AAP ಸಂಸದ ರಾಘವ್ ಚಡ್ಡಾ ರಾಜ್ಯಸಭೆಯಿಂದ ಅಮಾನತು
Team Udayavani, Aug 11, 2023, 5:43 PM IST
ಹೊಸದಿಲ್ಲಿ: ಎಎಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರನ್ನು ಶುಕ್ರವಾರ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.ನಿಯಮ ಮೀರಿದ ವರ್ತನೆ, ದುರ್ನಡತೆ ಮತ್ತು ಅವಹೇಳನಕಾರಿ ಹೇಳಿಕೆ ನೀಡಿ ಸದನದ ನಿಯಮದ ಸಂಪೂರ್ಣ ಉಲ್ಲಂಘನೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ.
ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶದ ಸರಕಾರದ (ತಿದ್ದುಪಡಿ) ಮಸೂದೆ, 2023 ರ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಮೇಲ್ಮನೆಯ ನಾಲ್ವರು ಸದಸ್ಯರ ಹೆಸರನ್ನು ಸೇರಿಸಿದ್ದಕ್ಕಾಗಿ ಎಎಪಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸದನದ ನಾಯಕ ಪಿಯೂಷ್ ಗೋಯಲ್ ಅವರು ಮಂಡಿಸಿದ ಪ್ರಸ್ತಾವನೆಯನ್ನು ಅನುಸರಿಸಿ ಅವರನ್ನು ಅಮಾನತುಗೊಳಿಸಲಾಗಿದೆ. ಧ್ವನಿ ಮತದ ಮೂಲಕ ಈ ಪ್ರಸ್ತಾವವನ್ನು ಅಂಗೀಕರಿಸಲಾಯಿತು.
ಆಪ್ ಆಕ್ರೋಶ
”ಬಿಜೆಪಿಯ ಸುಳ್ಳನ್ನು ಬಯಲಿಗೆಳೆದ ರಾಘವ್ ಚಡ್ಡಾ ಅವರನ್ನು ಅಮಾನತುಗೊಳಿಸಲಾಗಿದೆ. ಅಮಿತ್ ಶಾ ಅವರದ್ದು ನಕಲಿ ಸಹಿ ಆರೋಪದ ಉದಾಹರಣೆ ನೀಡುವ ಮೂಲಕ ಉತ್ತರಿಸಲಾಗಿದೆ” ಎಂದು ಆಮ್ ಆದ್ಮಿ ಪಕ್ಷದ ನಾಯಕರು ಕಿಡಿ ಕಾರಿದ್ದಾರೆ.
ಸಂಜಯ್ ಸಿಂಗ್ ಕಿಡಿ
ಎರಡು ಬಾರಿ ಶಿಕ್ಷೆ ನೀಡುತ್ತಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು. ಇಂದು ಸಂಸತ್ತಿನ ಅಧಿವೇಶನ ಮುಗಿಯುತ್ತಿದ್ದಂತೆ ನನ್ನ ಅಮಾನತು ಅವಧಿಯನ್ನು ವಿಸ್ತರಿಸಲಾಗಿದೆ.ಪ್ರಧಾನಿ ಮೋದಿ ಅವರು ಮಣಿಪುರ ವಿಚಾರದಲ್ಲಿ ಮಾತನಾಡುವುದು ನೋಡಿದಾಗ ನನಗೆ ಇದರ ಕಾರಣ ಅರ್ಥವಾಯಿತು. ಅವರು ಏನೂ ಹೇಳಲಾಗದೆ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ.ಬ್ಲಾ ಬ್ಲಾ… ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು