ಕಾಣೆಯಾದ 76 ಮಕ್ಕಳನ್ನು ಪತ್ತೆಹಚ್ಚಿ ವಿಶೇಷ ಭಡ್ತಿ ಪಡೆದ ಮೊದಲ ಪೊಲೀಸ್ ಹೆಡ್ ಕಾನ್ಸ್ ಟೇಬಲ್


Team Udayavani, Nov 19, 2020, 7:12 PM IST

police

ನವದೆಹಲಿ: ಕಾಣೆಯಾಗಿದ್ದ 76 ಮಕ್ಕಳನ್ನು ಪತ್ತೆಹಚ್ಚಿ ದೆಹಲಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಸೀಮಾ ಡಾಕಾ ಔಟ್ ಆಫ್ ಟರ್ನ್ ಪ್ರಮೋಶನ್’ ಅಡಿಯಲ್ಲಿ ವಿಶೇಷ ಭಡ್ತಿ ಪಡೆದ ಮೊದಲ ಮಹಿಳಾ ಪೊಲೀಸ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಸೀಮಾ ಡಾಕಾ  ಸಮಯ್ ಪುರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸೀಮಾ, ಮಕ್ಕಳನ್ನು ಮತ್ತೆ ಪೋಷಕರೆಡೆಗೆ ಸೇರಿಸಿರುವುದು ನನಗೆ ಅತೀವ ಸಂತೋಷ ತಂದು ಕೊಟ್ಟಿದೆ. ನನ್ನ ಕೆಲಸವನ್ನು ಗುರುತಿಸಿ ಗೌರವಿಸಿರುವುದು, ಇನ್ನು ಉತ್ತಮ ಸಾಧನೆ ಮಾಡಲು ಸಹಕಾರಿಯಾಗಿದೆ ಎಂದಿದ್ದಾರೆ.

ಅಗಸ್ಟ್ 7 ರಂದು ದೆಹಲಿ ಪೊಲೀಸ್ ಕಮಿಷನರ್ ಆಗಿರುವ ಎಸ್ ಎನ್ ಶ್ರೀವಾತ್ಸವ, ಯಾವುದೇ ಕಾನ್ಸ್ ಟೇಬಲ್ ಅಥವಾ ಹೆಡ್ ಕಾನ್ಸ್ ಟೇಬಲ್, ಕಾಣೆಯಾಗಿರುವ 14 ವರ್ಷದೊಳಗಿನ 50ಕ್ಕಿಂತ ಹೆಚ್ಚು ಮಕ್ಕಳನ್ನು 12 ತಿಂಗಳೊಳಗಾಗಿ ಪತ್ತೆಹಚ್ಚಿದರೇ, ಔಟ್ ಆಪ್ ಟರ್ನ್ ಪ್ರಮೋಶನ್ ಸೇರಿದಂತೆ ಹಲವು ವಿಶೇಷ ಸೌಲಭ್ಯ ನೀಡುವುದಾಗಿ ಪ್ರಕಟಿಸಿದ್ದರು.

ಸೀಮಾ ಢಾಕಾ ಇದೀಗ 76 ಕಾಣೆಯಾದ ಮಕ್ಕಳನ್ನು ಪತ್ತೆಗಚ್ಚಿದ್ದು, ಔಟ್ ಆಫ್ ಟರ್ನ್ ಪ್ರಮೋಷನ್ ಅಡಿಯಲ್ಲಿ ಭಡ್ತಿ ಪಡೆದ ಮೊದಲ ಪೊಲೀಸ್ ಎನಿಸಿಕೊಂಡಿದ್ದಾರೆ. ಕಳೆದ ಎರಡೂವರೆ ತಿಂಗಳಿನಲ್ಲಿ ಸೀಮಾ, 76 ಮಕ್ಕಳನ್ನು ಪತ್ತೆಹಚ್ಚಿದ್ದು, ಇದರಲ್ಲಿ 56 ಮಕ್ಕಳು 14 ವರ್ಷಕ್ಕಿಂತ ಕೆಳಗಿನವರಾಗಿದ್ದರು.

ಇದನ್ನೂ ಓದಿ: ಕೋವಿಡ್ ನಿಯಂತ್ರಣಕ್ಕೆ ದೆಹಲಿ ಸರಕಾರದ ಹೊಸ ತಂತ್ರ! ಮಾಸ್ಕ್ ಧರಿಸದಿದ್ದರೆ 2000ರೂ ದಂಡ

ದೆಹಲಿ ಮಾತ್ರವಲ್ಲದೆ  ಪಶ್ಚಿಮ ಬಂಗಾಳ, ಪಂಜಾಬ್ ಸೇರಿದಂತೆ ಇತರ ರಾಜ್ಯಗಳಿಂದಲೂ ಹಲವಾರು ಮಕ್ಕಳನ್ನು ತಾನು ರಕ್ಷಿಸಿದ್ದೇನೆ ಎಂದು ಸೀಮಾ ಮಾಧ್ಯಮಕ್ಕೆ ತಿಳಿಸಿದ್ದಾರೆ. 2018ರಲ್ಲಿ ಕಾಣೆಯಾಗಿದ್ದ 7 ವರ್ಷದ ಬಾಲಕನೊಬ್ಬನನ್ನು ತಾನು ಪಶ್ಚಿಮ ಬಂಗಾಳದಲ್ಲಿ ರಕ್ಷಿಸಿರುವುದು ಅತ್ಯಂತ ಪ್ರಮುಖ ಪ್ರಕರಣ ಎಂದು ಸೀಮಾ ಹೇಳಿಕೊಂಡಿದ್ದಾರೆ. 2018ರಲ್ಲಿ ಏಳು ವರ್ಷದ ಪುತ್ರ ಕಾಣೆಯಾದ ಬಗ್ಗೆ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಆದರೆ, ಅವರ ಮನೆ ವಿಳಾಸ, ಮೊಬೈಲ್ ನಂಬರ್ ಬದಲಾಗಿ ಆಕೆಯನ್ನು ಸಂಪರ್ಕಿಸುವುದು ತುಂಬಾ ತ್ರಾಸದಾಯಕವಾಗಿತ್ತು. ಹೇಗೋ ಪಶ್ಚಿಮ ಬಂಗಾಳದಲ್ಲಿ ಆಕೆಯ ಮಗನನ್ನು ಪತ್ತೆ ಮಾಡಿ, ಎರಡು ನದಿಗಳನ್ನು ದಾಟಿ ಆಕೆಯ ಊರು ತಲುಪಿದ್ದಾಗಿ ಢಾಕಾ ತಿಳಿಸಿದ್ದಾರೆ.

2006 ಜುಲೈ 3 ರಂದು ದೆಹಲಿ ಪೊಲೀಸ್ ಸೇವೆಗೆ ಸೇರಿದ ಢಾಕಾ, 2012ರವರೆಗೂ ಅಗ್ನೇಯ ದೆಹಲಿಯಲ್ಲಿಯೇ ಸೇವೆಗೆ ನಿಯೋಜನೆಗೊಂಡಿದ್ದರು.  2014ರಲ್ಲಿ ಬಡ್ತಿ ಪಡೆದು ಹೆಡ್ ಕಾನ್ಸ್ ಟೇಬಲ್ ಆಗಿದ್ದಾರೆ.

ಇದನ್ನೂ ಓದಿ: ‘ಉಲ್ಕಾಶಿಲೆ’ಯಾಗಿ ಬಂದ ಅದೃಷ್ಟ: ಒಂದೇ ದಿನದಲ್ಲಿ ಅಗರ್ಭ ಶ್ರೀಮಂತನಾದ ಈ ವ್ಯಕ್ತಿ !

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

1-qewqwqewq

Netizens; 10ನೇ ತರಗತಿ ಪರೀಕ್ಷೆ ಟಾಪರ್‌ ಟ್ರೋಲ್‌: ನೆಟ್ಟಿಗರಿಂದ ತರಾಟೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.