ಪಿಂಚಣಿ ಹಿಂಪಡೆಯಲು ಆಧಾರ್ ಬೇಕಾಗಿಲ್ಲ
Team Udayavani, Mar 1, 2017, 3:50 AM IST
ಹೊಸದಿಲ್ಲಿ: ಭವಿಷ್ಯನಿಧಿ (ಪಿಎಫ್) ಖಾತೆಯಲ್ಲಿರುವ ಪೂರ್ತಿ ಪಿಂಚಣಿ ಹಣವನ್ನು ಹಿಂಪಡೆಯಲು ಆಧಾರ್ ಸಂಖ್ಯೆ ನೀಡಬೇಕಾದ ಅಗತ್ಯವಿಲ್ಲ ಎನ್ನುವ ಮೂಲಕ ಇಲಾಖೆ ಖಾತೆದಾರರಲ್ಲಿ ಮೂಡಿರುವ ಗೊಂದಲಕ್ಕೆ ತೆರೆ ಎಳೆದಿದೆ. ಕಳೆದ ಜನವರಿಯಲ್ಲಿ ಭವಿಷ್ಯನಿಧಿ ಪಿಂಚಣಿ ಹಿಂಪಡೆದುಕೊಳ್ಳಲು ಆಧಾರ್ ನಂಬರ್ ಕಡ್ಡಾಯಗೊಳಿಸಲಾಗಿತ್ತು. ಇದರಿಂದಾಗಿ ಆಧಾರ್ ಕಾರ್ಡ್ ಇಲ್ಲದವರು ಹಣಹಿಂಪಡೆಯಲು ಸಾಧ್ಯವಾಗದೇ ದೂರು ಸಲ್ಲಿಸಿದ್ದರು. ಖಾತೆದಾರರ ದೂರು ಆಲಿಸಿ ಈ ಕ್ರಮಕೈಗೊಳ್ಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಧಿಕಾರಿ, ಪಿಂಚಣಿ ಹಿಂಪಡೆಯಲು ಆಧಾರ್ ನಂಬರ್ ಅಗತ್ಯವಿಲ್ಲ. 10 ವರ್ಷಕ್ಕಿಂತ ಕಡಿಮೆ ಸೇವಾವಧಿ ಹೊಂದಿರುವವರೂ 10ಸಿ ಫಾರ್ಮ್ ನೀಡುವ ಮೂಲಕ ಪೂರ್ಣ ಮತ್ತು ಅಂತಿಮವಾಗಿ ಪಡೆದುಧಿಕೊಳ್ಳಬೇಕಾದ ಪಿಂಚಣಿಯನ್ನು ಪಡೆದುಕೊಳ್ಳಲಡ್ಡಿಯಿಲ್ಲ ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ. ಆಧಾರ್ ಸಂಖ್ಯೆ ನೀಡಿಧಿದರೆ ಹಣ ಹಿಂಪಡೆಯಲು ಅನುಕೂಲಧಿವಾಗಲಿದೆ ಎಂದರು. ಇದಕ್ಕಿಂತಲೂ ಮೊದಲು ಮುಂದಿನ ತಿಂಗಳ ಅಂತ್ಯದ ವರೆಗೆ ಆಧಾರ್ ನೀಡಿಕೆ ಅವಧಿ ವಿಸ್ತರಿಸಿ ಆದೇಶ ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು