ವೈದ್ಯರು-ಪೊಲೀಸ್-ವೇಶ್ಯೆಯರಿಗೆ ಆಹಾರ: ಹಸಿದವರ ಪಾಲಿಗೆ ಅನ್ನಪೂರ್ಣೆ ಈ ಆಕಾಂಕ್ಷಾ
Team Udayavani, May 28, 2021, 4:45 PM IST
ಪುಣೆ : 32 ವಯಸ್ಸಿನ ಆಕಾಂಕ್ಷಾ ಸಾಡೆಕರ್ ಹೆಸರಿನ ಯುವತಿ ಎಲೆಮರೆಯ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ಸಂಕಷ್ಟದಲ್ಲಿ ಹಸಿದ ಹೊಟ್ಟೆಗಳಿಗೆ ಅನ್ನ ನೀಡಿ ಸಾಕ್ಷಾತ್
ಅನ್ನಪೂರ್ಣೆಶ್ವರಿಯಂತಾಗಿದ್ದಾರೆ.
ಕಳೆದ ತಿಂಗಳು ಕೋವಿಡ್ ಸೋಂಕು ಕೈ ಮೀರಿದ ಹಿನ್ನೆಲೆ ಮಹಾರಾಷ್ಟ್ರದಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಯಿತು. ಸೋಂಕಿಗೆ ಕಡಿವಾಣ ಹಾಕಲು ಈ ಕ್ರಮ ಅನಿವಾರ್ಯವಾಯಿತು. ಲಾಕ್ ಡೌನ್ ವೇಳೆ ಸಾಕಷ್ಟು ಜನರು ಸಂಕಷ್ಟಕ್ಕೀಡಾದರು. ಸರಿಯಾಗಿ ಊಟ ಸಿಗದೆ ಪರಿತಪಿಸಿದರು. ಇಂತಹ ಸಂದರ್ಭದಲ್ಲಿ ಹಸಿದ ಹೊಟ್ಟೆಗಳಿಗೆ ಅನ್ನ ನೀಡಲು ಅಕಾಂಕ್ಷಾ ಸಾಡೆಕರ್ ಪಣ ತೊಟ್ಟರು.
ಕೋವಿಡ್ ಕಾರ್ಯದಲ್ಲಿ ನಿರತರಾಗಿರುವ ವೈದ್ಯರು ಹಾಗೂ ಪೊಲೀಸರು, ವೈದ್ಯಕೀಯ ವಿದ್ಯಾರ್ಥಿಗಳಿಗೆ ನಿತ್ಯ ಆಹಾರ ತಲುಪಿಸುತ್ತಿದ್ದಾರೆ ಅಕಾಂಕ್ಷಾ. ಕುಟುಂಬದಿಂದ ದೂರ ಇರುವ ವೈದ್ಯಕೀಯ ವಿದ್ಯಾರ್ಥಿಗಳಿಗೂ ಇವರ ಅನ್ನ ದಾಸೋಹದ ಸೇವೆ ತಲುಪುತ್ತಿದೆ.
ವೇಶ್ಯೆಯರ ಮನೆ ಬಾಗಿಲಿಗೆ ಊಟ :
ಆಕಾಂಕ್ಷಾ ಅವರು ಕೇವಲ ಪೊಲೀಸ್ ಸಿಬ್ಬಂದಿ ಹಾಗೂ ವೈದ್ಯರಿಗೆ ಮಾತ್ರ ಆಹಾರ ನೀಡುತ್ತಿಲ್ಲ, ಬದಲಾಗಿ ವೇಶ್ಯೆಯರ ಹಸಿವನ್ನು ನೀಗಿಸುತ್ತಿದ್ದಾರೆ. ಅವರ ಮನೆ ಬಾಗಿಲಿಗೆ ತೆರಳಿ ಆಹಾರದ ಪೊಟ್ಟಣಗಳನ್ನು ತಲುಪಿಸುತ್ತಿದ್ದಾರೆ.
ಪ್ರತಿ ದಿನ ಮುಂಜಾನೆ ತಾವೇ ಅಡುಗೆ ಸಿದ್ಧಪಡಿಸಿ, ಪೊಟ್ಟಣಗಳಲ್ಲಿ ತುಂಬಿಕೊಂಡು ತಮ್ಮ ಸ್ಕೂಟರ್ ಮೂಲಕ ಹೊರಡುವ ಆಕಾಂಕ್ಷಾ, ಇಡೀ ಪಟ್ಟಣ ತಿರುಗಾಡಿ ಆಹಾರ ತಲುಪಿಸಿ ಬರುತ್ತಿದ್ದಾರೆ. ಇದುವರೆಗೆ ಸುಮಾರು 7000 ಜನರ ಹಸಿವು ನೀಗಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ