ಸಹ ಜೀವನಕ್ಕೆ ಇಲ್ಲ ನಿರ್ಬಂಧ : ಸುಪ್ರೀಂಕೋರ್ಟ್ ಮಹತ್ವದ ಆದೇಶ
Team Udayavani, May 7, 2018, 8:10 AM IST
ಹೊಸದಿಲ್ಲಿ : ವಿವಾಹ ವಯಸ್ಸು 21 ಪೂರೈಸದಿರುವ ಪುರುಷನ ಜತೆಗೆ 20ರ ಯುವತಿ ಸಹ ಜೀವನ (ಲಿವ್- ಇನ್- ರಿಲೇಷನ್ಶಿಪ್) ನಡೆಸಲು ಅವಕಾಶ ಇದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಕೇರಳದ ಯುವ ಜೋಡಿಗೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ಕಳೆದ ವರ್ಷ ನಡೆದಿದ್ದ ಅವರ ವಿವಾಹ ರದ್ದು ಮಾಡಿದ್ದ ಹೈಕೋರ್ಟ್ ತೀರ್ಪನ್ನೂ ಸುಪ್ರೀಂ ಕೋರ್ಟ್ ಒಪ್ಪಿಲ್ಲ.
ಕೇರಳದ ತುಷಾರ (20) ಎಂಬ ಯುವತಿಯ ತಂದೆಯು, ‘ನಂದಕುಮಾರ್ ಎಂಬ ಯುವಕ ಪುತ್ರಿಯನ್ನು ಅಪಹರಿಸಿಕೊಂಡು ಹೋಗಿ ಮದುವೆಯಾಗಿದ್ದಾನೆ. ಹೀಗಾಗಿ ಅವರ ವಿವಾಹವನ್ನು ರದ್ದು ಮಾಡಬೇಕು’ ಎಂದು ಹೈಕೋರ್ಟ್ಗೆ ಮನವಿ ಮಾಡಿದ್ದರು. ಮದುವೆ ವೇಳೆ ನಂದಕುಮಾರ್ ಗೆ ವಯಸ್ಸು 20 ಆಗಿರಲಿಲ್ಲ ಎಂದು ಯುವತಿ ತಂದೆ ವಾದಿಸಿದ್ದರು. ಹೀಗಾಗಿ ಕೇರಳ ಹೈಕೋರ್ಟ್ ಮದುವೆ ಅಸಿಂಧುಗೊಳಿಸಿ, ಯುವತಿಯನ್ನು ತಂದೆಯ ವಶಕ್ಕೆ ಒಪ್ಪಿಸಿತ್ತು.
ಈ ಕುರಿತ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾ| ಎ.ಕೆ.ಸಿಕ್ರಿ ಮತ್ತು ನ್ಯಾ| ಅಶೋಕ್ ಭೂಷಣ್ ಅವರನ್ನೊಳಗೊಂಡ ನ್ಯಾಯಪೀಠ, ‘ಅವರು ವೈವಾಹಿಕ ಜೀವನ ನಡೆಸಲು ಸಾಧ್ಯವಿಲ್ಲದಿದ್ದರೂ, ಸಹ ಜೀವನ (ಲಿವ್- ಇನ್- ರಿಲೇಷನ್ಶಿಪ್) ನಡೆಸಲು ಅವಕಾಶ ಇದೆ. ಸಹ ಜೀವನಕ್ಕೆ ನಮ್ಮ ಕಾನೂನಿನಲ್ಲೂ ಮಾನ್ಯತೆ ನೀಡಲಾಗಿದೆ. ಅದು ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆಯ ವ್ಯಾಪ್ತಿಗೆ ಬರುತ್ತದೆ. ಹಾಗಾಗಿ ಯುವಕ ತನಗಿಂತ ಕಿರಿಯ ವಯಸ್ಸಿನವನಾಗಿದ್ದರೂ ಅವನೊಂದಿಗೆ ಬದುಕುವುದು ಯುವತಿಯ ಆಯ್ಕೆಗೆ ಬಿಟ್ಟಿದ್ದು ಎಂದು ಹೇಳಿದೆ. ಪ್ರಾಪ್ತ ವಯಸ್ಕರು ತಮ್ಮ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಅಸಾಧ್ಯವಾದಾಗ ಸರಕಾರವೇ ಅವರ ನೆರವಿಗೆ ಬರಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ