ಗೋರಖ್‌ಪುರದಿಂದ ವಾರಾಣಸಿಗೆ ವಿಮಾನ ಸೇವೆಗೆ ಚಾಲನೆ ನೀಡಿದ ಸಿಎಂ ಯೋಗಿ

ಮೋದಿ ಅವರ ಸಂಕಲ್ಪವನ್ನು ಈಡೇರಿಸಿ ಅಭಿವೃದ್ಧಿಯ ವೇಗದಲ್ಲಿ ಮಾದರಿಯಾಗಿದ್ದೇವೆ

Team Udayavani, Mar 27, 2022, 12:49 PM IST

yogi

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉಡಾನ್ ಯೋಜನೆಯಡಿಯಲ್ಲಿ ಗೋರಖ್‌ಪುರದಿಂದ ವಾರಾಣಸಿಗೆ ವಿಮಾನ ಸೇವೆಯನ್ನು ಭಾನುವಾರ ಉದ್ಘಾಟಿಸಿದರು.

ಆದಿತ್ಯನಾಥ್ ಅವರು ಲಕ್ನೋದಿಂದ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಗ್ವಾಲಿಯರ್‌ನಿಂದ ವರ್ಚುವಲ್ ಆಗಿ ಸೇರಿ ಚಾಲನೆ ನೀಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಅವರು ತಮ್ಮ ಭಾಷಣದಲ್ಲಿ, “ಪ್ರಸ್ತುತ, ಉತ್ತರ ಪ್ರದೇಶದಿಂದ ದೇಶದ ವಿವಿಧ ರಾಜ್ಯಗಳ 75 ಸ್ಥಳಗಳನ್ನು ತಲುಪಬಹುದಾಗಿದೆ. ದೇಶದ ವಾಯು ಸಂಪರ್ಕದಲ್ಲಿ ಹಲವು ಬದಲಾವಣೆಗಳು ಸಂಭವಿಸಿವೆ, ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಮತ್ತು ನಿಜವಾದ ಅರ್ಥದಲ್ಲಿ, ಎಲ್ಲರಿಗೂ ವಿಮಾನ ಪ್ರಯಾಣವನ್ನು ಒದಗಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಸಂಕಲ್ಪವನ್ನು ರಾಜ್ಯವು ಈಡೇರಿಸುತ್ತಿದೆ. ವಾರಣಾಸಿಯ ವಿಶ್ವನಾಥ ದೇವಾಲಯವನ್ನು ಇಂದು ವಿಮಾನದ ಮೂಲಕ ಗೋರಖನಾಥಕ್ಕೆ ಸಂಪರ್ಕಿಸಲಾಗುತ್ತಿದೆ” ಎಂದು ಅವರು ಹೇಳಿದರು.

ಗೋರಖ್‌ಪುರದಿಂದ ಕಾನ್ಪುರ, ವಾರಾಣಸಿಯಿಂದ ಮುಂಬಯಿ, ಕಾನ್ಪುರದಿಂದ ಪಾಟ್ನಾ, ಕುಶಿನಗರದಿಂದ ಕೋಲ್ಕತಾ ಹೀಗೆ ಆರು ವಿಮಾನಗಳು ಇಂದು ರಾಜ್ಯ ಮತ್ತು ದೇಶದ ವಿವಿಧ ಸ್ಥಳಗಳನ್ನು ಸಂಪರ್ಕಿಸಲು ಪ್ರಾರಂಭಿಸುತ್ತಿರುವುದು ನನಗೆ ಅತ್ಯಂತ ಸಂತೋಷದ ವಿಷಯವಾಗಿದೆ ಮತ್ತು ರಾಜ್ಯದ ಜನತೆಯ ಪರವಾಗಿ ನಾಗರಿಕ ವಿಮಾನಯಾನ ಸಚಿವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

“ಕಾಶಿ (ವಾರಾಣಸಿ) ವಿಶ್ವದ ಅತ್ಯಂತ ಹಳೆಯ ನಗರ ಎಂದು ನಮಗೆಲ್ಲರಿಗೂ ತಿಳಿದಿದೆ ಮತ್ತು ಪ್ರಧಾನಿ ನೇತೃತ್ವದಲ್ಲಿ ವಿಶ್ವನಾಥ ದೇವಾಲಯದಲ್ಲಿ ನಡೆದಿರುವ ಕೆಲಸಗಳಿಂದಾಗಿ ದೇಶಾದ್ಯಂತ ಜನರು ಇದನ್ನು ಭೇಟಿ ಮಾಡಲು ಬಯಸುತ್ತಿದ್ದಾರೆ. ಉತ್ತರ ಪ್ರದೇಶದ 9 ವಿಮಾನ ನಿಲ್ದಾಣಗಳು ಈಗ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿವೆ. ಐದು ವರ್ಷಗಳ ಹಿಂದೆ ರಾಜ್ಯದಲ್ಲಿ ನಾಲ್ಕು ವಿಮಾನ ನಿಲ್ದಾಣಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ದೇಶದ 25 ಸ್ಥಳಗಳಿಗೆ ಮಾತ್ರ ವಿಮಾನ ಪ್ರಯಾಣ ಸಾಧ್ಯವಿತ್ತು, ಆದರೆ ಇಂದು ನಾವು ರಾಜ್ಯದೊಳಗೆ ವಾಯುಪ್ರದೇಶದ ಅಭಿವೃದ್ಧಿಯ ವೇಗದಲ್ಲಿ ಮಾದರಿಯಾಗಿದ್ದೇವೆ. ಚಿತ್ರಕೂಟ, ಸೋನಭದ್ರ ಮತ್ತು ಶ್ರಾವಸ್ತಿಯಲ್ಲಿ ನಿರ್ಮಿಸಲಿರುವ ಹೊಸ ವಿಮಾನ ನಿಲ್ದಾಣಗಳು ಮತ್ತು ಕುಶಿನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕಾರ್ಯಗತಗೊಳಿಸುವ ಬಗ್ಗೆ ಪ್ರಸ್ತಾಪಿಸಿದರು.

ಗೋರಖ್‌ಪುರ ಮತ್ತು ವಾರಾಣಸಿ ನಡುವೆ ವಿಮಾನಯಾನ ಸೇವೆಯನ್ನು ನಿರ್ವಹಿಸುವ ಸ್ಪೈಸ್‌ಜೆಟ್‌ಗೆ ಕೃತಜ್ಞತೆ ಸಲ್ಲಿಸಿ, ಮೊದಲ ವಿಮಾನದಲ್ಲಿ ಪ್ರಯಾಣಿಕರನ್ನು ಅಭಿನಂದಿಸಿದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.