ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
14 ವರ್ಷಗಳ ಬಳಿಕ ಹೀರೋ ನಂ.1 ರಾಜಕೀಯ ಮರುಪ್ರವೇಶ
Team Udayavani, Mar 29, 2024, 2:48 PM IST
ಮುಂಬಯಿ: ಖ್ಯಾತ ಬಾಲಿವುಡ್ ನಟ, ಕಾಂಗ್ರೆಸ್ನ ಮಾಜಿ ಸಂಸದ ಗೋವಿಂದ ಅವರು ಗುರು ವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸಮ್ಮುಖದಲ್ಲಿ ಶಿವಸೇನೆ(ಶಿಂಧೆ ಬಣ) ಸೇರ್ಪಡೆಗೊಂಡರು.
ಈ ಮೂಲಕ ಹೀರೋ ನಂ.1 ಎಂದೇ ಖ್ಯಾತರಾಗಿರುವ ಗೋವಿಂದ ಅವರು ತಮ್ಮ 14 ವರ್ಷಗಳ “ರಾಜಕೀಯ ವನವಾಸ’ವನ್ನು ಅಂತ್ಯಗೊಳಿಸಿದ್ದಾರೆ. ಇದೇ ವೇಳೆ, ನಟ ಗೋವಿಂದ ಅವರನ್ನು ಸಿಎಂ ಶಿಂಧೆ ಪಕ್ಷದ ಸ್ಟಾರ್ ಪ್ರಚಾರಕರನ್ನಾಗಿ ಘೋಷಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಗೋವಿಂದ, ರಾಜಕೀಯಕ್ಕೆ ಮರು ಪ್ರವೇಶ ಮಾಡುವ ಕಲ್ಪನೆಯೂ ಇರಲಿಲ್ಲ ಎಂದರು.
2004ರಲ್ಲಿ ಮುಂಬಯಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಇವರು, ಪ್ರತಿಸ್ಪರ್ಧಿ ಬಿಜೆಪಿಯ ರಾಮ್ ನಾಯಕ್ರನ್ನು ಭಾರೀ ಮತಗಳ ಅಂತರದಲ್ಲಿ ಪರಾಭವಗೊಳಿಸಿದ್ದರು. ಅವ ರಿಗೆ ಬಿಜೆಪಿ ಮುಂಬಯಿ ವಾಯವ್ಯ ಕ್ಷೇತ್ರದ ಟಿಕೆಟ್ ನೀಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
MUST WATCH
ಹೊಸ ಸೇರ್ಪಡೆ
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!