ಪಶ್ಚಿಮ ಬಂಗಾಳ : ಗಾಯಗೊಂಡ ಹುಲಿ ಅತ್ಯಂತ ಅಪಾಯಕಾರಿ ಪ್ರಾಣಿ : ಮಮತಾ ಕಿಡಿ
Team Udayavani, Mar 14, 2021, 4:36 PM IST
ಪಶ್ಚಿಮ ಬಂಗಾಳ : ಆಸ್ಪತ್ರೆಯಿಂದ ಬಿಡುಗಡೆಗೊಂಡ ಎರಡೇ ದಿನಗಳಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೀಲ್ ಚೇರ್ ನ ಮೂಲಕವೇ ಕೋಲ್ಕತ್ತಾದ ಗಾಂಧಿ ಪ್ರತಿಮೆಯಿಂದ ಹಜ್ಹ್ರಾದ ತನಕ ತಮ್ಮ ಚುನಾವಣಾ ಪ್ರಚಾರದ ರೋಡ್ ಶೋ ವನ್ನು ಆರಂಭಿಸಿದ್ದಾರೆ.
ಓದಿ : ಸಾವಿಗೆದುರಾಗಿ ನಿಂತ ‘ಮರುಭೂಮಿಯ ಹೂ’ವಿನ ಘಮ…!
ಅಪಾರ ಸಂಖ್ಯೆಯಲ್ಲಿ ಪಕ್ಷದ ಬೆಂಬಲಿಗರು, ಕಾರ್ಯಕರ್ತರು ಮಮತಾ ಬ್ಯಾನರ್ಜಿ ಅವರಿಗೆ ಸಾಥ್ ನೀಡಿದ್ದಾರೆ.
#WATCH: West Bengal CM Mamata Banerjee holds a roadshow from Gandhi Murti in Kolkata to Hazra, on a wheelchair. #WestBengalElections2021 pic.twitter.com/s80gmk8Jbs
— ANI (@ANI) March 14, 2021
ಇನ್ನು, ಹಜ್ಹ್ರಾದದಲ್ಲಿ ರೋಡ್ ಶೋ ಮುಕ್ತಾಯಗೊಂಡ ನಂತರ ಮಮತಾ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷ ಇಂದು ಬೆಳಗ್ಗೆ ಮಾಹಿತಿ ನೀಡಿತ್ತು.
ರೋಡ್ ಶೋ ನಡುವೆಯೇ, ಮಮತಾ ಪ್ರತಿ ಪಕ್ಷಗಳಿಗೆ ಎಚ್ಚರಿಕೆ ನೀಡಿದ್ದಾರೆ. “ಜನರು ನಮಗೆ ಮತ ಹಾಕಿದರೆ, ಪ್ರಜಾಪ್ರಭುತ್ವವನ್ನು ಅವರಿಗೆ ಮರಳಿ ಕೊಡುತ್ತೇವೆ ಎಂದು ಭರವಸೆಯನ್ನು ನೀಡುತ್ತೇನೆ. ಬಂಗಾಳದ ವಿರುದ್ಧ ನಡೆಯುತ್ತಿರುವ ಎಲ್ಲಾ ಪಿತೂರಿಗಳು ನಾಶವಾಗಲಿ. ವೀಲ್ ಚೇರ್ ನ ಮೇಲೆ ಚುನಾವಣಾ ಪ್ರಚಾರ ಮಾಡುತ್ತೇನೆ. ಖೇಲ್ ಹೋಬ್, ಗಾಯಗೊಂಡ ಹುಲಿ ಅತ್ಯಂತ ಅಪಾಯಕಾರಿ ಪ್ರಾಣಿ” ಎಂದು ಮಮತಾ ಕಿಡಿ ಕಾರಿದ್ದಾರೆ.
If people vote for us, we’ll ensure that democracy returns to them. May all conspiracies against Bengal be destroyed. I assure that I’ll campaign on a wheel chair with a broken leg. Khela Hobe. A wounded tiger is the most dangerous animal: WB CM #WestBengalElections2021 pic.twitter.com/pdPFlRpaZv
— ANI (@ANI) March 14, 2021
ಇನ್ನು, ಮಮತಾ ಅವರು ಕಳೆದ ವಾರ ಅವರ ವಿಧಾನ ಸಭಾ ಕ್ಷೇತ್ರ ನಂದಿಗ್ರಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದಾಳಿ ನಡೆದಿರುವುದಕ್ಕೆ ಯಾವುದೇ ಪೂರಕ ಸಾಕ್ಷಿಗಳಿಲ್ಲ ಎಂದು ಚುನಾವಣಾ ವೀಕ್ಷಕರ ವರದಿಯನ್ನು ಆಧರಿಸಿ ಚುನಾವಣಾ ಆಯೋಗ ತಿಳಿಸಿದೆ.
ಓದಿ : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ: ಹಣಕ್ಕಾಗಿ ಡಿಮ್ಯಾಂಡ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ