ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ
Team Udayavani, May 18, 2022, 8:52 PM IST
ಪಣಜಿ: ಸುಂದರವಾದ ಮರಳನ್ನು ಹೊಂದಿದ ಬೀಚ್ನಿಂದಾಗಿ ಪ್ರಸಿದ್ಧಿ ಪಡೆದಿದ್ದ ಬಾಣಾವಲಿಯಿಂದ ಕೆಳಶಿ ವರೆಗಿನ ಬೀಚ್ ತೈಲ ಸೋರಿಕೆಯಿಂದಾಗಿ ಕಪ್ಪಾಗಿದೆ. ಇದರಿಂದಾಗಿ ಈ ಬೀಚ್ಗಳಲ್ಲಿ ಸದ್ಯ ಓಡಾಡುವುದೇ ಕಷ್ಟಕರ ಎಂಬಂತಾಗಿದೆ. ಇದರಿಂದಾಗಿ ಈ ಬೀಚ್ಗಳಿಗೆ ಪ್ರವಾಸಿಗರು ತೆರಳಲು ಹಿಂದೇಟು ಹಾಕುತ್ತಿದ್ದಾರೆ.
ಆಳ ಸಮುದ್ರದಲ್ಲಿ ಹಡಗು ಮತ್ತು ಬೋಟ್ಗಳಿಂದಾಗಿ ಭಾರಿ ಪ್ರಮಾಣದಲ್ಲಿ ತೈಲ ಸೋರಿಕೆಯಾಗುತ್ತಿರುವುದು ಇದರಿಂದ ಸ್ಪಷ್ಟವಾದಂತಾಗಿದೆ. ಇದರಿಂದಾಗಿ ಸಮುದ್ರದಲ್ಲಿರುವ ಜಲಚರಗಳಿಗೆ ಹೆಚ್ಚಿನ ತೊಂದರೆಯುಂಟಾಗಲಿದೆ ಎಂದು ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ಪ್ರವಾಸೀ ಸೀಜನ್ ಆಗಿದ್ದರೂ ಕೂಡ ಈ ಬೀಚ್ಗಳಲ್ಲಿ ಹಡಗುಗಳ ತೈಲ ಸೋರಿಕೆಯ ಪರಿಣಾಮ ಪ್ರವಾಸಿಗರ ಮೇಲೆ ಬೀಳುವಂತಾಗಿದೆ.
ಇದನ್ನೂ ಓದಿ : ಶಿವಲಿಂಗದ ಕುರಿತು ಅವಹೇಳನಕಾರಿ ಟ್ವೀಟ್ : ಎಐಎಂಐಎಂ ನಾಯಕ ಅರೆಸ್ಟ್
ಈ ಕುರಿತು ಗೋವಾ ಶಾಕ್ ಮಾಲೀಕರ ಸಂಘದ ಅಧ್ಯಕ್ಷ ಕ್ರೂಜ್ ಕಾರ್ದೋಜ್ ಪ್ರತಿಕ್ರಿಯೆ ನೀಡಿ, ಕಳೆದ ಕೆಲವು ವರ್ಷಗಳಿಂದ ಕರಾವಳಿಗೆ ಕರಾವಳಿಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು ತೈಲಸೋರಿಕೆ ಘಟನೆಯು ಪ್ರವಾಸೋದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ