Aditya L1: ನಾಲ್ಕನೇ ಹಂತದ ಕಕ್ಷೆ ಬದಲಾವಣೆ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಆದಿತ್ಯ ಎಲ್ 1
Team Udayavani, Sep 15, 2023, 10:44 AM IST
ನವದೆಹಲಿ: ಶುಕ್ರವಾರ ಮುಂಜಾನೆ ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ ಆಧಾರಿತ ಮಿಷನ್ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯು ನಾಲ್ಕನೇ ಹಂತದ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ಇಸ್ರೋ ತಿಳಿಸಿದೆ.
ಈ ಕುರಿತು ಟ್ವಿಟರ್ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡ ಇಸ್ರೊ ಗುರುವಾರ ತಡರಾತ್ರಿ 2 ಗಂಟೆಗೆ ಕಕ್ಷೆ ಬದಲಾವಣೆ ಕಾರ್ಯ ಯಶಸ್ವಿಯಾಗಿ ನೆರವೇರಿದೆ ಎಂದು ಹೇಳಿಕೊಂಡಿದೆ.
ಸೂರ್ಯನನ್ನು ಅಧ್ಯಯನ ಮಾಡಲು ಲಗ್ರೇಂಜ್ ಪಾಯಿಂಟ್ 1 (L1) ಗೆ ಹೊರಟಿರುವ ಬಾಹ್ಯಾಕಾಶ ನೌಕೆಯು ಮುಂದಿನ ಸೆಪ್ಟೆಂಬರ್ 19 ರಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ನಿರ್ಣಾಯಕ ಟ್ರಾನ್ಸ್-ಲಗ್ರಾಂಜಿಯನ್ ಪಾಯಿಂಟ್ 1 ಅಳವಡಿಕೆಗೆ (TL1I) ಒಳಗಾಗಲಿದೆ ಎಂದು ISRO ಹೇಳಿದೆ.
ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಮಿಷನ್ ಆದಿತ್ಯ-ಎಲ್ 1, ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಹಾರಾಟ ನಡೆಸಿತು.
Aditya-L1 Mission:
The fourth Earth-bound maneuvre (EBN#4) is performed successfully.ISRO’s ground stations at Mauritius, Bengaluru, SDSC-SHAR and Port Blair tracked the satellite during this operation, while a transportable terminal currently stationed in the Fiji islands for… pic.twitter.com/cPfsF5GIk5
— ISRO (@isro) September 14, 2023
ಇದನ್ನೂ ಓದಿ: Ramanagar; ಟೈರ್ ಸ್ಪೋಟಗೊಂಡು ಬೃಹತ್ ಕಂಟೇನರ್ ಪಲ್ಟಿ; ಅಡಿಯಲ್ಲಿ ಸಿಲುಕಿ ಚಾಲಕನ ನರಳಾಟ
ಭೂಮಿಯ ಪರಿಭ್ರಮಣದಲ್ಲಿದ್ದ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಭೂಮಿಯಿಂದ ಲಗ್ರಾಂಜಿಯನ್ 1 ಬಿಂದುವಿಗೆ ರವಾನಿಸುವ ಮುಂದಿನ ಪ್ರಕ್ರಿಯೆ ಸೆಪ್ಟೆಂಬರ್ 19 ತಡರಾತ್ರಿ 2 ಗಂಟೆಗೆ ನಿಗದಿಯಾಗಿದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
MUST WATCH
ಹೊಸ ಸೇರ್ಪಡೆ
ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
Housefull 5: ಕಾಮಿಡಿ ಜರ್ನಿಯ ʼಹೌಸ್ ಫುಲ್ʼ ಕುಟುಂಬಕ್ಕೆ ಅಭಿಷೇಕ್ ಬಚ್ಚನ್ ಎಂಟ್ರಿ
T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ
Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್ ಕಾರಿಡಾರ್!