20 ಫುಟ್ಬಾಲ್ ಮೈದಾನದಷ್ಟು ಸ್ಥಳಾವಕಾಶ, 62 ಕೋಟಿ ಆದಾಯ!

ಕೇಂದ್ರ ಸರ್ಕಾರ ಜಾರಿ ಮಾಡಿದ್ದ ವಿಶೇಷ ಅಭಿಯಾನ ಯಶಸ್ವಿ; ಕಡತ, ಗುಜಿರಿ ವಿಲೇವಾರಿ ಮಾಡಿ ಸ್ಥಳಾವಕಾಶ ಸೃಷ್ಟಿಸುವ ಅಭಿಯಾನ

Team Udayavani, Nov 24, 2021, 6:20 AM IST

20 ಫುಟ್ಬಾಲ್ ಮೈದಾನದಷ್ಟು ಸ್ಥಳಾವಕಾಶ, 62 ಕೋಟಿ ಆದಾಯ!

ನವದೆಹಲಿ: ಸರ್ಕಾರಿ ಕಚೇರಿಗಳನ್ನೊಮ್ಮೆ ಊಹಿಸಿಕೊಂಡಾಗ ನಮ್ಮ ಕಣ್ಣಮುಂದೆ ಬರುವುದೇ ಹಳೆಯ ಮೇಜು-ಕುರ್ಜಿ, ಅವುಗಳ ಮೇಲೆ ಒಂದಿಷ್ಟು ಕಡತಗಳ ರಾಶಿ, ಪಕ್ಕದ ಕಪಾಟು ತೆರೆದರೆ ಧೂಳು ತುಂಬಿದ ಫೈಲುಗಳು, ಸ್ಟೇಪ್ಲರ್‌ಗಳು, ಸೀಲ್‌ಗ‌ಳು…

ಇಂಥ ಗುಜಿರಿ ವಸ್ತುಗಳನ್ನೆಲ್ಲ ತೆಗೆದುಹಾಕಿ, ಸರ್ಕಾರಿ ಕಟ್ಟಡಗಳಲ್ಲಿನ ಹಳೆಯ ಕಡತಗಳನ್ನೆಲ್ಲ ವಿಲೇವಾರಿ ಮಾಡಿ ಸ್ವತ್ಛಗೊಳಿಸಲು ಕೇಂದ್ರ ಸರ್ಕಾರ ಕೈಗೊಂಡಿದ್ದ ಸುಮಾರು ಒಂದು ತಿಂಗಳ ಅವಧಿಯ ಅಭಿಯಾನವು ಯಶಸ್ವಿಯಾಗಿದೆ.

ಅ.2ರಿಂದ 31ರವರೆಗೆ ನಡೆದ ಅಭಿಯಾನದಿಂದ ಸರ್ಕಾರಿ ಕಟ್ಟಡಗಳಲ್ಲಿ ಒಟ್ಟಾರೆ 12.01 ಲಕ್ಷ ಚದರ ಅಡಿ ಸ್ವಚ್ಛ ಸ್ಥಳಾವಕಾಶ ಸೃಷ್ಟಿಯಾಗಿದೆ. ಅಂದರೆ ಇದು 20 ಫುಟ್ಬಾಲ್ ಮೈದಾನಗಳಿಗೆ ಸಮ!

ಇದಲ್ಲದೇ, ಗುಜಿರಿಗಳ ಮಾರಾಟದಿಂದ 62.54 ಕೋಟಿ ರೂ. ಆದಾಯವೂ ಬಂದಿದೆ. ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ಎಲ್ಲ ಸಚಿವಾಲಯಗಳು ಹಾಗೂ ಇಲಾಖೆಗಳು ಈ ಅಭಿಯಾನವನ್ನು ಅನುಷ್ಠಾನಗೊಳಿಸಿದ್ದವು.

ಹಲವು ಗುರಿಗಳ ಸಾಧನೆ:
ಗಾಂಧಿ ಜಯಂತಿಯ ದಿನ ಆರಂಭವಾದ ಈ ಅಭಿಯಾನದಿಂದ ಇತರೆ ಹಲವು ಗುರಿಗಳನ್ನೂ ಸಾಧಿಸಲು ಸಾಧ್ಯವಾಗಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟಾರೆ 3.30 ಲಕ್ಷ ಸಾರ್ವಜನಿಕರ ಕುಂದುಕೊರತೆಗಳನ್ನು ಒಳಗೊಂಡ ಫೈಲುಗಳನ್ನು ಇತ್ಯರ್ಥ ಮಾಡುವ ಗುರಿಯನ್ನು ಸರ್ಕಾರ ಹಾಕಿಕೊಂಡಿತ್ತು. ಆ ಪೈಕಿ 3.03 ಲಕ್ಷವನ್ನು ಇತ್ಯರ್ಥ ಮಾಡಲಾಗಿದೆ. ಆ ಮೂಲಕ ಶೇ.91.6ರಷ್ಟು ಗುರಿ ಸಾಧನೆಯಾಗಿದೆ. ಅದೇ ರೀತಿ, 907ರಷ್ಟು ನಿಯಮಗಳು ಮತ್ತು ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸಲು ಗುರುತಿಸಲಾಗಿದ್ದು, ಆ ಪೈಕಿ 699 ನಿಯಮಗಳನ್ನು ಸರಳೀಕೃತಗೊಳಿಸಲಾಗಿದೆ. 45.54 ಲಕ್ಷ ಸರ್ಕಾರಿ ಫೈಲುಗಳು ಪರಿಶೀಲನೆಗೆ ಬಾಕಿಯಿದ್ದು, ಈ ಅಭಿಯಾನದ ಅವಧಿಯಲ್ಲಿ 44.89 ಲಕ್ಷ ಫೈಲುಗಳ ಪರಿಶೀಲನೆ ಪೂರ್ಣಗೊಳಿಸಲಾಗಿದೆ. 21.89 ಲಕ್ಷ ಕಡತಗಳನ್ನು ವಿಲೇವಾರಿ ಮಾಡಲಾಗಿದೆ.

ಡಿಜಿಟಲೀಕರಣಕ್ಕೆ ಉತ್ತೇಜನ:
ಕಡತಗಳನ್ನು ಎಲೆಕ್ಟ್ರಾನಿಕ್‌ ರೂಪದಲ್ಲಿ ಇಡುವುದಕ್ಕೆ ಈ ಅಭಿಯಾನ ಉತ್ತೇಜನ ನೀಡಿದೆ. ಜತೆಗೆ, ಸಾರ್ವಜನಿಕರ ಕುಂದುಕೊರತೆಗಳನ್ನು ಕ್ಷಿಪ್ರವಾಗಿ ಇತ್ಯರ್ಥ ಮಾಡುವುದಕ್ಕೂ ಸಾಧ್ಯವಾಗಿದೆ. ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಸಚಿವಾಲಯ ಹಾಗೂ ಮೂಲಸೌಕರ್ಯ ಸಚಿವಾಲಯವು ಅಭಿಯಾನದಲ್ಲಿ ಉತ್ತಮ ಸಾಧನೆ ಮಾಡಿದೆ.

3.30 ಲಕ್ಷ ಕುಂದುಕೊರತೆ ಕಡತ
3.03 ಲಕ್ಷ – ಇತ್ಯರ್ಥಗೊಂಡ ಕಡತಗಳು
ಅ.2ರಿಂದ ಅ.31ರವರೆಗೆ- ಅಭಿಯಾನದ ಅವಧಿ
62.54 ಕೋಟಿ ರೂ.- ವಿಶೇಷ ಅಭಿಯಾನದಿಂದ ಬಂದ ಆದಾಯ
12.01 ಲಕ್ಷ ಚದರ ಅಡಿ- ಎಷ್ಟು ಸ್ಥಳಾವಕಾಶ ಸೃಷ್ಟಿ?….

ಟಾಪ್ ನ್ಯೂಸ್

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.