![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮನುಷ್ಯರ ಮೇಲೆಯೇ ಔಷಧ ಪ್ರಯೋಗಿಸಿದ ವಿದೇಶಿ ಕಂಪನಿ
Team Udayavani, Apr 22, 2018, 6:00 AM IST
![14.jpg](https://www.udayavani.com/wp-content/uploads/2018/04/22/14.jpg)
ಜೈಪುರ: ಆಘಾತಕಾರಿ ಬೆಳವಣಿಗೆಯಲ್ಲಿ ರಾಜಸ್ಥಾನದ ಚುರು ಮತ್ತು ಭರತ್ಪುರ ಜಿಲ್ಲೆಗಳ ಜನರಿಗೆ ವಿದೇಶಿ ಕಂಪನಿ ಕಾನೂನುಬಾಹಿರವಾಗಿ ಔಷಧವನ್ನು ಪ್ರಯೋಗಿಸಿದ್ದು, ಮಾ.19ರಂದು ನಡೆದಿದ್ದ ಈ ಕುಕೃತ್ಯ ಶನಿವಾರ ಬೆಳಕಿಗೆ ಬಂದಿದೆ. ಜತೆಗೆ ಭಾರತದ ಔಷಧ ಮಹಾನಿರ್ದೇಶನಾಲಯ (ಡಿಸಿಜಿಐ) ತಜ್ಞರ ತಂಡವನ್ನು ಜೈಪುರಕ್ಕೆ ಕಳುಹಿಸಿದೆ.
ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ವಿದೇಶಿ ಕಂಪನಿಯೊಂದು ಪ್ರಾಣಿಗಳಿಗೆ ನೀಡಬೇಕಾದ ಔಷಧವನ್ನು ಭರತಪುರ, ಚುರು ಜಿಲ್ಲೆಗಳ ಜನರಿಗೆ ನೀಡಿ ಪ್ರಯೋಗ ನಡೆಸಿದೆ. ಅಲ್ಲದೆ ಈ ಪ್ರಯೋಗ ನಡೆಸಿದ ಆಸ್ಪತ್ರೆ ಕನಿಷ್ಠ 50 ಹಾಸಿಗೆಗಳ ಸೌಲಭ್ಯವನ್ನೂ ಹೊಂದಿರಲಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ನಿಯಮ ಬಾಹಿರ ಔಷಧ ಪ್ರಯೋಗಕ್ಕೆ ಒಳಗಾದ 21 ಮಂದಿ ಈಗ ಅನಾರೋಗ್ಯಕ್ಕೆ ಗುರಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುರಂತವೆಂದರೆ ಈ ಪ್ರಯೋಗ ಒಪ್ಪಿಕೊಳ್ಳಲು ಪ್ರತಿಯೊಬ್ಬರಿಗೂ 500 ರೂ. ನೀಡಲಾಗಿತ್ತು ಎಂದು ಚಿಕಿತ್ಸೆ ಪಡೆಯುತ್ತಿರುವವರು ಹೇಳಿದ್ದಾರೆ.
3 ಸದಸ್ಯರ ಸಮಿತಿ: ಈ ಕೃತ್ಯದ ವಿರುದ್ಧ ತನಿಖೆ ನಡೆಸಲು ರಾಜಸ್ಥಾನ ಆರೋಗ್ಯ ಸಚಿವ ಕಾಲಿ ಕದಂ ಸರಾಫ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಮೂವರು ಸದಸ್ಯರ ಸಮಿತಿ ರಚಿಸಿದ್ದಾರೆ. ಅಕ್ರಮ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ನಿಯಮಗಳೇನು?: ಯಾವುದೇ ಹೊಸ ಔಷಧಗಳನ್ನು ಪ್ರಾಣಿಗಳ ಮೇಲೆಯೇ ಪ್ರಯೋಗಿಸಬೇಕು. ಔಷಧ ಪ್ರಯೋಗ (ಕ್ಲಿನಿಕಲ್ ಟ್ರಯಲ್)ನಡೆಸುವ ಮೊದಲು ವ್ಯಕ್ತಿ, ಕುಟುಂಬ ಸದಸ್ಯರಿಗೆ ಅದರ ಮಾಹಿತಿ ನೀಡಬೇಕು. ಲಿಖೀತ ಒಪ್ಪಿಗೆ ಪಡೆದು ಕೊಳ್ಳಬೇಕು. ಕ್ಲಿನಿಕಲ್ ಟ್ರಯಲ್ ವಿಮೆ ಕುರಿತೂ ವಿವರಿಸಬೇಕು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.