ಮದುವೆಗೂ ಇನ್ನು ಆಧಾರ ಕಡ್ಡಾಯ


Team Udayavani, Jul 5, 2017, 3:45 AM IST

adhar.jpg

ಹೊಸದಿಲ್ಲಿ: ಮದುವೆಯಾದ 30 ದಿನಗಳಲ್ಲಿ ಕಡ್ಡಾಯವಾಗಿ ವಿವಾಹ ನೋಂದಣಿ ಮಾಡಿಸಲೇಬೇಕು. ಇದಕ್ಕೆ ಜಾತಿ-ಧರ್ಮದ ಹಂಗಿಲ್ಲ. ನೋಂದಣಿ ಮಾಡಿಸದಿದ್ದರೆ 31ನೇ ದಿನದಿಂದ ನಿತ್ಯ 5 ರೂ. ದಂಡ ಖಾತ್ರಿ. ಇದಷ್ಟೇ ಅಲ್ಲ, ನೋಂದಣಿ ಮಾಡಿಸಿ ಆಧಾರ್‌ ಜತೆ ಲಿಂಕ್‌ ಮಾಡ ಬೇಕಾದದ್ದು ಕಡ್ಡಾಯ! ಇವು ಕಾನೂನು ಆಯೋಗ ಕೇಂದ್ರ ಸರ ಕಾರಕ್ಕೆ ನೀಡಿರುವ ಶಿಫಾರಸುಗಳು. ಒಟ್ಟು 41 ಪುಟ ಗಳ ವರದಿ ನೀಡಿರುವ ಆಯೋಗ, ವಿವಾಹ ವಂಚನೆಗಳನ್ನು ಗಣನೆಗೆ ತೆಗೆದು ಕೊಂಡು ಇದನ್ನು ತಪ್ಪಿಸಲು ಮಾಡಬೇಕಾದ ಕ್ರಮಗಳು ಯಾವುವು ಎಂಬ ಬಗ್ಗೆ ವಿವರಣೆ ನೀಡಿದೆ.

ಆದರೆ ಇದು ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರುವ ಕೇಂದ್ರ ಸರಕಾರದ ಪ್ರಯತ್ನ ಎಂದೂ ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ತಲಾಖ್‌ ನಿಷೇಧಿಸುವ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದು, ಸಾಧಕ-ಬಾಧಕಗಳ ಬಗ್ಗೆ ಚರ್ಚೆಯಾಗುತ್ತಿದೆ. ಈ ಸಾಲಿಗೆ ವಿವಾಹ ನೋಂದಣಿಯನ್ನೂ ಸೇರಿಸಿದರೆ ಕದ್ದು ಅಥವಾ ಮೊದಲ ಪತ್ನಿಗೆ ಮೋಸ ಮಾಡಿ ವಿವಾಹವಾಗುವುದಕ್ಕೆ ಕಡಿವಾಣ ಹಾಕಿದಂತಾಗುತ್ತದೆ ಮತ್ತು ಬಹುಪತ್ನಿತ್ವ ಪದ್ಧತಿ ಯನ್ನು ನಿಯಂತ್ರಿಸಿದಂತಾಗುತ್ತದೆ ಎನ್ನಲಾಗಿದೆ.

ಆಧಾರ್‌ ಏಕೆ?: ಇತ್ತೀಚೆಗೆ ವಿವಾಹದ ಹೆಸರಲ್ಲಿ ವಂಚನೆ ಯಾಗುತ್ತಿರುವುದು ಹೆಚ್ಚಾಗಿದೆ. ಹೀಗಾಗಿ ಆಧಾರ್‌ನ ಜತೆ ಸೇರಿಸಿ ವಿವಾಹ ನೋಂದಣಿ ಮಾಡಿಸಿದರೆ, ಇಂಥ ವಂಚನೆ ಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ.
ಇದರಲ್ಲಿ ಬಯೋಮೆಟ್ರಿಕ್‌ ವಿಧಾನ ಬಳಕೆಯಾಗುತ್ತಿರುವುದರಿಂದ ಬೇರೊಂದು ಕಡೆ ವಿವಾಹವಾಗಿದ್ದರೂ ಅದು ತತ್‌ಕ್ಷಣವೇ ಗೊತ್ತಾಗುತ್ತದೆ. ಹೀಗಾಗಿ ಆಧಾರ್‌ ಬಳಕೆ ಮಾಡಬಹುದು ಎಂದು ಕಾನೂನು ಆಯೋಗ ಅಭಿಪ್ರಾಯಪಟ್ಟಿದೆ.

ಕಡ್ಡಾಯ ಏಕೆ?:  ಜನನ ಅಥವಾ ಮರಣ ಪತ್ರಗಳನ್ನು ಕಡ್ಡಾಯ ಮಾಡಿರುವಂತೆಯೇ ವಿವಾಹ ನೋಂದಣಿಯನ್ನೂ ಕಡ್ಡಾಯ ಮಾಡಬೇಕು ಎಂಬುದು ಆಯೋಗದ ಬಹುಮುಖ್ಯ ಸಲಹೆ. ಮದುವೆಯಾದ 30 ದಿನದೊಳಗೆ ನೋಂದಣಿ ಮಾಡಿಸಲೇಬೇಕು. ಮಾಡಿಸದಿದ್ದರೆ ದಿನಕ್ಕೆ 5 ರೂ.ಗಳಂತೆ ದಂಡ ವಿಧಿಸಬೇಕು ಎಂದಿದೆ. ಜನನ ಮತ್ತು ಮರಣ ಪ್ರಮಾಣಪತ್ರಗಳಲ್ಲೂ ದಂಡದ ಪ್ರಸ್ತಾವವಿದೆ. ಇದರಂತೆಯೇ ವಿವಾಹ ನೋಂದಣಿಯಲ್ಲೂ ದಂಡದ ನೀತಿಯನ್ನು ಜಾರಿಗೆ ತರಬೇಕು ಎಂದಿದೆ.

ವಿವಾಹ ನೋಂದಣಿ ಕಡ್ಡಾಯ ಎಂದು ಹೇಳಿದ್ದರೂ ಯಾವುದೇ ವೈಯಕ್ತಿಕ ಕಾನೂನು ಮಂಡಳಿಗಳನ್ನು ರದ್ದು ಮಾಡಬೇಕು ಎಂದು ಕಾನೂನು ಆಯೋಗ ತಿಳಿಸಿಲ್ಲ. ಈಗಾಗಲೇ ಅವಕಾಶ ಕೊಟ್ಟಿರುವಂತೆ ಎಲ್ಲ ವೈಯಕ್ತಿಕ ಕಾನೂನು ಮಂಡಳಿಗಳೂ ಅದೇ ಸ್ವರೂಪದಲ್ಲೇ ಇರಲಿ ಎಂದು ಹೇಳಿದೆ.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.