
ತನ್ನ 9 ನೇ ವಯಸ್ಸಿಗೆ ಸನ್ಯಾಸತ್ವ ಸ್ವೀಕರಿಸಿದ ಗುಜರಾತ್ ನ ವಜ್ರ ವ್ಯಾಪಾರಿಯ ಮಗಳು
ತಂದೆಯ ಕೋಟ್ಯಂತರ ರೂ. ಮೌಲ್ಯದ ಆಸ್ತಿ ತ್ಯಜಿಸಿ ಸನ್ಯಾಸತ್ವದ ಕಡೆ ಮಗಳ ಒಲವು
Team Udayavani, Jan 18, 2023, 5:49 PM IST

ಗುಜರಾತ್: ಗುಜರಾತ್ ಮೂಲದ ವಜ್ರದ ವ್ಯಾಪಾರಿಯ 9 ವರ್ಷದ ಮಗಳು ಭೌತಿಕ ಜೀವನವನ್ನು ತ್ಯಜಿಸಿ ಬುಧವಾರ ಸನ್ಯಾಸ ಜೀವನವನ್ನು ಸ್ವೀಕರಿಸಿದ್ದಾಳೆ.
9 ವರ್ಷದ ದೇವಾಂಶಿ ಸನ್ಯಾಸ ಸ್ವೀಕರಿಸಿದ ಬಾಲಕಿ, ಈಕೆಯ ತಂದೆ ಸೂರತ್ನ ಪ್ರಸಿದ್ಧ ಡೈಮಂಡ್ ಪಾಲಿಶಿಂಗ್ ಮತ್ತು ರಫ್ತು ಸಂಸ್ಥೆಯಾದ ಸಾಂಘ್ವಿ ಮತ್ತು ಸನ್ಸ್ನ ಮಾಲೀಕರಾಗಿದ್ದಾರೆ. ಈ ಕಂಪನಿಯು ಸುಮಾರು ಮೂರು ದಶಕಗಳಿಂದ ಸೂರತ್ನಲ್ಲಿ ಪ್ರಾಬಲ್ಯವನ್ನು ಹೊಂದಿದೆ.
ವಜ್ರದ ವ್ಯಾಪಾರಿಯಾದ ಧನೇಶ್ ಮತ್ತು ಅಮಿ ಸಾಂಘ್ವಿ ಅವರಿಗೆ ಇಬ್ಬರು ಪುತ್ರಿಯರಿದ್ದು, ಅವರಲ್ಲಿ ಹಿರಿಯ ಪುತ್ರಿಯಾದ ದೇವಾಂಶಿ ಸನ್ಯಾಸ ದೀಕ್ಷೆ ಸ್ವೀಕರಿಸಿದವಳು. ಜೈನ ಸನ್ಯಾಸಿ ಆಚಾರ್ಯ ವಿಜಯ್ ಕೀರ್ತಿಶ್ಸೂರಿ ಅವರ ಸಮ್ಮುಖದಲ್ಲಿ ಸನ್ಯಾಸ ದೀಕ್ಷೆಯನ್ನು ಪಡೆದುಕೊಂಡಿದ್ದಾಳೆ. ಸೂರತ್ನ ವೆಸು ಪ್ರದೇಶದಲ್ಲಿ ಸನ್ಯಾಸ ದೀಕ್ಷೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಅಲ್ಲಿ ಜೈನ ಸನ್ಯಾಸಿಗಳನ್ನು ಹೊರತುಪಡಿಸಿ ನೂರಾರು ಜನರು ಉಪಸ್ಥಿತರಿದ್ದರು. ದೀಕ್ಷಾ ತಪಸ್ವಿ ಜೀವನದ ಪ್ರತೀಕವಾಗಿದ್ದು, ಇದನ್ನು 9 ವರ್ಷದ ದೇವಾಂಶಿ ಒಪ್ಪಿಕೊಂಡಿದ್ದಾಳೆ ಎಂದು ದೇವಾಂಶಿ ತಂದೆ ಹೇಳಿಕೊಂಡಿದ್ದಾರೆ.
ವಜ್ರದ ವ್ಯಾಪಾರಿಯ ಕುಟುಂಬ ಸ್ನೇಹಿತ ನೀರವ್ ಶಾ, ದೇವಾಂಶಿ ಚಿಕ್ಕ ವಯಸ್ಸಿನಲ್ಲೇ ಆಧ್ಯಾತ್ಮಿಕ ಜೀವನದ ಕಡೆಗೆ ಒಲವು ತೋರುತ್ತಿದ್ದರು ಎಂದು ಹೇಳಿದರು. ಆದ್ದರಿಂದ ಅವರು ಇತರ ಸನ್ಯಾಸಿಗಳೊಂದಿಗೆ ಸೇರಿಕೊಂಡರು ಕಾಲ್ನಡಿಗೆಯಲ್ಲಿ ಸುಮಾರು 700 ಕಿಮೀ ಪ್ರಯಾಣಿಸಿದ್ದರು ಆದರೆ ಈಗ ಅಧಿಕೃತವಾಗಿ ಸನ್ಯಾಸಿ ಜೀವನವನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಉಳ್ಳಾಲ ಇನ್ಸ್ ಪೆಕ್ಟರ್ ಇನ್ಸ್ಟಾ ಗ್ರಾಮ್ ಹ್ಯಾಕ್: ನಕಲಿ ಖಾತೆಯಿಂದ ಹಣಕ್ಕಾಗಿ ಬೇಡಿಕೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!

Viral Video: ಯುವತಿಯನ್ನು ಅಪಹರಣ ಮಾಡಿ ಬಲವಂತವಾಗಿ ಸಪ್ತಪದಿ ವಿಧಾನ ನೆರವೇರಿಸಿದ ಯುವಕ.!

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಮಗು

ನಕಲಿ ಬ್ಯಾಂಕ್ ಅಧಿಕಾರಿಗಳ “KYC ಅಪ್ಡೇಟ್” ಖೆಡ್ಡಾ !
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ಮನೆ ಯಜಮಾನಿ ಯಾರು ಎಂದು ಮನೆಯವರೇ ತೀರ್ಮಾನ ಮಾಡಬೇಕು: ಡಿ.ಕೆ.ಶಿವಕುಮಾರ್

ದ.ಕ ಜಿಲ್ಲೆಯ ಯಾವ ಮೂಲೆಗೂ ನೀರಿನ ಸಮಸ್ಯೆ ಆಗದಂತೆ ನೋಡುತ್ತೇವೆ: ಜಿಲ್ಲಾಧಿಕಾರಿ

Cardiologist: ಸಾವಿರಾರು ಹೃದಯ ಸಂಬಂಧಿ ಸರ್ಜರಿ ಮಾಡಿದ್ದ ಖ್ಯಾತ ವೈದ್ಯ ಹೃದಯಾಘಾತದಿಂದ ನಿಧನ

Shivamogga: ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಪೋಸ್ಟ್ ಮಾರ್ಟಮ್ ಮಾಡಿದ ವೈದ್ಯರು

ಜೀವಂತವಾಗಿದ್ದರೂ ದಾಖಲೆಯಲ್ಲಿ ʼಮೃತ ವ್ಯಕ್ತಿʼ: ಎಡವಟ್ಟಿನಿಂದ ವೃದ್ಧಾಪ್ಯ ವೇತನವೇ ಗೋತಾ.!