
Goaಕ್ಕೆ ಪ್ರವಾಸಕ್ಕೆಂದು ತೆರಳಿದ್ದ ತುಮಕೂರಿನ ಯುವಕ ಆತ್ಮಹತ್ಯೆ
ದೊಡ್ಡ ಮೊತ್ತದ ಜೂಜಾಟ ಮುಳುವಾಯಿತೆ?
Team Udayavani, May 31, 2023, 3:38 PM IST

ಪಣಜಿ: ಪ್ರವಾಸಕ್ಕೆಂದು ಕರ್ನಾಟಕದಿಂದ ಗೋವಾಕ್ಕೆ ತೆರಳಿದ್ದ ಯುವಕನೊಬ್ಬ ಪಣಜಿಯ ಹೋಟೆಲ್ ವೊಂದರಲ್ಲಿ ಟ್ರ್ಯಾಕ್ ಪ್ಯಾಂಟ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪೊಲೀಸರ ಪ್ರಕಾರ, ಮೂಲತಃ ತುಮಕೂರು ಮೂಲದ ಸಾಹಿಲ್ ಖಾನ್ (25) ಮೇ 26 ರಂದು ಗೋವಾಕ್ಕೆ ಬಂದಿದ್ದರು ಎನ್ನಲಾಗಿದೆ.
ಪಣಜಿಯ ಮಳಾದ ಹೊಟೇಲ್ನಲ್ಲಿ ಮೇ 30ರವರೆಗೆ ಕೊಠಡಿ ಕಾಯ್ದಿರಿಸಿದ್ದರು. ಗೆಳೆಯರಿಂದ ದೊಡ್ಡ ಮೊತ್ತದ ಹಣ ತಂದಿದ್ದ. ಅಲ್ಲಿಂದ ಸಂಜೆ ಪಣಜಿಯ ಕ್ಯಾಸಿನೊಗೆ ಜೂಜಾಡಲು ಹೋಗಿ ತಡರಾತ್ರಿ ಹೋಟೆಲ್ಗೆ ಹಿಂತಿರುಗುತ್ತಿದ್ದರು ಎನ್ನಲಾಗಿದೆ. ಆದರೆ ಮೇ 30 ರಂದು ಬೆಳಗ್ಗೆ 11 ಗಂಟೆಯಾದರೂ ಎದ್ದೇಳದ ಕಾರಣ ಹೋಟೆಲ್ ಉದ್ಯೋಗಿ ಅನುಮಾನಗೊಂಡು ಹೋಟೆಲ್ ಮ್ಯಾನೇಜರ್ ಗೆ ವಿಷಯ ತಿಳಿಸಿದ್ದಾರೆ.
ಘಟನೆ ಕುರಿತು ಪಣಜಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿದಾಗ ಸಾಹಿಲ್ ಖಾನ್ ಕೊಠಡಿಯ ಬಾಗಿಲು ತೆರೆದಿರುವುದು ಕಂಡು ಬಂತು. ಪೊಲೀಸರು ಕೊಠಡಿಯ ಬಾಗಿಲು ತೆರೆದಾಗ ಸಾಹಿಲ್ ಖಾನ್ ಫ್ಯಾನ್ಗೆ ನೇಣು ಬಿಗಿದು ಸಾವನ್ನಪ್ಪಿರುವುದು ಕಂಡು ಬಂದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಯಾವುದೇ ಪತ್ರವನ್ನು ಇಟ್ಟಿರರಲಿಲ್ಲ, ಆತ್ಮಹತ್ಯೆಯ ಹಿಂದಿನ ಕಾರಣವನ್ನು ಬರೆದಿರಲಿಲ್ಲ ಎನ್ನಲಾಗಿದೆ.
ಆತ್ಮಹತ್ಯೆಗೂ ಮುನ್ನ ಕ್ಯಾಸಿನೊದಲ್ಲಿ ದೊಡ್ಡ ಮೊತ್ತದ ಜೂಜಾಟ ನಡೆಸಿದ್ದ. ಹೆಚ್ಚಿನ ಹಣವನ್ನು ಸಾಲ ಮಾಡಿ ಅದೃಷ್ಟ ಪರೀಕ್ಷೆಗೆಂದು ಗೋವಾಕ್ಕೆ ಬಂದಿದ್ದ ಆದರೆ, ಹಣವನ್ನೆಲ್ಲ ಕಳೆದುಕೊಂಡು ಸಾಲಗಾರರನ್ನು ತಪ್ಪಿಸಿಕೊಳ್ಳಲು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೋಲಿಸರು ಹೆಚ್ಚಿನ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್ ಗಡ್ಕರಿ

Cable TV service ಎಂಎಸ್ಒಗಳಿಗೆ 10 ವರ್ಷ ಲೈಸನ್ಸ್: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ
MUST WATCH
ಹೊಸ ಸೇರ್ಪಡೆ

Karnataka Bandh; ಯಾದಗಿರಿಯಲ್ಲಿ ರೈಲು ತಡೆಯಲು ಯತ್ನ

Karnataka Bandh; ‘ನೀರು ನಿಲ್ಲಿಸದಿದ್ದರೆ ಡ್ಯಾಂ ಒಡೆಯುತ್ತೇವೆ’; ರಾಮನಗರದಲ್ಲಿ ಪ್ರತಿಭಟನೆ

Karnataka Bandh; ಚಿಕ್ಕಮಗಳೂರಿನಲ್ಲಿ ವ್ಯಾಪಕ ಬೆಂಬಲ; ಪ್ರತಿಕೃತಿ ದಹಿಸಿ ಪ್ರತಿಭಟನೆ

Canada; ಭಾರತದೊಂದಿಗೆ ಸ್ನೇಹಕ್ಕೆ ಸದಾ ಬದ್ಧ: ಬಿಕ್ಕಟ್ಟಿನ ನಡುವೆ ಟ್ರುಡೊ

Baana Daariyalli movie review; ಗಣೇಶ್- ಗುಬ್ಬಿ ಚಿತ್ರ ಹೇಗಿದೆ?