ಪಿಎಫ್ಐ ವಾಟ್ಸ್‌ಆ್ಯಪ್‌ ಗುಂಪಿನ ಅಡ್ಮಿನ್‌ ಪಾಕ್‌ ಮೂಲದವ!

ವಿದೇಶಗಳಿಂದಲೂ ಬರುತ್ತಿತ್ತು ಹಣ; ದೇಶದಲ್ಲಿ ಕಾನೂನು ಸುವ್ಯವಸ್ಥೆ ಹಾಳುಗೆಡವಲು ಸಂಚು

Team Udayavani, Oct 19, 2022, 7:20 AM IST

thumb pakisthan

ಮುಂಬೈ: ಕಳೆದ ತಿಂಗಳು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದ್ದ ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ)ದ ಐವರು ಸದಸ್ಯರಿಗೆ ಪಾಕಿಸ್ತಾನದೊಂದಿಗೆ ಸಂಪರ್ಕವಿರುವುದಕ್ಕೆ ಸಾಕ್ಷ್ಯವೊಂದನ್ನು ತನಿಖಾ ಅಧಿಕಾರಿಗಳು ಹುಡುಕಿದ್ದಾರೆ. “ಈ ಐವರು ಇದ್ದ ವಾಟ್ಸ್‌ಆ್ಯಪ್‌ ಗುಂಪಿನ ಅಡ್ಮಿನ್‌ ಪಾಕಿಸ್ತಾನ ಮೂಲದವನು.

175 ಜನರಿರುವ ಗುಂಪಿನಲ್ಲಿ ಅರಬ್‌ ಸಂಯುಕ್ತ ಸಂಸ್ಥಾನ, ಅಫ್ಘಾನಿಸ್ತಾನದವರೂ ಇದ್ದಾರೆ’ ಎಂದು ಉಗ್ರ ನಿಗ್ರಹ ದಳ(ಎಟಿಎಸ್‌)ದ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ತನಿಖಾ ದಳ, ಮಹಾರಾಷ್ಟ್ರ ಎಟಿಎಸ್‌ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಮಾಲೇಗಾಂವ್‌, ಕೊಲ್ಹಾಪುರ, ಭೀಡ್‌ ಮತ್ತು ಪುಣೆಯಿಂದ ಐವರು ಪಿಎಫ್ಐ ಸದಸ್ಯರನ್ನು ಬಂಧಿಸಿದ್ದರು. ಅವರ ಮೊಬೈಲ್‌ಗ‌ಳು, ಲ್ಯಾಪ್‌ಟಾಪ್‌, ಕಂಪ್ಯೂಟರ್‌, ಬ್ಯಾಂಕ್‌ ದಾಖಲೆಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗಿತ್ತು. ಅದರಲ್ಲಿ ಅವರುಗಳಿದ್ದ ವಾಟ್ಸ್‌ಆ್ಯಪ್‌ ಗುಂಪು ದೇಶದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಉತ್ತೇಜಿಸುತ್ತಿದ್ದ ಗುಂಪಾಗಿತ್ತು ಎನ್ನುವ ಅಂಶ ಹೊರಬಿದ್ದಿದೆ.

ಗುಂಪಿನಲ್ಲಿದ್ದ 175 ಮಂದಿಯ ಪೈಕಿ ಬಹುತೇಕರು ಬೇರೆ ಬೇರೆ ದೇಶಗಳಿಗೆ ಪ್ರಯಾಣ ಬೆಳೆಸಿದವರಾಗಿದ್ದಾರೆ. ಅವರಲ್ಲಿ ಹಲವರಿಗೆ ವಿದೇಶಗಳಿಂದ ಹಣ ವರ್ಗಾವಣೆಯೂ ಆಗಿದ್ದು, ಅದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವಾಟ್ಸ್‌ಆ್ಯಪ್‌ ಗುಂಪಿನ ಅಡ್ಮಿನ್‌ ಅನ್ನೂ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸದಸ್ಯರುಗಳು ನಿಷೇಧಿತ ಸಂಘಟನೆಯಾಗಿರುವ “ಸಿಮಿ’ ರೀತಿಯಲ್ಲೇ ಕೆಲಸ ಮಾಡುತ್ತಿದ್ದರು ಎಂದೂ ತನಿಖೆಯಿಂದ ಗೊತ್ತಾಗಿದೆ.

ಈ ಬಗ್ಗೆ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಪ್ರತಿಕ್ರಿಯೆ ಸಲ್ಲಿಸಿದ್ದು, “ಬಂಧಿತರಲ್ಲಿ ಓರ್ವ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಹಾಗಾಗಿ ಆತ ವಿದೇಶಗಳಿಗೆ ಪ್ರಯಾಣ ಮಾಡಿದ್ದಾನೆ. ಇನ್ನೋರ್ವ ಮೌಲಾನಾ ಆಗಿರುವುದರಿಂದ ಬೇರೆ ಬೇರೆ ದೇಶಗಳಿಗೆ ಯಾತ್ರೆ ಮಾಡಿದ್ದಾನೆ’ ಎಂದು ಸಮರ್ಥಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇತ್ತೀಚೆಗಷ್ಟೇ ಕೇಂದ್ರ ಸರ್ಕಾರ ಸಂಘಟನೆಯ ಮೇಲೆ ನಿಷೇಧ ಹೇರಿತ್ತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.