
ದೇಶಾದ್ಯಂತ ಪಿಎಫ್ ಐ ಕಚೇರಿಗಳ ಮೇಲೆ ಎನ್ ಐಎ ದಾಳಿ: ರಾಹುಲ್ ಹೇಳಿದ್ದೇನು?
ಹಿಂಸಾಚಾರಗಳು ಎಲ್ಲಿಂದ ಬಂದರೂ ಒಂದೇ....
Team Udayavani, Sep 22, 2022, 4:00 PM IST

ಎರ್ನಾಕುಲಂ: ”ಎಲ್ಲಾ ರೀತಿಯ ಕೋಮುವಾದ ಮತ್ತು ಹಿಂಸಾಚಾರಗಳು ಎಲ್ಲಿಂದ ಬಂದರೂ ಒಂದೇ ಆಗಿರುತ್ತವೆ ಮತ್ತುಅದರ ವಿರುದ್ಧ ಹೋರಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ : ಹಿಜಾಬ್ ಪ್ರಕರಣ- 10 ದಿನಗಳ ವಿಚಾರಣೆ ಅಂತ್ಯ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್
”ಭಾರತ್ ಜೋಡೋ” ಪಾದಯಾತ್ರೆಯ ವೇಳೆ ಗುರುವಾರ ಸುದ್ದಿಗೋಷ್ಠಿ ಯಲ್ಲಿ ಪಿಎಫ್ಐ ಕಚೇರಿಗಳು ಮತ್ತು ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ”ಕೋಮುವಾದ ಮತ್ತು ಹಿಂಸಾಚಾರಗಳು ಎಲ್ಲಿಂದ ಬಂದರೂ ಒಂದೇ ಆಗಿರುತ್ತವೆ ಮತ್ತು ಅದರ ವಿರುದ್ಧ ಶೂನ್ಯ ಸಹಿಷ್ಣುತೆ ಇರಬೇಕು” ಎಂದರು.
”ಕಾಂಗ್ರೆಸ್ ಅಧ್ಯಕ್ಷ ಹುದ್ದೆ ಭಾರತದ ನಿರ್ದಿಷ್ಟ ದೃಷ್ಟಿಕೋನವನ್ನು ವ್ಯಾಖ್ಯಾನಿಸುವ ಐತಿಹಾಸಿಕ ಸ್ಥಾನ, ಸೈದ್ಧಾಂತಿಕ ಹುದ್ದೆ. ನಂಬಿಕೆ ವ್ಯವಸ್ಥೆ ಮತ್ತು ಭಾರತದ ದೃಷ್ಟಿಯನ್ನು ಪ್ರತಿನಿಧಿಸಬೇಕಾಗುತ್ತದೆ” ಎಂದರು.
”ಈ ದೇಶದ ಸಾಂಸ್ಥಿಕ ಚೌಕಟ್ಟನ್ನು ಹಿಡಿದಿಟ್ಟುಕೊಂಡಿರುವ ಆಡಳಿತ ಯಂತ್ರದೊಂದಿಗೆ ನಾವು ಹೋರಾಡುತ್ತಿದ್ದೇವೆ, ಅದು ಅನಿಯಮಿತ ಹಣ ಮತ್ತು ಜನರನ್ನು ಖರೀದಿಸುವ, ಒತ್ತಡ ಹೇರುವ ಮತ್ತು ಬೆದರಿಕೆ ಹಾಕುವ ಸಾಮರ್ಥ್ಯವನ್ನು ಹೊಂದಿದೆ. ಅದರ ಫಲಿತಾಂಶವನ್ನು ನೀವು ಗೋವಾದಲ್ಲಿ ನೋಡಿದ್ದೀರಿ” ಎಂದರು.
”ಉದಯಪುರದಲ್ಲಿ ನಾವು ನಿರ್ಧರಿಸಿದ್ದು (ಒಬ್ಬ ವ್ಯಕ್ತಿ, ಒಂದು ಹುದ್ದೆ) ಕಾಂಗ್ರೆಸ್ನ ಬದ್ಧತೆ ಮತ್ತು ಬದ್ಧತೆಯನ್ನು ಉಳಿಸಿಕೊಳ್ಳಲಾಗುವುದು ಎಂದು ನಾನು ನಿರೀಕ್ಷಿಸುತ್ತೇನೆ” ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
