ಚಿರಂಜೀವಿ ಸಿನಿಮಾ ತೋರಿಸಿ ಮಹಿಳೆಗೆ ಮೆದುಳು ಆಪರೇಷನ್!
ಮಹಿಳೆಯನ್ನು ಭೇಟಿ ಮಾಡುವುದಾಗಿ ಮೆಗಾಸ್ಟಾರ್ ಹೇಳಿದ್ದು, ಅವರು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರನ್ನು ಅಭಿನಂದಿಸಿದ್ದಾರೆ.
Team Udayavani, Aug 27, 2022, 4:23 PM IST
ಸಿಕಂದರಾಬಾದ್: ಇಲ್ಲಿನ ಗಾಂಧಿ ಆಸ್ಪತ್ರೆಯ ವೈದ್ಯರು ಅಪರೂಪದ ಸಾಧನೆ ಮಾಡಿದ್ದು, ಮಹಿಳೆಯೋರ್ವರಿಗೆ ಶಸ್ತ್ರ ಚಿಕಿತ್ಸೆ ನಡೆಸುವ ವೇಳೆ ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಅವರ ಸಿನಿಮಾ ತೋರಿಸಿ, ಯಶಸ್ವಿಯಾಗಿ ಆಪರೇಷನ್ ನಡೆಸಿದ್ದಾರೆ.
ಯಾದಾದ್ರಿ ಭುವನಗಿರಿ ಜಿಲ್ಲೆಯ ಮಹಿಳೆಯೊಬ್ಬರು ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ದಿನಗಳ ಹಿಂದೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ಮೆದುಳಿನಲ್ಲಿ ಅಪಾಯಕಾರಿ ಗಡ್ಡೆಯೊಂದು ಬೆಳೆದಿದ್ದು, ಶಸ್ತ್ರಚಿಕಿತ್ಸೆ ನಡೆಯುವ ವೇಳೆ ಪ್ರಜ್ಞಾವಸ್ಥೆಯಲ್ಲೇ ಇರಬೇಕಾದದ್ದು ಅಗತ್ಯವಾಗಿತ್ತು ಎಂದು ವೈದ್ಯರು ಹೇಳಿದ್ದು, ಆಪರೇಷನ್ ವೇಳೆ ಮಹಿಳೆ ತನ್ನ ನೆಚ್ಚಿನ ನಟ ಮೆಗಾಸ್ಟಾರ್ ಚಿರಂಜೀವಿ ಅವರ ಸಿನಿಮಾ ತೋರಿಸುವಂತೆ ಕೇಳಿಕೊಂಡಿದ್ದಾರೆ.
ಕೂಡಲೇ ಆಸ್ಪತ್ರೆ ವೈದ್ಯರು ಮಹಿಳೆಯ ಕೋರಿಕೆಯಂತೆ ಶಸ್ತ್ರಚಿಕಿತ್ಸೆ ವೇಳೆ ಚಿರಂಜೀವಿ ಅಭಿನಯದ ಅಡವಿ ದೊಂಗಾ ಚಿತ್ರವನ್ನು ತೋರಿಸಿ, ಯಾವುದೇ ಒತ್ತಡವಿಲ್ಲದೆ ಮೆದುಳಿನಲ್ಲಿ ಬೆಳೆದ ಅಪಾಯಕಾರಿ ಗಡ್ಡೆಯನ್ನು ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಚಿರಂಜೀವಿ ಅವರು ತಮ್ಮ ಪಿಆರ್ಒ ಆನಂದ್ ಅವರನ್ನು ಗಾಂಧಿ ಆಸ್ಪತ್ರೆಗೆ ಕಳುಹಿಸಿದ್ದು, ಆಸ್ಪತ್ರೆಯ ಅಧೀಕ್ಷಕ ಡಾ.ರಾಜಾ ರಾವ್, ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ಹಾಗೂ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಯನ್ನು ಪಿಆರ್ಒ ಭೇಟಿ ಮಾಡಿದ್ದಾರೆ.
ಇದನ್ನೂ ಓದಿ:ಆಗಾಗ ಪ್ರಧಾನಿ ಮೋದಿ ರಾಜ್ಯಕ್ಕೆ: ಬಿ.ಎಸ್. ಯಡಿಯೂರಪ್ಪ ಹೇಳಿಕೆ
ಈ ವೇಳೆ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಮಾತನಾಡಿದ ವಿಡಿಯೋ ರೆಕಾರ್ಡ್ ಮಾಡಿ ಚಿರಂಜೀವಿಗೆ ಕಳುಹಿಸಿದ್ದು, ಇನ್ನೆರಡು ದಿನಗಳಲ್ಲಿ ಗಾಂಧಿ ಆಸ್ಪತ್ರೆಗೆ ತೆರಳಿ ಮಹಿಳೆಯನ್ನು ಭೇಟಿ ಮಾಡುವುದಾಗಿ ಮೆಗಾಸ್ಟಾರ್ ಹೇಳಿದ್ದು, ಅವರು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರನ್ನು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ