ಇವಿಎಂ ದೂಷಿಸಬೇಡಿ, ಸೋಲನ್ನು ಒಪ್ಪಿಕೊಳ್ಳಿ; ವಿಪಕ್ಷಗಳಿಗೆ ರವಿಶಂಕರ್ ಪ್ರಸಾದ್
Team Udayavani, May 22, 2019, 12:53 PM IST
ನವದೆಹಲಿ:ವಿದ್ಯುನ್ಮಾನ(ಇವಿಎಂ) ಮತಯಂತ್ರಗಳ ಮೇಲೆ ಸಂಶಯ ವ್ಯಕ್ತಪಡಿಸುತ್ತಿರುವ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಮತ್ತೊಂದು ಬಾರಿಯೂ ನರೇಂದ್ರ ಮೋದಿ ಅವರು ಭರ್ಜರಿ ಬಹುಮತದೊಂದಿಗೆ ಪ್ರಧಾನಿಯಾಗಲಿದ್ದಾರೆ. ವಿರೋಧ ಪಕ್ಷಗಳ ಸೋಲನ್ನು ಒಪ್ಪಿಕೊಳ್ಳಲೇಬೇಕಾಗಿದೆ ಎಂದು ತಿಳಿಸಿದ್ದಾರೆ.
ಮಮತಾ ಬ್ಯಾನರ್ಜಿ, ಎನ್ ಚಂದ್ರಬಾಬು ನಾಯ್ಡು ಮತ್ತು ಅಮರೀಂದರ್ ಸಿಂಗ್ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗಲು ಯಾವುದೇ ತೊಂದರೆಯಾಗಲಿಲ್ಲ. ಆದರೆ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಮಾತ್ರ ಇವಿಎಂ ಸರಿ ಇರೋದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಎರಡು ಬಾರಿ ಪಶ್ಚಿಮಬಂಗಾಳ ಮುಖ್ಯಮಂತ್ರಿಯಾದಾಗ ಮಮತಾ ಬ್ಯಾನರ್ಜಿಗೆ ಇವಿಎಂ ಉತ್ತಮವಾಗಿತ್ತು. ಅಮರೀಂದರ್ ಸಿಂಗ್ ಗೆ ಪಂಜಾಬ್ ಮುಖ್ಯಮಂತ್ರಿಯಾದಾಗಲೂ ಇವಿಎಂ ಸರಿ ಇತ್ತು. ಒಂದು ವೇಳೆ ಅವರು ಗೆದ್ದರೆ ಇವಿಎಂ ಸರಿ ಇದೆ ಎಂದು ಅರ್ಥ! ಆದರೆ ದೇಶದ ಜನರು ಬಯಸಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾದರೆ..ಆಗ ಇವಿಎಂ ಅನ್ನು ನಂಬುವಂತಿಲ್ಲ!
ಈ ನಿಟ್ಟಿನಲ್ಲಿ ವಿಪಕ್ಷಗಳು ಸೋಲನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು. ಇವಿಎಂ ಮೇಲೆ ಗೂಬೆ ಕೂರಿಸೋದನ್ನು ಬಿಡಿ ಎಂದು ರವಿಶಂಕರ್ ಪ್ರಸಾದ್ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ