ಅನಾಜ್ ಮಂಡಿ ಅಗ್ನಿ ದುರಂತ: ಹಲವರನ್ನು ರಕ್ಷಿಸಿ ಆಸ್ಪತ್ರೆ ಸೇರಿದ ‘ಆಪತ್ಬಾಂಧವ’ ಅಧಿಕಾರಿ


Team Udayavani, Dec 8, 2019, 6:13 PM IST

Anaj-Mandi-Fire-Break-out-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಇಲ್ಲಿನ ಅನಾಜ್ ಮಂಡಿ ಪ್ರದೇಶದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ಅಗ್ನಿ ದುರಂತ ಸುಮಾರು ನಲವತ್ತಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿದೆ. ಮತ್ತು ಈ ದುರಂತದಲ್ಲಿ ಹಲವರು ಗಂಭೀರವಾಗಿ ಮತ್ತು ಸಣ್ಣ ಸ್ವರೂಪದ ಗಾಯಗಳಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ನಡೆದ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳಗಳು ಮತ್ತು ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡದ್ದರಿಂದ ಹಲವರನ್ನು ರಕ್ಷಿಸಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ.

ಈ ಘಟನೆಯಲ್ಲಿ ತನ್ನ ಪ್ರಾಣವನ್ನು ಪಣಕ್ಕಿಟ್ಟು ಹನ್ನೆರಡಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಒಬ್ಬರು ಇದೀಗ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡದ್ದರಿಂದ ಬೆಂಕಿಯ ಹೊಗೆ ಸೇವಿಸಿದ ಕಾರಣ ಅಸ್ವಸ್ಥಗೊಂಡ ಈ ಅಧಿಕಾರಿ ಇದೀಗ ಅಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಹೀಗೆ ತನ್ನ ಪ್ರಾಣದ ಹಂಗನ್ನೂ ತೊರೆದು ಧಗಧಗಿಸಿ ಉರಿಯುತ್ತಿದ್ದ ಆ ಕಟ್ಟಡದ ಒಳಭಾಗಕ್ಕೆ ನುಗ್ಗಿ ಅಲ್ಲಿ ಹೊಗೆಯ ಕಾರಣದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದವರನ್ನು ರಕ್ಷಣಾ ತಂಡದ ಸಹಾಯದಿಂದ ಹೊತ್ತುಕೊಂಡೇ ಬಂದು ಆ್ಯಂಬುಲೆನ್ಸ್ ಗೆ ತುಂಬುತ್ತಿದ್ದ ಆ ದಿಟ್ಟ ಅಧಿಕಾರಿಯ ಹೆಸರು ರಾಜೇಶ್ ಶುಕ್ಲಾ.

ಅಗ್ನಿ ದುರಂತ ಸಂಭವಿಸಿರುವ ವಿಷಯ ತಿಳಿದು ಶುಕ್ಲಾ ಅವರು ಘಟನಾ ಸ್ಥಳಕ್ಕೆ ತಲುಪಿದ ಸಂದರ್ಭದಲ್ಲಿ ಕಟ್ಟಡದ ಎರಡನೇ ಮಹಡಿಯಲ್ಲಿ ಒಂದಷ್ಟು ಜನ ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿಯನ್ನು ಅಲ್ಲಿದ್ದವರು ಅವರಿಗೆ ನೀಡುತ್ತಾರೆ.

ಫೈರ್ ಸೂಟ್ ಧರಿಸಿಯೇ ಘಟನಾ ಸ್ಥಳಕ್ಕೆ ಆಗಮಿಸಿದ್ದ ಶುಕ್ಲಾ ಅವರು ಕ್ಷಣಮಾತ್ರವೂ ವಿಳಂಬಿಸದೇ ಕಟ್ಟಡದ ಎರಡನೇ ಮಹಡಿಗೆ ನುಗ್ಗಿಯೇ ಬಿಡುತ್ತಾರೆ. ಮತ್ತು ಅವರು ಅಲ್ಲಿಗೆ ತಲುಪಿದ ಸಂದರ್ಭದಲ್ಲಿ ಇಬ್ಬರು ಮಾತ್ರವೇ ಪ್ರಜ್ಞೆಯಲ್ಲಿದ್ದರು ಮತ್ತು ಹಲವರು ಪ್ರಜ್ಞಾಹೀನರಾಗಿ ನೆಲದ ಮೇಲೆ ಬಿದ್ದಿದ್ದರು.

ಆ ಇಬ್ಬರನ್ನು ತಕ್ಷಣವೇ ತನ್ನ ಜೊತೆಯಲ್ಲಿ ಹೊರಬರಲು ತಿಳಿಸಿದ ರಾಜೇಶ್ ಶುಕ್ಲಾ ಇತರರನ್ನು ರಕ್ಷಣಾ ಕಾರ್ಯಾಚರಣಾ ತಂಡದವರ ಜೊತೆಯಲ್ಲಿ ಹೊತ್ತುಕೊಂಡು ಹೊರಬರಲಾಯಿತು. ಹೀಗೆ ಪ್ರಥಮ ಹಂತದ ಕಾರ್ಯಾಚರಣೆಯಲ್ಲಿ ಶುಕ್ಲಾ ಅವರು ಪ್ರಜ್ಞಾಹೀನರಾಗಿದ್ದ 12 ಜನರನ್ನು ರಕ್ಷಿಸಿದರು.

ಕಿರಿದಾದ ಆ ಪ್ರದೇಶದಲ್ಲಿ ಅಗ್ನಿಶಾಮಕ ದಳದ ವಾಹನಗಳು ಆಗಾಗಲೇ ಕಾರ್ಯಾಚರಣೆಗೆ ಇಳಿದಿದ್ದ ಕಾರಣ ಆ್ಯಂಬುಲೆನ್ಸ್ ಗಳು ಗಲ್ಲಿಯೊಳಗೆ ಪ್ರವೇಶಿಸುವಂತಿರಲಿಲ್ಲ. ಹೀಗಾಗಿ ಶುಕ್ಲಾ ಮತ್ತು ರಕ್ಷಣಾ ತಂಡದವರು ಸಂತ್ರಸ್ತರನ್ನು ಹೊತ್ತುಕೊಂಡೇ ಮುಖ್ಯ ರಸ್ತೆಯವರೆಗೆ ಬಂದು ಅಲ್ಲಿಂದ ಆ್ಯಂಬುಲೆನ್ಸ್ ನಲ್ಲಿ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸುತ್ತಿದ್ದರು.

ರಾಜೇಶ್ ಶುಕ್ಲಾ ಅವರು ಮತ್ತೆ ಎರಡನೇ ಸಲ ದುರಂತ ಕಟ್ಟಡದ ಸಮೀಪಕ್ಕೆ ಬಂದಾಗ ಕಟ್ಟಡದೊಳಗೆ ಇನ್ನಷ್ಟು ಜನರು ಸಿಲುಕಿಕೊಂಡಿದ್ದಾರೆ ಎಂಬ ಮಾಹಿತಿ ಸಿಗುತ್ತದೆ. ಈ ಸಂದರ್ಭದಲ್ಲಿ ಬೆಂಕಿ ತನ್ನ ರುದ್ರನರ್ತನವನ್ನು ಪ್ರಾರಂಭಿಸಿಯಾಗಿತ್ತು. ಆದರೂ ಹೇಗೋ ಅವರು ಅದನ್ನು ನಿವಾರಿಸಿಕೊಂಡು ಒಳನುಗ್ಗುತ್ತಾರೆ. ಆಗ ಕೋಣೆಯೊಂದರಲ್ಲಿ ಸುಮಾರು 30 ಜನರು ಪ್ರಜ್ಞಾಹೀನರಾಗಿ ಬಿದ್ದಿರುವುದು ಅವರ ಕಣ್ಣಿಗೆ ಬೀಳುತ್ತದೆ.

ಅವರಲ್ಲಿ ಕೆಲವರನ್ನು ರಕ್ಷಿಸುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗುತ್ತದೆ. ಆದರೆ ಈ ಸಂದರ್ಭದಲ್ಲಿ ಬಹಳಷ್ಟು ಹೊಗೆಯನ್ನು ಸೇವಿಸಿದ್ದರಿಂದ ರಾಜೇಶ್ ಶುಕ್ಲಾ ಅವರು ಅಸ್ವಸ್ಥಗೊಳ್ಳುತ್ತಾರೆ ಮತ್ತು ಅವರ ಮಂಡಿಚಿಪ್ಪಿಗೂ ಸಹ ಘಾಸಿಯಾಗಿರುತ್ತದೆ. ಆ ಬಳಿಕ ಅವರನ್ನು ಲೋಕ ನಾಯಕ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಅಲ್ಲಿ ಅವರಿಗೆ ಆಮ್ಲಜನಕ ಪೂರೈಕೆ ಮಾಡಿ ವೈದ್ಯಕೀಯ ನಿಗಾದಲ್ಲಿ ಇರಿಸಲಾಗುತ್ತದೆ. ಇದೀಗ ಶುಕ್ಲಾ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ.

ಒಟ್ಟಿನಲ್ಲಿ ಪ್ರತಿಕೂಲ ಪರಿಸ್ಥಿತಿಯಲ್ಲಿ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸಿ ಹನ್ನೆರಡು ಅಮೂಲ್ಯ ಜೀವಗಳನ್ನು ಉಳಿಸುವಲ್ಲಿ ನೆರವಾದ ಸರಕಾರಿ ಅಧಿಕಾರಿ ರಾಜೇಶ್ ಶುಕ್ಲಾ ಅವರ ಈ ಕಾರ್ಯಕ್ಕೆ ಇದೀಗ ಪ್ರಶಂಸೆ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.