ಶ್ರದ್ಧಾ ದೇಹದ ಉಳಿದ ಭಾಗಗಳನ್ನು ಪತ್ತೆಹಚ್ಚಲು ಮುಂದುವರಿದ ಪ್ರಯತ್ನ
ಅಫ್ತಾಬ್ ನನ್ನ ವಿವಿಧ ಸ್ಥಳಗಳಿಗೆ ಕರೆದೊಯ್ಯುತ್ತಿರುವ ಪೊಲೀಸರು
Team Udayavani, Nov 19, 2022, 2:41 PM IST
ನವದೆಹಲಿ: ಪೊಲೀಸರು ಅಫ್ತಾಬ್ ಅಮೀನ್ ಪೂನಾವಾಲಾ ನನ್ನು ಶನಿವಾರ ದಕ್ಷಿಣ ದೆಹಲಿಯ ವಿವಿಧ ಸ್ಥಳಗಳಿಗೆ ಕರೆದೊಯ್ಯುತ್ತಿದ್ದು, ಶ್ರದ್ಧಾ ವಾಕರ್ ಅವರ ವಿಲೇವಾರಿ ಮಾಡಿದ ಹೆಚ್ಚಿನ ದೇಹದ ಭಾಗಗಳನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೋಲಿಸರ ಪ್ರಕಾರ, ಪೂನಾವಾಲಾ ಮೇ 18 ರಂದು ಕೃತ್ಯ ಎಸಗಿ ಆಕೆಯ ದೇಹದ 35 ಭಾಗಗಳನ್ನು ದಕ್ಷಿಣ ದೆಹಲಿಯ ಮೆಹ್ರೌಲಿಯಲ್ಲಿರುವ ತನ್ನ ನಿವಾಸದಲ್ಲಿ ಸುಮಾರು ಮೂರು ವಾರಗಳ ಕಾಲ 300 ಲೀಟರ್ ಫ್ರಿಡ್ಜ್ನಲ್ಲಿ ಇರಿಸಿ ಹಲವು ಸ್ಥಳಗಳಲ್ಲಿ ಎಸೆದಿದ್ದ. ಪೊಲೀಸರು ಇದುವರೆಗೆ ದೇಹದ 13 ಮೂಳೆಗಳನ್ನು ವಶಪಡಿಸಿಕೊಂಡಿದ್ದಾರೆ.
ಶುಕ್ರವಾರ ಪೊಲೀಸರು ಗುರುಗ್ರಾಮದಿಂದ ದೇಹದ ಕೆಲವು ಭಾಗಗಳನ್ನು ವಶಪಡಿಸಿಕೊಂಡಿದ್ದು, ಅದನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಸಂತ್ರಸ್ತೆಯ ತಲೆ ಇನ್ನೂ ಕಾಣೆಯಾಗಿದೆ.
ಪೂನಾವಾಲಾ ಅವರ ಮನೆಯಿಂದ ಹರಿತವಾದ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆಯ ತಂದೆ ಮತ್ತು ಸಹೋದರನ ಮಾದರಿಗಳನ್ನು ಅವರ ಡಿಎನ್ಎಗೆ ಹೊಂದಿಕೆಯಾಗುವಂತೆ ಸಂಗ್ರಹಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.ಆರೋಪಿಯು ನೀಡಿದ ಪ್ರತಿಕ್ರಿಯೆಗಳ ವಂಚಕ ಸ್ವಭಾವ ವನ್ನು ಗಮನದಲ್ಲಿಟ್ಟುಕೊಂಡು, ಆತನ ನಾರ್ಕೋ-ವಿಶ್ಲೇಷಣೆ ಪರೀಕ್ಷೆಯನ್ನು ನಡೆಸಲು ಅರ್ಜಿಯನ್ನು ಹಾಕಲಾಗಿದ್ದು ಮತ್ತು ಅದನ್ನು ದೆಹಲಿ ನ್ಯಾಯಾಲಯವು ಅನುಮೋದಿಸಿ ಪರೀಕ್ಷೆಯನ್ನು ಐದು ದಿನಗಳಲ್ಲಿ ಪೂರ್ಣಗೊಳಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ