ಕಾಂಗ್ರೆಸ್ ಜತೆ ಆಪ್ ಮೈತ್ರಿ ಡೌಟ್
Team Udayavani, Dec 23, 2018, 6:10 AM IST
ಹೊಸದಿಲ್ಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿಗೆ ನೀಡಲಾಗಿರುವ ಭಾರತ ರತ್ನ ಪುರಸ್ಕಾರವನ್ನು ಹಿಂಪಡೆಯಬೇಕು ಎಂದು ಶುಕ್ರವಾರ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಿ ವಿವಾದಕ್ಕೀಡಾಗಿರುವ ಆಮ್ ಆದ್ಮಿ ಪಕ್ಷ ಶನಿವಾರ ಉಲ್ಟಾ ಹೊಡೆದಿದೆ.
1984 ಸಿಖ್ ದಂಗೆಯಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಈ ಕ್ರಮ ಕೈಗೊಳ್ಳಬೇಕು ಎಂದು ನಿಲುವಳಿಯಲ್ಲಿ ವಿವರಿಸಲಾಗಿದ್ದು, ಇದನ್ನು ತಿಲಕ್ನಗರ ಶಾಸಕ ಜರ್ನೈಲ್ ಸಿಂಗ್ ಮಂಡಿಸಿದ್ದರು. ಆದರೆ ಆಪ್ ಶಾಸಕ ಸೋಮನಾಥ್ ಭಾರ್ತಿ ಈ ನಿಲುವಳಿ ಚರ್ಚೆಯ ವೇಳೆ “ಭಾರತ ರತ್ನ’ ವಿಚಾರ ಪ್ರಸ್ತಾಪಿಸಿದ್ದರು. ಮೂಲ ನಿಲುವಳಿಯಲ್ಲಿ ಈ ವಿವರ ಇರಲಿಲ್ಲ. ಹಾಗಾಗಿ ಭಾರತ ರತ್ನ ಕುರಿತು ನಿಲುವಳಿ ಅಂಗೀಕರಿಸಿಲ್ಲ ಎಂದು ಸ್ಪೀಕರ್ ರಾಮ್ನಿವಾಸ್ ಗೋಯಲ್ ಹಾಗೂ ಡಿಸಿಎಂ ಸಿಸೋಡಿಯಾ ಶನಿವಾರ ಸ್ಪಷ್ಟನೆ ನೀಡಿದ್ದಾರೆ. ಆದರೆ, ಈ ವಿವಾದದಿಂದಾಗಿ ಆಪ್ಗೆ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಅವಕಾಶವೂ ತಪ್ಪಿಹೋದಂತಾಗಿದೆ.
ಇದೇ ವೇಳೆ, ಭಾರತ ರತ್ನ ವಿಚಾರ ಪ್ರಸ್ತಾಪಿಸಿದ ಭಾರ್ತಿ ಅವರಿಗೆ ಸಿಎಂ ಕೇಜ್ರಿವಾಲ್ “ಯಾಕೆ ನಿಮ್ಮ ವಿರುದ್ಧ ಈ ಬಗ್ಗೆ ಕ್ರಮ ಕೈಗೊಳ್ಳಬಾರದು’ ಎಂದು ಪ್ರಶ್ನಿಸಿದ್ದಾರೆ. ಇನ್ನೊಂದೆಡೆ, ಇದೇ ಕಾರಣಕ್ಕೆ ಶಾಸಕಿ ಅಲಕಾ ಲಂಬಾ ರಾಜೀನಾಮೆಯನ್ನೂ ಪಡೆದಿದ್ದಾರೆ ಎನ್ನಲಾಗಿತ್ತು. ಆದರೆ, ನಂತರ ಪಕ್ಷ ಹಾಗೂ ಲಂಬಾ ಅವರು ರಾಜೀನಾಮೆ ವದಂತಿ ತಳ್ಳಿಹಾಕಿದ್ದಾರೆ. ಇತ್ತೀಚೆಗಷ್ಟೇ ಪ್ರತಿಪಕ್ಷಗಳ ಜೊತೆಗೆ ಕೇಜ್ರಿವಾಲ್ ವೇದಿಕೆ ಹಂಚಿಕೊಂಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜತೆ ಕೈಜೋಡಿಸುತ್ತಾರೆ ಎಂದು ಸುದ್ದಿಯಾಗಿತ್ತು.
ರಾಜೀವ್ಗಾಂಧಿಗೆ ನೀಡಲಾಗಿರುವ ಭಾರತ ರತ್ನ ವಾಪಸ್ ಪಡೆಯಬೇಕೆಂದು ಈವರೆಗೆ ಬಿಜೆಪಿ ಕೂಡ ಆಗ್ರಹಿಸಿರಲಿಲ್ಲ. ಕೇಜ್ರಿವಾಲ್ ಕೂಡಲೇ ಕ್ಷಮೆ ಕೋರಬೇಕು.
– ಅಜಯ್ ಮಕೇನ್, ದೆಹಲಿ ಕಾಂಗ್ರೆಸ್ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…