ಸರಕಾರಿ ರಜೆ ರದ್ದು: ಆಪ್ ಸರಕಾರಕ್ಕೆ ಯೋಗಿ ಮಾದರಿ
Team Udayavani, Apr 29, 2017, 1:36 AM IST
ಹೊಸದಿಲ್ಲಿ: ರಜೆಯ ವಿಚಾರದಲ್ಲಿ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರವನ್ನು ದಿಲ್ಲಿಯ ಆಮ್ ಆದ್ಮಿ ಪಕ್ಷದ ಸರಕಾರ ಮಾದರಿಯಾಗಿಟ್ಟುಕೊಂಡಿದೆ. ಉತ್ತರಪ್ರದೇಶದ ಬೆನ್ನಲ್ಲೇ ಇದೀಗ ದಿಲ್ಲಿಯಲ್ಲೂ ಗಣ್ಯರ ಪುಣ್ಯತಿಥಿ ಮತ್ತು ಜಯಂತಿಗಳಿಗೆ ಸರಕಾರಿ ರಜೆ ನೀಡುವುದನ್ನು ನಿಷೇಧಿಸಲಾಗಿದೆ. ಶುಕ್ರವಾರ ಈ ಕುರಿತು ದಿಲ್ಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ. ‘ಶ್ರೇಷ್ಠ ವ್ಯಕ್ತಿಗಳ ಪುಣ್ಯ ತಿಥಿ ಮತ್ತು ಜಯಂತಿಗಳಿಗೆ ದಿಲ್ಲಿ ಸರಕಾರ ಸರಕಾರಿ ರಜೆಗಳನ್ನು ರದ್ದುಗೊಳಿಸಲಿದೆ. ಈ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ’ ಎಂದಿದ್ದಾರೆ.
ಅಷ್ಟೇ ಅಲ್ಲ, ಉತ್ತರಪ್ರದೇಶದ ಯೋಗಿ ಸರಕಾರವನ್ನು ಶ್ಲಾಘಿಸಿರುವ ಸಿಸೋಡಿಯಾ, ಅಲ್ಲಿನ ಸರಕಾರದ ನಿರ್ಧಾರ ಉತ್ತಮವಾದದ್ದು. ನಾವು ಒಳ್ಳೆಯ ಕೆಲಸಗಳನ್ನು ಯಾರೇ ಮಾಡಿದರೂ ಅದನ್ನು ಸ್ವೀಕರಿಸಲು ಸಿದ್ಧ ಎಂದಿದ್ದಾರೆ. ಇದೇ ತಿಂಗಳ 25ರಂದು ಆದೇಶ ಹೊರಡಿಸಿದ್ದ ಯೋಗಿ ಆದಿತ್ಯನಾಥ್ ಸರಕಾರ, ಶಾಲೆಗಳಿಗೆ ನೀಡಲಾಗುತ್ತಿದ್ದ 15 ರಜೆಗಳನ್ನು ರದ್ದು ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ