ದಿಲ್ಲಿಯಲ್ಲಿ ಆಪ್ – ಅಧಿಕಾರಶಾಹಿ ನಡುವಿನ ಸಮರ ತಾರಕಕ್ಕೆ
Team Udayavani, Feb 20, 2018, 3:32 PM IST
ಹೊಸದಿಲ್ಲಿ : ದಿಲ್ಲಿ ಆಮ್ ಆದ್ಮಿ ಪಕ್ಷದ ಶಾಸಕರು ಮತ್ತು ಅಧಿಕಾರಶಾಹಿ ನಡುವಿನ ಸಮರ ಈಗ ತಾರಕಕ್ಕೇರಿದೆ. ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರ ನಿವಾಸದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಶಾಸಕರು ಹಲ್ಲೆ ಮಾಡಿದರೆಂಬ ಆರೋಪ ಈಗ ಬೆಂಕಿಯಂತೆ ಭುಗಿಲೆದ್ದಿದೆ.
ತಾಜಾ ವರದಿಗಳ ಪ್ರಕಾರ ಆಪ್ ನಾಯಕ ಆಶಿಶ್ ಖೇತಾನ್ ಅವರು ದಿಲ್ಲಿ ಮಂತ್ರಾಲಯದಲ್ಲಿ ಮಂಗಳವಾರ ತನ್ನ ಮೇಲೆ ಹಲ್ಲೆ ನಡೆಯಿತೆಂದು ಹೇಳಿದ್ದಾರೆ.
ಆಪ್ ನಾಯಕ ಖೇತಾನ್ ಈ ಜಗಳದ ಪರಾಕಾಷ್ಠೆಯಲ್ಲಿ ದಿಲ್ಲಿ ಪೊಲೀಸ್ ಪಿಸಿಆರ್ ಗೆ ಫೋನ್ ಮಾಡಿದ್ದು ಪೊಲೀಸರು ತತ್ಕ್ಷಣವೇ ದಿಲ್ಲಿ ಮಂತ್ರಾಲಯಕ್ಕೆ ಧಾವಿಸಿ ಬಂದಿದ್ದಾರೆ.
ದಿಲ್ಲಿ ಸರಕಾರದ ಅಧಿಕಾರಶಾಹಿ, ಈ ಅಹಿತಕರ ಪ್ರಕರಣಗಳನ್ನು ಆಪ್ ಸರಕಾರ ಇತ್ಯರ್ಥ ಪಡಿಸುವ ವರೆಗೆ ತಾವು ಕಚೇರಿ ಕೆಲಸಗಳನ್ನು ನಿರ್ವಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಐಎಎಸ್ ಸದಸ್ಯರು ಈ ಬಗ್ಗೆ ಸಭೆಯೊಂದನ್ನು ನಡೆಸಿ ಆ ಬಳಿಕ ದಿಲ್ಲಿ ಲೆ. ಗವರ್ನರ್ ಅನಿಲ್ ಬೈಜಾಲ್ ಅವರನ್ನು ಭೇಟಿಯಾಗಿದ್ದಾರೆ.
ಎಲ್ಜಿ ಜತೆಗಿನ ಸಭೆಯ ಬಳಿಕ ಐಎಎಸ್ ಸಂಘದ ಕಾರ್ಯದರ್ಶಿ ಮನೀಷ್ ಸಕ್ಸೇನಾ ಅವರು ಮಾಧ್ಯಮದವರೊಂದಿಗೆ ಮಾತನಾಡಿ “ಈ ರೀತಿಯ ಘಟನೆಗಳು ಕಳೆದ ಹಲವು ವರ್ಷಗಳಿಂದ ನಡೆಯುತ್ತಿದ್ದು ಅನೇಕ ಅಧಿಕಾರಿಗಳನ್ನು ಅವಮಾನಿಸಲಾಗಿದೆ’ ಎಂದು ಹೇಳಿದ್ದಾರೆ.
ಲೆ. ಗವರ್ನರ್ ಅವರು ಈ ಅಹಿತಕರ ಘಟನೆಗಳಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು; ಇದೊಂದು ಸಾಂವಿಧಾನಿಕ ಬಿಕ್ಕಟ್ಟು ಆಗಿದೆ; ಈ ರೀತಿಯ ಘಟನೆಗಳು ಹಿಂದಿನ ಸರಕಾರಗಳ ಅವಧಿಯಲ್ಲಿ ಅನೇಕ ವರ್ಷಗಳ ಕಾಲ ನಡೆದ ಉದಾಹರಣೆಯೇ ಇಲ್ಲ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ