ತ.ನಾಡಿಗೆ 9.19 ಟಿಎಂಸಿ ಅಡಿ ನೀರು ಬಿಡಲು ಆದೇಶ
Team Udayavani, May 29, 2019, 6:00 AM IST
ಹೊಸದಿಲ್ಲಿ/ಬೆಂಗಳೂರು: ಕರ್ನಾಟಕದಿಂದ ತಮಿಳುನಾಡಿಗೆ ನೀಡಬೇಕಿರುವ ಕಾವೇರಿ ನೀರಿನ ಜೂನ್ ತಿಂಗಳ ಕೋಟಾದಡಿ ಬಿಳಿಗುಂಡ್ಲುವಿನಲ್ಲಿರುವ ಕಾವೇರಿ ಜಲಾಶಯದಿಂದ ಮೆಟ್ಟೂರು ಅಣೆಕಟ್ಟಿಗೆ 9.19 ಟಿಎಂಸಿ ಅಡಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನದಿ ನೀರು ನಿರ್ವಹಣ ಪ್ರಾಧಿಕಾರ (ಸಿಡಬ್ಲ್ಯುಎಂಎ) ಆದೇಶಿಸಿದೆ. ಪ್ರಾಧಿಕಾರದ ಆದೇಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಸರಕಾರ, ಜೂನ್ನಲ್ಲಿ ಮಳೆ ಬಂದರಷ್ಟೇ ನೀರು ಬಿಡುತ್ತೇವೆ. ಇಲ್ಲದಿದ್ದರೆ ಸಂಕಷ್ಟ ಸೂತ್ರ ಅನುಸರಿಸುತ್ತೇವೆ ಎಂದಿದೆ.
ಮಂಗಳವಾರ ಸಿಡಬ್ಲ್ಯುಎಂಎ ಅಧ್ಯಕ್ಷ ಎಸ್. ಮಸೂದ್ ಹುಸೇನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನೀರು ಬಿಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಜೂನ್ನಲ್ಲಿ ವಾಡಿಕೆಯಂತೆ ಮಳೆಯಾಗಿ, ಕಾವೇರಿ ಜಲಾನಯನ ಪ್ರದೇಶಗಳಲ್ಲಿನ ಜಲಾಶಯಗಳ ಒಳಹರಿವು ಹೆಚ್ಚಾದರೆ ಮಾತ್ರವೇ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಪ್ರಾಧಿಕಾರ ಹೇಳಿದೆ.
ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಸಭೆಯ ಬಳಿಕ ಮಾತನಾಡಿದ ಹುಸೇನ್, ಇದೊಂದು ಸರ್ವಾನುಮತದ ತೀರ್ಮಾನ. ಈ ಬಾರಿ ವಾಡಿಕೆಯಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಸಾಮಾನ್ಯದಂತೆ ಮಳೆಯಾಗಿ ಕರ್ನಾಟಕದ ಜಲಾಶಯಗಳಲ್ಲಿ ಒಳಹರಿವು ಹೆಚ್ಚಾದರೆ, ತಮಿಳುನಾಡಿಗೆ ಜೂನ್ ಕೋಟಾದಡಿಯ 9.19 ಟಿಎಂಸಿ ನೀರು ಬಿಡುಗಡೆ ಮಾಡಬೇಕು ಎಂದು ಸಿಡಬ್ಲ್ಯೂಎಂಎ ಸೂಚಿಸಿದೆ. 15 ದಿನಗಳ ಹಿಂದೆ ನಡೆದ ಸಭೆಯಲ್ಲೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಆಗ ಕರ್ನಾಟಕ ಸರಕಾರವು ಕೆಲವು ದಿನಗಳ ಕಾಲಾವಕಾಶವನ್ನು ಕೋರಿದ್ದರಿಂದ ಆದೇಶ ಜಾರಿಯನ್ನು ಮುಂದೂಡಲಾಗಿತ್ತು ಎಂದರು.
ಮಂಗಳವಾರ ನಡೆದ ಸಭೆಯಲ್ಲಿ ಕರ್ನಾಟಕ ಸರಕಾರದ ಮೇಕೆದಾಟು ಯೋಜನೆಯ ಬಗ್ಗೆ ಚರ್ಚಿಸಲಿಲ್ಲ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ತಮಿಳುನಾಡು ಸರಕಾರದ ಪ್ರಧಾನ ಕಾರ್ಯದರ್ಶಿ ಎಸ್.ಕೆ. ಪ್ರಭಾಕರನ್ ತಿಳಿಸಿದ್ದಾರೆ. ಮೇಕೆದಾಟು ವಿಚಾರ ಸದ್ಯಕ್ಕೆ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವುದರಿಂದ ಈ ಕುರಿತಂತೆ ಸಭೆಯಲ್ಲಿ ಚರ್ಚಿಸಲಿಲ್ಲ. ತಮಿಳುನಾಡಿನ ಕುರುವೈ ಬೆಳೆಗಳಿಗಾಗಿ ನೀರು ಬೇಕೆಂದು ಪ್ರಾಧಿಕಾರವನ್ನು ಪ್ರಾರ್ಥಿಸಿದ್ದವು. ಅದಕ್ಕೆ ಪ್ರಾಧಿಕಾರ ಸ್ಪಂದಿಸಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?