ತನ್ನ 9 ನೇ ವಯಸ್ಸಿಗೆ ಸನ್ಯಾಸತ್ವ ಸ್ವೀಕರಿಸಿದ ಗುಜರಾತ್ ನ ವಜ್ರ ವ್ಯಾಪಾರಿಯ ಮಗಳು
ತಂದೆಯ ಕೋಟ್ಯಂತರ ರೂ. ಮೌಲ್ಯದ ಆಸ್ತಿ ತ್ಯಜಿಸಿ ಸನ್ಯಾಸತ್ವದ ಕಡೆ ಮಗಳ ಒಲವು
Team Udayavani, Jan 18, 2023, 5:49 PM IST
ಗುಜರಾತ್: ಗುಜರಾತ್ ಮೂಲದ ವಜ್ರದ ವ್ಯಾಪಾರಿಯ 9 ವರ್ಷದ ಮಗಳು ಭೌತಿಕ ಜೀವನವನ್ನು ತ್ಯಜಿಸಿ ಬುಧವಾರ ಸನ್ಯಾಸ ಜೀವನವನ್ನು ಸ್ವೀಕರಿಸಿದ್ದಾಳೆ.
9 ವರ್ಷದ ದೇವಾಂಶಿ ಸನ್ಯಾಸ ಸ್ವೀಕರಿಸಿದ ಬಾಲಕಿ, ಈಕೆಯ ತಂದೆ ಸೂರತ್ನ ಪ್ರಸಿದ್ಧ ಡೈಮಂಡ್ ಪಾಲಿಶಿಂಗ್ ಮತ್ತು ರಫ್ತು ಸಂಸ್ಥೆಯಾದ ಸಾಂಘ್ವಿ ಮತ್ತು ಸನ್ಸ್ನ ಮಾಲೀಕರಾಗಿದ್ದಾರೆ. ಈ ಕಂಪನಿಯು ಸುಮಾರು ಮೂರು ದಶಕಗಳಿಂದ ಸೂರತ್ನಲ್ಲಿ ಪ್ರಾಬಲ್ಯವನ್ನು ಹೊಂದಿದೆ.
ವಜ್ರದ ವ್ಯಾಪಾರಿಯಾದ ಧನೇಶ್ ಮತ್ತು ಅಮಿ ಸಾಂಘ್ವಿ ಅವರಿಗೆ ಇಬ್ಬರು ಪುತ್ರಿಯರಿದ್ದು, ಅವರಲ್ಲಿ ಹಿರಿಯ ಪುತ್ರಿಯಾದ ದೇವಾಂಶಿ ಸನ್ಯಾಸ ದೀಕ್ಷೆ ಸ್ವೀಕರಿಸಿದವಳು. ಜೈನ ಸನ್ಯಾಸಿ ಆಚಾರ್ಯ ವಿಜಯ್ ಕೀರ್ತಿಶ್ಸೂರಿ ಅವರ ಸಮ್ಮುಖದಲ್ಲಿ ಸನ್ಯಾಸ ದೀಕ್ಷೆಯನ್ನು ಪಡೆದುಕೊಂಡಿದ್ದಾಳೆ. ಸೂರತ್ನ ವೆಸು ಪ್ರದೇಶದಲ್ಲಿ ಸನ್ಯಾಸ ದೀಕ್ಷೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಅಲ್ಲಿ ಜೈನ ಸನ್ಯಾಸಿಗಳನ್ನು ಹೊರತುಪಡಿಸಿ ನೂರಾರು ಜನರು ಉಪಸ್ಥಿತರಿದ್ದರು. ದೀಕ್ಷಾ ತಪಸ್ವಿ ಜೀವನದ ಪ್ರತೀಕವಾಗಿದ್ದು, ಇದನ್ನು 9 ವರ್ಷದ ದೇವಾಂಶಿ ಒಪ್ಪಿಕೊಂಡಿದ್ದಾಳೆ ಎಂದು ದೇವಾಂಶಿ ತಂದೆ ಹೇಳಿಕೊಂಡಿದ್ದಾರೆ.
ವಜ್ರದ ವ್ಯಾಪಾರಿಯ ಕುಟುಂಬ ಸ್ನೇಹಿತ ನೀರವ್ ಶಾ, ದೇವಾಂಶಿ ಚಿಕ್ಕ ವಯಸ್ಸಿನಲ್ಲೇ ಆಧ್ಯಾತ್ಮಿಕ ಜೀವನದ ಕಡೆಗೆ ಒಲವು ತೋರುತ್ತಿದ್ದರು ಎಂದು ಹೇಳಿದರು. ಆದ್ದರಿಂದ ಅವರು ಇತರ ಸನ್ಯಾಸಿಗಳೊಂದಿಗೆ ಸೇರಿಕೊಂಡರು ಕಾಲ್ನಡಿಗೆಯಲ್ಲಿ ಸುಮಾರು 700 ಕಿಮೀ ಪ್ರಯಾಣಿಸಿದ್ದರು ಆದರೆ ಈಗ ಅಧಿಕೃತವಾಗಿ ಸನ್ಯಾಸಿ ಜೀವನವನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಉಳ್ಳಾಲ ಇನ್ಸ್ ಪೆಕ್ಟರ್ ಇನ್ಸ್ಟಾ ಗ್ರಾಮ್ ಹ್ಯಾಕ್: ನಕಲಿ ಖಾತೆಯಿಂದ ಹಣಕ್ಕಾಗಿ ಬೇಡಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?