ಮರಣ ಪ್ರಮಾಣ ಪತ್ರ: ಆಧಾರ್ ಬೇಕೇ ಬೇಕು
Team Udayavani, Aug 5, 2017, 6:40 AM IST
ಹೊಸದಿಲ್ಲಿ: ಪಾನ್, ತೆರಿಗೆ, ಬ್ಯಾಂಕ್ ಸಹಿತ ಎಲ್ಲೆಡೆ ಆಧಾರ್ ಸಂಖ್ಯೆ ಜೋಡಣೆ ಮಾಡುವುದನ್ನು ಕಡ್ಡಾಯವಾಗಿಸಿರುವ ಕೇಂದ್ರ ಸರಕಾರ, ಈಗ ಮರಣ ನೋಂದಣಿಗೂ ಕಡ್ಡಾಯಗೊಳಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಿರುವ ಗೃಹ ಸಚಿವಾಲಯ, ವ್ಯಕ್ತಿಯೊಬ್ಬರು ನಿಧನಹೊಂದಿದ ಬಳಿಕ ಮರಣ ಪ್ರಮಾಣ ಪತ್ರ ಪಡೆಯುವ ಸಂದರ್ಭ ಮೃತರ ಗುರುತು ದೃಢಪಡಿಸಲು ಆಧಾರ್ ಸಂಖ್ಯೆ ನೀಡುವುದು ಕಡ್ಡಾಯವಾಗಿದ್ದು, ಅ. 1ರಿಂದ ಈ ಆದೇಶ ಜಾರಿಗೆ ಬರಲಿದೆ. ಮೃತರ ಗುರುತು ಪತ್ತೆಗೆ ಸಂಬಂಧಿಸಿದಂತೆ ನಡೆಯುವ ವಂಚನೆ ತಡೆಯುವುದು ಸರಕಾರದ ಉದ್ದೇಶವಾಗಿದೆ ಎಂದು ಹೇಳಿದೆ. ಜಮ್ಮು- ಕಾಶ್ಮೀರ, ಅಸ್ಸಾಂ ಮತ್ತು ಮೇಘಾಲಯ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲೂ ಈ ಕ್ರಮ ಜಾರಿಯಾಗಲಿದೆ.
ಆಧಾರ್ ಇಲ್ಲದೆ ರಿಟರ್ನ್ಸ್ ಗೆ ಒಪ್ಪಿಗೆ: ಆಧಾರ್ ಸಂಖ್ಯೆಯನ್ನು ನೀಡದೆ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ವ್ಯಕ್ತಿಯೊಬ್ಬರಿಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ. ಆಧಾರ್ ಇಲ್ಲದೆ ಇರುವಂಥ ಅರ್ಜಿದಾರರ ಪಾನ್ ಕಾರ್ಡ್ ಅಮಾನ್ಯವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ನನ್ನಲ್ಲಿ ಆಧಾರ್ ಇಲ್ಲ. ಆಧಾರ್ನ ಮಾನ್ಯತೆ ಕುರಿತು ಸುಪ್ರೀಂನ ತೀರ್ಪು ಬರುವವರೆಗೂ ನಾನು ಆಧಾರ್ ಮಾಡಿಸುವುದಿಲ್ಲ ಎಂದು ಹೇಳಿ ಪ್ರಶಾಂತ್ ಸುಗತನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಒಪ್ಪಿದ ಕೋರ್ಟ್, ಆಧಾರ್ ಸಂಖ್ಯೆ ಇಲ್ಲದೆಯೇ ಐಟಿ ರಿಟರ್ನ್ಸ್ ಸಲ್ಲಿಸಲು ಅವರಿಗೆ ಅವಕಾಶ ಕಲ್ಪಿಸುವಂತೆ ಐಟಿ ಇಲಾಖೆಗೆ ಸೂಚಿಸಿದೆ.
ರೈಲು ಟಿಕೆಟ್ಗೆ ಆಧಾರ್ ಬೇಕಿಲ್ಲ
ರೈಲುಗಳಲ್ಲಿ ಮುಂಗಡವಾಗಿ ಆಸನ ಕಾಯ್ದಿರಿಸುವಾಗ ಆಧಾರ್ ಸಂಖ್ಯೆ ನೀಡುವುದು ಕಡ್ಡಾಯವಲ್ಲ ಎಂದು ರೈಲ್ವೇ ಖಾತೆ ಸಹಾಯಕ ಸಚಿವ ರಾಜೆನ್ ಗೊಹಾನಿ ಹೇಳಿದ್ದಾರೆ. ‘ರೈಲು ಟಿಕೆಟ್ ಬುಕ್ ಮಾಡುವಾಗ 12 ಅಂಕಿಗಳ ವಿಶಿಷ್ಟ ಗುರುತಿನ ಸಂಖ್ಯೆ ಕಡ್ಡಾಯವಾಗಿಸುವ ಪ್ರಸ್ತಾವ ಸದ್ಯಕ್ಕಂತೂ ಇಲಾಖೆ ಮುಂದಿಲ್ಲ’ ಎಂದು ರಾಜ್ಯಸಭೆಗೆ ಶುಕ್ರವಾರ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು
Sunil Narine ನಿವೃತ್ತಿ ತೊರೆದು ಟಿ20 ವಿಶ್ವಕಪ್ ಆಡಲಿ: ಪೊವೆಲ್
ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್ಗೆ ಅಮೆರಿಕ ಸಲಹೆ
MUST WATCH
ಹೊಸ ಸೇರ್ಪಡೆ
Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ