ಮಮತಾ ಬ್ಯಾನರ್ಜಿ ಹತ್ಯೆಗೆ ರಾಜಕೀಯ ಪಕ್ಷವೊಂದರಿಂದ ಸುಫಾರಿ!
Team Udayavani, May 12, 2018, 1:11 PM IST
ಕೋಲ್ಕತಾ: ರಾಜಕೀಯ ಪಕ್ಷವೊಂದು ತನ್ನ ಹತ್ಯೆಗೆ ಯತ್ನಿಸಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಗಂಭೀರವಾಗಿ ಆರೋಪಿಸಿದ್ದಾರೆ.
ರಾಜಕೀಯ ಪಕ್ಷವೊಂದು ನನ್ನ ಹತ್ಯೆಗೆ ಸುಫಾರಿ(ಗುತ್ತಿಗೆ) ಕೊಟ್ಟಿತ್ತು. ನಾನು ಮನೆಗೆ ವಾಪಸ್ ತೆರಳುವ ಸಂದರ್ಭದಲ್ಲಿ ಕೆಲವು ವ್ಯಕ್ತಿಗಳು ನನ್ನ ಹತ್ಯೆಗೆ ಪ್ರಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ತನಗೆ ಮನೆಯನ್ನು ಬದಲಾಯಿಸುವಂತೆ ಹೇಳಿದ್ದರು. ಈ ಹಿಂದೆಯೂ ನನ್ನ ಕೊಲೆಗೆ ಸಂಚು ನಡೆದಿತ್ತು ಎಂದು ಆರೋಪಿಸಿದರು.
ಖಾಸಗಿ ಟಿವಿ ಚಾನೆಲ್ ಸಂದರ್ಶನವೊಂದರಲ್ಲಿ ಮಮತಾ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದಾರೆ. ಕೂಡಲೇ ಸರ್ಕಾರಿ ಬಂಗ್ಲೆಯನ್ನು ಬದಲಾಯಿಸುವಂತೆ ಗುಪ್ತಚರ ಇಲಾಖೆ ಅಧಿಕಾರಿಗಳು ತಿಳಿಸಿದ್ದು, ಈ ಮಾಹಿತಿ ನಿಜವಾಗಿರುವುದಾಗಿ ಮಮತಾ ತಿಳಿಸಿದ್ದಾರೆ.
ನಾನು ಸಾವಿಗೆ ಹೆದರುವುದಿಲ್ಲ ಎಂದು ಹೇಳಿರುವ ಮಮತಾ ಬ್ಯಾನರ್ಜಿ ಆ ರಾಜಕೀಯ ಪಕ್ಷ ಯಾವುದು? ಯಾರು ಎಂಬ ಗುಟ್ಟನ್ನು ಬಹಿರಂಗಪಡಿಸಿಲ್ಲ. ನಾನು 2 ಕೋಟಿ ರೂಪಾಯಿ ಹಣವನ್ನು ಕನ್ಯಾಶ್ರೀ ಯೋಜನೆಗಾಗಿ ವಿನಿಯೋಗಿಸಿದ್ದೇನೆ. ಆದರೆ ವಿರೋಧ ಪಕ್ಷ ಅದರ ಲಾಭ ಪಡೆಯಲು ಹವಣಿಸುತ್ತಿದೆ ಎಂದು ದೂರಿದರು.
ಕಾಂಗ್ರೆಸ್, ಬಿಜೆಪಿ ಹಾಗೂ ಸಿಪಿಐ(ಎಂ) ಪಕ್ಷಗಳು ರೈತರ ಆತ್ಮಹತ್ಯೆ, ಕೋಮುಗಲಭೆ ಪ್ರಕರಣಗಳ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದಾಗಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ