ಗೆಲುವಿನ ಅಂತರದಲ್ಲೂ ದಾಖಲೆ: ಗುಜರಾತ್‌ನ 25 ಸೀಟುಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಂಡ ಜಯ


Team Udayavani, Dec 10, 2022, 7:13 AM IST

ಗೆಲುವಿನ ಅಂತರದಲ್ಲೂ ದಾಖಲೆ: ಗುಜರಾತ್‌ನ 25 ಸೀಟುಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪ್ರಚಂಡ ಜಯ

ಅಹ್ಮದಾಬಾದ್‌/ಶಿಮ್ಲಾ:ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ 156 ಕ್ಷೇತ್ರಗಳನ್ನು ತನ್ನದಾಗಿಸಿಕೊಳ್ಳುವ ಮೂಲಕ ಬಿಜೆಪಿ ಐತಿಹಾಸಿಕ ಸಾಧನೆ ಮಾಡಿರುವುದು ಎಲ್ಲರಿಗೂ ಗೊತ್ತೇ ಇದೆ. ಈ ಸಾಧನೆಯ ಜತೆಗೆ ಆಡಳಿತಾರೂಢ ಪಕ್ಷವು ಮತ್ತಷ್ಟು ದಾಖಲೆಗಳನ್ನೂ ಬರೆದಿದೆ. ಆ ಪೈಕಿ ಒಂದು, ಭಾರೀ ಮತಗಳ ಅಂತರದಿಂದ ಬರೋಬ್ಬರಿ 25 ಸೀಟುಗಳನ್ನು ಗೆದ್ದಿರುವುದು!

ಘಟ್ಲೋಡಿಯಾ ಮತ್ತು ಚೊರ್ಯಾಸಿ ಕ್ಷೇತ್ರಗಳಲ್ಲಿ ಸುಮಾರು 2 ಲಕ್ಷ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಸತತ 2ನೇ ಬಾರಿಗೆ ಘಟೊÉàಡಿಯಾದಲ್ಲಿ ಜಯಭೇರಿ ಬಾರಿಸಿರುವ ಸಿಎಂ ಭೂಪೇಂದ್ರ  ಪ ಟೇಲ್‌ ತಮ್ಮ ಸಮೀಪದ ಪ್ರತಿಸ್ಪರ್ಧಿಯನ್ನು 1.92 ಲಕ್ಷ ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.
ಸೂರತ್‌ ವೆಸ್ಟ್‌, ಎಲ್ಲಿಸ್‌ಬ್ರಿಡ್ಜ್, ರಾಜ್‌ಕೋಟ್‌ ವೆಸ್ಟ್‌ ಸೇರಿದಂತೆ 8 ಸೀಟುಗಳಲ್ಲಿ ಬಿಜೆಪಿಯ ಗೆಲುವಿನ ಅಂತರ 1 ಲಕ್ಷದಿಂದ 1.5 ಲಕ್ಷ ಮತಗಳಾಗಿದ್ದರೆ, ಕನಿಷ್ಠ 15 ಕ್ಷೇತ್ರಗಳಲ್ಲಿ ಇದು 70 ಸಾವಿರದಿಂದ 1 ಲಕ್ಷದೊಳಗೆ ಇದೆ.

ಈ ಮಧ್ಯೆ, ಹಿಮಾಚಲಪ್ರದೇಶದ ಫ‌ಲಿತಾಂಶವನ್ನು ವಿಶ್ಲೇಷಿಸಿದರೆ, 40 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್‌ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೂ 15 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಅತ್ಯಂತ ಕಡಿಮೆ ಮತಗಳ ಅಂತರದಿಂದ ಗೆದ್ದಿದ್ದಾರೆ. ಇಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಗಳ ನಡುವಿನ ಮತಗಳ ಅಂತರ 2 ಸಾವಿರಕ್ಕಿಂತಲೂ ಕಡಿಮೆಯಿದೆ. ಇನ್ನು, ಹಿಮಾಚಲದಲ್ಲಿ ಹೊಸದಾಗಿ ಆಯ್ಕೆಯಾದ 68 ಶಾಸಕರ ಪೈಕಿ 23 ಮಂದಿ ಮೊದಲ ಬಾರಿಗೆ ಶಾಸಕರಾದವರು.

ಮುಳುವಾದ ಬಂಡಾಯ: ಹಿಮಾಚಲದಲ್ಲಿ 68 ಕ್ಷೇತ್ರಗಳ ಪೈಕಿ 12ರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಎರಡೂ ಪಕ್ಷಗಳಿಗೂ ಬಂಡಾಯ ಅಭ್ಯರ್ಥಿಗಳು ಶಾಕ್‌ ನೀಡಿದ್ದಾರೆ. ಟಿಕೆಟ್‌ ಸಿಗದ ಕಾರಣ ಪಕ್ಷೇತರರಾಗಿ ಸ್ಪರ್ಧಿಸಿದ್ದ ಬಂಡಾಯ ನಾಯಕರು, 8 ಕ್ಷೇತ್ರಗಳಲ್ಲಿ ಬಿಜೆಪಿಗೆ, 4ರಲ್ಲಿ ಕಾಂಗ್ರೆಸ್‌ಗೆ ಮುಳುವಾದರು. ಈ ಮೂಲಕ ಒಟ್ಟಾರೆ ಫ‌ಲಿತಾಂಶದ ಮೇಲೂ ಇವರು ಪ್ರತಿಕೂಲ ಪರಿಣಾಮ ಬೀರಿದರು. 99 ಮಂದಿ ಪಕ್ಷೇತರರ ಪೈಕಿ 28 ಮಂದಿ ಬಂಡಾಯ ನಾಯಕರೇ ಆಗಿದ್ದರು.

ಆಪ್‌ ಮೇಲೆ ನಿರೀಕ್ಷೆ: ಗುಜರಾತ್‌ನಲ್ಲಿ ಬುಡಕಟ್ಟು ಸಮುದಾಯದ ಬಾಹುಳ್ಯವಿರುವ 27 ಕ್ಷೇತ್ರಗಳ ಪೈಕಿ 23ರಲ್ಲಿ ಬಿಜೆಪಿ ಜಯ ಸಾಧಿಸಿದೆ. 3ರಲ್ಲಿ ಕಾಂಗ್ರೆಸ್‌, 1ರಲ್ಲಿ ಆಪ್‌ ಗೆದ್ದಿದೆ. 2017ರ ಚುನಾವಣೆಯಲ್ಲಿ ಕಾಂಗ್ರೆಸ್‌ ಇಲ್ಲಿ 14 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡಿತ್ತು. ಆದರೆ ಈ ಬಾರಿ ಆಪ್‌ 1ರಲ್ಲಿ ಜಯ ಸಾಧಿಸಿದರೂ ಬುಡಕಟ್ಟು ಜನಾಂಗವರ ಒಲವು ಆಪ್‌ನತ್ತ ಇದ್ದಿದ್ದು ಫ‌ಲಿತಾಂಶದಿಂದ ಸಾಬೀತಾಗಿದೆ. ಅಂದರೆ ಬಿಜೆಪಿ ಬಹುತೇಕ ಸ್ಥಾನ ಗೆದ್ದರೂ ಮತ ಹಂಚಿಕೆಯ ವಿಚಾರದಲ್ಲಿ ಆಪ್‌ 2ನೇ ಸ್ಥಾನದಲ್ಲಿದೆ. 9 ಕ್ಷೇತ್ರಗಳಲ್ಲಂತೂ ಬಿಜೆಪಿ ಮತ್ತು ಆಪ್‌ ನಡುವೆ ನೇರ ಪೈಪೋಟಿ ನಡೆದಿದೆ.

ಇದೇ ವೇಳೆ, ಕಾಂಗ್ರೆಸ್‌ನ ಸಾಂಪ್ರದಾಯಿಕ ಅಲ್ಪಸಂಖ್ಯಾಕ ಮತಗಳನ್ನು ವಿಭಜಸಿದ್ದೇ ಆಪ್‌ ಮತ್ತು ಅಸಾದುದ್ದೀನ್‌ ಒವೈಸಿ ಅವರ ಎಐಎಂಐಎಂ ಎಂದು ವಿಶ್ಲೇಷಿಸಲಾಗಿದೆ. ಇದರಿಂದಾಗಿಯೇ ಪ್ರಮುಖ ವಿಪಕ್ಷ ಕಾಂಗ್ರೆಸ್‌ನ ಮತಹಂಚಿಕೆಯು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.

15 ಪಟ್ಟು ಅಧಿಕ: ಮೊರ್ಬಿ ತೂಗುಸೇತುವೆ ದುರಂತವು ಬಿಜೆಪಿಯ ಗೆಲುವಿನ ನಾಗಾ ಲೋಟಕ್ಕೆ ಯಾವುದೇ ಅಡ್ಡಿ ಉಂಟುಮಾಡಿಲ್ಲ ಎನ್ನುವುದಕ್ಕೆ ಸಾಕ್ಷಿ ಎಂಬಂತೆ, ಇಲ್ಲಿ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಬರೋಬ್ಬರಿ 62 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಈ ಬಾರಿ ಬಿಜೆಪಿ ಟಿಕೆಟ್‌ನಿಂದ ಕಣಕ್ಕಿಳಿದಿದ್ದ ಕಾಂತಿಲಾಲ್‌ ಅಮೃತೀಯ ಅವರ ಗೆಲುವಿನ ಅಂತರವು ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಅಭ್ಯರ್ಥಿ ಪಡೆದಿದ್ದ ಮತಕ್ಕಿಂತ 15 ಪಟ್ಟು ಅಧಿಕ.

ಜಗತ್ತಿನ ಪತ್ರಿಕೆಗಳಲ್ಲೂ ಸುದ್ದಿ…
ಗುಜರಾತ್‌ನಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದ್ದು ಜಗತ್ತಿನ ಪ್ರಮುಖ ಪತ್ರಿಕೆಗಳಲ್ಲಿಯೂ ವರದಿಯಾಗಿದೆ. “ದ ಸ್ಟ್ರಾಟಿಸ್‌ ಟೈಮ್ಸ್‌ ಆಫ್ ಸಿಂಗಾಪುರ್‌’, “ಅಲ್‌ ಜಜೀರಾ’, “ಇಂಡಿಪೆಂಡೆಂಟ್‌’, “ಎಬಿಸಿ ನ್ಯೂಸ್‌’ ಸೇರಿದಂತೆ ಪ್ರಮುಖ ಪತ್ರಿಕೆಗಳಲ್ಲಿ ಗುಜರಾತ್‌ ಚುನಾವಣೆ ಬಗ್ಗೆ ಸಚಿತ್ರ ವರದಿಗಳು ಪ್ರಕಟವಾಗಿವೆ. “ದ ಗಾರ್ಡಿಯನ್‌’ ಪತ್ರಿಕೆಯು “2024ರಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವಂತೆಯೇ ಪ್ರಧಾನಿ ಮೋದಿಯವರು ಬಿಜೆಪಿಗೆ ಹೆಚ್ಚಿನ ಸ್ಥಾನ ಗೆದ್ದುಕೊಡುವುದರ ಮೂಲಕ ಹೊಸ ಹುರುಪು ತಂದುಕೊಟ್ಟಿದ್ದಾರೆ’ ಜಪಾನ್‌ನ ನಿಕ್ಕಿ ಏಷ್ಯಾ ಪತ್ರಿಕೆ”ಗುಜರಾತ್‌ನಲ್ಲಿ ಪ್ರಧಾನಿ ಮೋದಿ ಜನಪ್ರಿಯ ನಾಯಕರಾಗಿದ್ದಾರೆ. 13 ವರ್ಷಗಳ ಕಾಲ ಅವರು ಅಲ್ಲಿ ಮುಖ್ಯಮಂತ್ರಿಯಾಗಿದ್ದರು. ಜತೆಗೆ 1995ರಲ್ಲಿ ಅವರು ರಾಜ್ಯದಲ್ಲಿ ನಾಯಕತ್ವ ವಹಿಸಿದ ಬಳಿಕ ಬಿಜೆಪಿ ಸೋತಿಲ್ಲ’ ಎಂದು ಹೇಳಿದೆ. “ಗುಜರಾತ್‌ನಲ್ಲಿ ಬಿಜೆಪಿಗೆ ಸಿಕ್ಕಿದ ಜಯ 2024ರ ಚುನಾವಣೆಯಲ್ಲಿ ಅನುಕೂಲವಾಗಲಿದೆ’
ಎಂದು “ದ ಗಾರ್ಡಿಯನ್‌’ ವರದಿ ಮಾಡಿದೆ.

45 ಹೊಸಬರಲ್ಲಿ 43 ಮಂದಿಗೆ ಜಯ
ಗುಜರಾತ್‌ ಚುನಾವಣೆಯಲ್ಲಿ ಬಿಜೆಪಿ ಹಲವು ಹಾಲಿ ಶಾಸಕರನ್ನು ಕೈಬಿಟ್ಟು, 45 ಹೊಸ ಮುಖಗಳಿಗೆ ಟಿಕೆಟ್‌ ನೀಡಿತ್ತು. ಇವರಲ್ಲಿ ಇಬ್ಬರು ಮಾತ್ರ ಸೋಲುಂಡಿದ್ದು, ಉಳಿದ 43 ಮಂದಿಯೂ ಗೆಲುವಿನ ನಗೆ ಬೀರಿದ್ದಾರೆ. ಆಡಳಿತ ವಿರೋಧಿ ಅಲೆಯನ್ನು ಹತ್ತಿಕ್ಕಲೆಂದೇ ಬಿಜೆಪಿ, ಮಾಜಿ ಸಿಎಂ ರೂಪಾಣಿ ಸೇರಿದಂತೆ 45 ಶಾಸಕರಿಗೆ ಟಿಕೆಟ್‌ ನಿರಾಕರಿಸಿತ್ತು. ಈ ಕಾರ್ಯತಂತ್ರವು ಫ‌ಲಿಸಿದೆ. ಬೋಟಾಡ್‌ ಕ್ಷೇತ್ರದಲ್ಲಿ ಆಪ್‌ ಮತ್ತು ವಘೋಡಿಯಾದಲ್ಲಿ ಪಕ್ಷೇತರ ಅಭ್ಯರ್ಥಿಯು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಇದೇ ವೇಳೆ ಆಡಳಿತಾರೂಢ ಬಿಜೆಪಿ ಪ್ರಚಂಡ ಜಯ ಗಳಿಸಿದ್ದರೂ ಒಬ್ಬರು ಸಚಿವರು ಸೇರಿದಂತೆ ಬಿಜೆಪಿಯ 7 ಮಂದಿ ಹಾಲಿ ಶಾಸಕರು ಸೋಲಿನ ರುಚಿ ಕಂಡಿದ್ದಾರೆ.

15 ಮಹಿಳೆಯರಿಗೆ ಜಯ
ಗುಜರಾತ್‌ ಅಸೆಂಬ್ಲಿ ಚುನಾವಣೆಯಲ್ಲಿ ಗೆದ್ದ ಮಹಿಳಾ ಅಭ್ಯರ್ಥಿಗಳ ಸಂಖ್ಯೆ ಸ್ವಲ್ಪಮಟ್ಟಿಗೆ ಹೆಚ್ಚಳವಾಗಿದೆ. ಕಳೆದ ಚುನಾವಣೆಯಲ್ಲಿ 13 ಮಹಿಳೆಯರು ಗೆಲುವು ಸಾಧಿಸಿದ್ದರೆ ಈ ಬಾರಿ 15 ಮಂದಿ ಜಯಮಾಲೆ ಧರಿಸಿದ್ದಾರೆ. ಈ ಪೈಕಿ 14 ಮಂದಿ ಬಿಜೆಪಿ ಅಭ್ಯರ್ಥಿಗಳಾದರೆ ಒಬ್ಬರು ಕಾಂಗ್ರೆಸ್‌ನವರು. ವಿವಿಧ ರಾಜಕೀಯ ಪಕ್ಷಗಳಿಂದ ಮತ್ತು ಸ್ವತಂತ್ರರಾಗಿ ಒಟ್ಟು 139 ಮಹಿಳೆಯರು ಕಣಕ್ಕಿಳಿದಿದ್ದರು.

ದಿಲ್ಲಿ ಎಂಸಿಡಿ: ಕಾಂಗ್ರೆಸ್‌ಗೆ ಮತ್ತೆ ನಷ್ಟ
ದಿಲ್ಲಿ ಮಹಾನಗರ ಪಾಲಿಕೆ ಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್‌ನ ಇಬ್ಬರು ಕೌನ್ಸಿಲರ್‌ಗಳು ಶುಕ್ರವಾರ ಆಪ್‌ಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್‌ನ ಸದಸ್ಯ ಬಲ 7ಕ್ಕೆ ಕುಸಿದಿದೆ. ವಿಶೇಷವೆಂದರೆ ಪಕ್ಷಾಂತರ ನಿಗ್ರಹ ಕಾನೂನು ಎಂಸಿಡಿ ಚುನಾವಣೆಗೆ ಅನ್ವಯವಾಗುವುದಿಲ್ಲ.

ಗುಜರಾತ್‌ ಫ‌ಲಿತಾಂಶವು ನಮಗೆ ಆತ್ಮವಿಮರ್ಶೆ ಮಾಡಿಕೊಳ್ಳುವ ಮತ್ತು ಕೆಲವು ಕಠಿಣ ನಿರ್ಧಾರ ಕೈಗೊಳ್ಳುವ ಅಗತ್ಯತೆಯನ್ನು ತೋರಿಸಿದೆ. ಆಮ್‌ ಆದ್ಮಿ ಪಕ್ಷ ಮತ್ತು ಎಐಎಂಐಎಂ ಆಡಳಿತಾರೂಢ ಬಿಜೆಪಿಯ “ಅನೌಪಚಾರಿಕ ಪಾಲುದಾರ’ ಪಕ್ಷಗಳು ಎಂಬುದು ಸಾಬೀತಾಗಿದೆ.
-ಜೈರಾಂ ರಮೇಶ್‌, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ

 

ಟಾಪ್ ನ್ಯೂಸ್

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.