸ್ಯರ ಸಮಿತಿಯನ್ನು ರಚಿಸಿತ್ತು.
ಸೋಮವಾರ ಈ ವರದಿ ಬಿಡುಗಡೆ ಮಾಡಿ ಮಾತನಾಡಿರುವ ಈ ಸಮಿತಿಯ ಸದಸ್ಯರಾಗಿರುವ ಅನಿಲ್ ಘನ್ವತ್, “ಪ್ರತಿಭಟನಾನಿರತರು ಸೇರಿದಂತೆ 266 ರೈತ ಸಂಘಟನೆಗಳನ್ನು ಭೇಟಿಯಾಗಿ ನಾವು ಅಭಿಪ್ರಾಯ ಸಂಗ್ರಹಿಸಿದ್ದೆವು.
ಇದನ್ನೂ ಓದಿ:ಮಾ.29, 30ಕ್ಕೆ ವಿಧಾನಸಭೆಯಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ ಚರ್ಚೆ
ಜತೆಗೆ, ಅದಕ್ಕೆಂದೇ ರಚಿಸಲಾಗಿದ್ದ ಪೋರ್ಟಲ್ಗೆ 19,027 ಪ್ರತಿಕ್ರಿಯೆಗಳು, 1520 ಇಮೇಲ್ಗಳು ಬಂದಿದ್ದವು. 3.83 ಕೋಟಿ ರೈತರನ್ನು ಪ್ರತಿನಿಧಿಸುವ 73 ಸಂಘಟನೆಗಳನ್ನು ನಾವು ನೇರವಾಗಿ ಅಥವಾ ವಿಡಿಯೋ ಲಿಂಕ್ ಮೂಲಕ ಸಂಪರ್ಕಿಸಿದ್ದೆವು. 73ರ ಪೈಕಿ 61 ಸಂಘಟನೆಗಳು ಕೃಷಿ ಕಾಯ್ದೆಗಳನ್ನು ಬೆಂಬಲಿಸಿದವು. 51 ಲಕ್ಷ ರೈತರನ್ನು ಒಳಗೊಂಡ 4 ಸಂಘಟನೆಗಳು ವಿರೋಧಿಸಿದವು. 3.6 ಲಕ್ಷ ರೈತರನ್ನು ಒಳಗೊಂಡ 7 ಸಂಘಟನೆಗಳು ಕಾಯ್ದೆಗೆ ತಿದ್ದುಪಡಿ ಬೇಕೆಂದು ಕೇಳಿಕೊಂಡವು’ ಎಂದಿದ್ದಾರೆ.
ಆದರೆ, ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಇದೇ ಸಮಿತಿಯ ಇನ್ನಿಬ್ಬರು ಸದಸ್ಯರಾದ ಕೃಷಿ ಅರ್ಥಶಾಸ್ತ್ರಜ್ಞ, ಕೃಷಿ ವೆಚ್ಚ ಮತ್ತು ದರಗಳ ಆಯೋಗದ ಮಾಜಿ ಮುಖ್ಯಸ್ಥ ಅಶೋಕ್ ಗುಲಾಟಿ ಹಾಗೂ ಅಂತಾರಾಷ್ಟ್ರೀಯ ಆಹಾರ ನೀತಿ ಸಂಶೋಧನಾ ಸಂಸ್ಥೆಯ ದಕ್ಷಿಣ ಏಷ್ಯಾ ನಿರ್ದೇಶಕ ಹಾಗೂ ಕೃಷಿ ಅರ್ಥಶಾಸ್ತ್ರಜ್ಞರಾದ ಡಾ. ಪ್ರಮೋದ್ ಕುಮಾರ್ ಜೋಷಿ ಗೈರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್