ಫೇಸ್ಬುಕ್ ಬಳಕೆಗೂ ಆಧಾರ್
ಸುಪ್ರೀಂ ಕೋರ್ಟ್ನಲ್ಲಿ ಅಟಾರ್ನಿ ಜನರಲ್ ಮನವಿ
Team Udayavani, Aug 21, 2019, 6:00 AM IST
ನವದೆಹಲಿ: ಫೇಸ್ಬುಕ್, ವಾಟ್ಸ್ಆ್ಯಪ್ನಂಥ ಸಾಮಾಜಿಕ ಜಾಲತಾಣಗಳ ಬಳಕೆದಾರರಿಗೆ ತಮ್ಮ ಖಾತೆಗಳೊಂದಿಗೆ ಆಧಾರ್ ಸಂಖ್ಯೆ ಜೋಡಿಸುವುದನ್ನು ಕಡ್ಡಾಯ ಮಾಡುವ ಬಗ್ಗೆ, ಮದ್ರಾಸ್, ಬಾಂಬೆ ಹಾಗೂ ಮಧ್ಯಪ್ರದೇಶ ಹೈಕೋರ್ಟ್ಗಳಲ್ಲಿ ನಡೆಯುತ್ತಿರುವ ವಿಚಾರಣೆಗಳನ್ನು ಸುಪ್ರೀಂ ಕೋರ್ಟ್ಗೆ ವರ್ಗಾಯಿಸಬೇಕು ಎಂದು ಫೇಸ್ಬುಕ್ ಸಂಸ್ಥೆ ಸಲ್ಲಿಸಿದ್ದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.
ಸರ್ಕಾರದ ವಾದ: ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಆಧಾರ್ ಸಂಖ್ಯೆ ಜೋಡಣೆ ರಾಷ್ಟ್ರದ ಹಿತದೃಷ್ಟಿಯಿಂದ ಅವಶ್ಯಕ. ‘ಬ್ಲೂ ವೇಲ್ ಗೇಮ್’ನಂಥ ಆನ್ಲೈನ್ ಅವಘಡ ತಪ್ಪಿಸಲು, ಸುಳ್ಳು ಸುದ್ದಿ, ಅನೈತಿಕ ವಿಚಾರಗಳನ್ನು ಹರಡುವ, ಅಪರಾಧ-ಹಿಂಸಾಚಾರಕ್ಕೆ ಪ್ರೇರೇಪಿಸುವವರನ್ನು ಪತ್ತೆ ಹಚ್ಚಲು ಇದರಿಂದ ಸಹಾಯವಾಗುತ್ತದೆ ಎಂದರು.
ಪ್ರತಿವಾದ: ಫೇಸ್ಬುಕ್, ವಾಟ್ಸ್ಆ್ಯಪ್ ಪರ ವಾದ ಮಂಡಿಸಿದ ಹಿರಿಯ ವಕೀಲರಾದ ಮುಕುಲ್ ರೋಹಟಗಿ, ಕಪಿಲ್ ಸಿಬಲ್, ‘ಆಧಾರ್ ಕಡ್ಡಾಯದಿಂದ ಬಳಕೆದಾರರ ಗೌಪ್ಯತೆ ಹಕ್ಕು ಕಸಿದಂತಾಗುತ್ತದೆ. ಹಾಗಾಗಿ, ಕ್ರಿಮಿನಲ್ ತನಿಖೆಯ ವೇಳೆ ಮಾತ್ರ ಖಾತೆದಾರರ ವಿವರಗಳನ್ನು ಸಾಮಾಜಿಕ ಜಾಲತಾಣಗಳು ತನಿಖಾಧಿಕಾರಿಗಳಿಗೆ ನೀಡಿದರೆ ಸಾಕು ಎಂದು ನ್ಯಾಯಪೀಠ ಸೂಚಿಸಬೇಕು’ ಎಂದರು.
ನ್ಯಾಯಪೀಠದ ಅಭಿಮತ
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಮಾತ್ರವಲ್ಲದೆ ಗೂಗಲ್, ಟ್ವಿಟರ್, ಯು ಟ್ಯೂಬ್ ಹಾಗೂ ಇನ್ನಿತರ ಸಾಮಾಜಿಕ ಜಾಲತಾಣಗಳಿಂದ ಅಭಿಪ್ರಾಯ ಸಂಗ್ರಹಿಸಲು ಆ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಿತು. ಜತೆಗೆ, ಮದ್ರಾಸ್ ಹೈಕೋರ್ಟ್ನಲ್ಲಿ ನಡೆಯುತ್ತಿರುವ ವಿಚಾರಣೆ ಮುಂದುವರಿಯಬಹುದು. ಆದರೆ, ಅಂತಿಮ ತೀರ್ಪನ್ನು ಪ್ರಕಟಿಸುವಂತಿಲ್ಲ ಎಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ