ಬಡವರ ಕೈಗೆಟುಕದ ಆರೋಗ್ಯ ವಿಮೆ ! ಶೇ 90 ರಷ್ಟು ಬಡಜನರಿಗೆ ಆರೋಗ್ಯ ವಿಮೆ ಇಲ್ಲ


Team Udayavani, Dec 17, 2019, 12:37 AM IST

medicine

ಸರಕಾರಗಳು ಹಲವು ರೀತಿಯ ಆರೋಗ್ಯ ವಿಮೆಯನ್ನು ಜಾರಿಗೆ ತಂದಿದ್ದರೂ ಅವುಗಳಿನ್ನೂ ಬಡಜನರ ಕೈಗೆಟುಕಿಲ್ಲ. ಶೇ.90ರಷ್ಟು ಬಡವರು ಆರೋಗ್ಯ ವಿಮೆ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ರಾಷ್ಟ್ರೀಯ ಸಮೀಕ್ಷಾ ಸಂಸ್ಥೆ (ಎನ್‌ಎಸ್‌ಒ) ಯ ವರದಿ ತಿಳಿಸಿದೆ.

ಆರೋಗ್ಯ ವೆಚ್ಚ ನಿಭಾಯಿಸುವುದೇ ಕಷ್ಟ
ಸಾಮಾಜಿಕ ಯೋಜನೆಗಳ ಸೌಲಭ್ಯ ಮತ್ತು ಬಳಕೆ ಕುರಿತು ರಾಷ್ಟ್ರೀಯ ಸಮೀಕ್ಷೆ ಸಂಸ್ಥೆ ಅಧ್ಯಯನ ನಡೆಸಿದ್ದು, ದೇಶದ ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಡಜನರು ಆರೋಗ್ಯ ವೆಚ್ಚಗಳನ್ನು ನಿಭಾಯಿಸಲು ಕಷ್ಟಪಡುತ್ತಾರೆ ಎಂದು ಹೇಳಿದೆ.

ಶೇ.10ರಷ್ಟು ಗ್ರಾಮೀಣ ಮಂದಿಗೆ ವಿಮೆ
ಗ್ರಾಮೀಣರ ಪೈಕಿ ಶೇ.10.2ರಷ್ಟು ಬಡ ಜನರು ಮಾತ್ರ ಸರಕಾರಿ ಅಥವಾ ಖಾಸಗಿ ಸಂಸ್ಥೆಗಳ ಆರೋಗ್ಯ ವಿಮ ಯೋಜನೆಯನ್ನು ಹೊಂದಿದ್ದಾರೆ.

ತುಸು ಸುಧಾರಣೆ
ಆಯುಷ್ಮಾನ್‌ ಭಾರತ್‌ ಜಾರಿಗೆ ಮೊದಲು ಗ್ರಾಮೀಣ ಪ್ರದೇಶದಲ್ಲಿ ಶೇ.12.9ರಷ್ಟು ಮತ್ತು ನಗರ ಪ್ರದೇಶದ ಶೇ.8.9ರಷ್ಟು ಬಡ ಜನರು ಮಾತ್ರ ಸರಕಾರಿ ಆರೋಗ್ಯ ವಿಮೆ ಯೋಜನೆ ಪಡೆಯುತ್ತಿದ್ದರು. ಪ್ರಸ್ತುತ ಈ ಯೋಜನೆ ಅಡಿಯಲ್ಲಿ 6.4 ಲಕ್ಷದಷ್ಟು ಜನರಿಗೆ ಆರೋಗ್ಯ ವೆಚ್ಚವನ್ನು ನೀಡಲಾಗಿದೆ.

ಶೇ.9.8ರಷ್ಟು ನಗರ ಮಂದಿಗೆ ವಿಮೆ
ದೇಶದ ನಗರಗಳಲ್ಲಿರುವ ಶೇ.9.8ರಷ್ಟು ಬಡವರು ಮಾತ್ರ ಆರೋಗ್ಯ ವಿಮೆ ಹೊಂದಿದ್ದಾರೆ ಎಂದು ವರದಿ ಹೇಳಿದೆ.

ಚಿಕಿತ್ಸೆಗಳಿಗೆ ಬಡವರು ಹೇಗೆ ಹಣ ಹೊಂದಿಸ್ತಾರೆ?
ಉಳಿತಾಯದ ಹಣ ಬಳಕೆ
ಆರೋಗ್ಯ ವಿಮೆ ಇಲ್ಲದ ಪರಿಣಾಮ 2016-17ರಲ್ಲಿ, ಗ್ರಾಮೀಣ ಪ್ರದೇಶದ ಶೇ.79.5 ಮತ್ತು ನಗರ ಪ್ರದೇಶದ ಶೇ.83.7 ಜನರು ತಮ್ಮ ಉಳಿತಾಯ ಹಣ ದಿಂದ ವೈದ್ಯಕೀಯ ವೆಚ್ಚವನ್ನು ಪಾವತಿಸಿ¨ªಾರೆ. 2014 ರಲ್ಲಿ ಗ್ರಾಮೀಣ ಪ್ರದೇಶದ ಶೇ.67.8 ಮತ್ತು ನಗರ ಪ್ರದೇಶದ ಶೇ.74.9ರಷ್ಟು ಜನರು ಆರೋಗ್ಯ ವೆಚ್ಚಕ್ಕಾಗಿ ತಮ್ಮ ಉಳಿತಾಯ ಮೊತ್ತವನ್ನು ವ್ಯಯಿಸಿದ್ದರು.

ಶೇ.13.4ರಷ್ಟು ಸಾಲ
2017-18ರಲ್ಲಿ ಗ್ರಾಮೀಣ ಭಾಗದ ಶೇ.13.4ರಷ್ಟು ಮತ್ತು ನಗರ ಪ್ರದೇಶದ ಶೇ.8.5ರಷ್ಟು ಬಡ ಜನರು ಸಾಲ ಮಾಡಿ ಆರೋಗ್ಯ ಖರ್ಚನ್ನು ಭರಿಸಿದ್ದಾರೆ.

ಶೇ.3.4 ರಷ್ಟು ಬಂಧುಗಳ ನೆರವು
ಗ್ರಾಮೀಣ ಪ್ರದೇಶದಲ್ಲಿ ಶೇ.3.4 ರಷ್ಟು ಜನರು ತಮ್ಮ ಆರೋಗ್ಯ ನಿರ್ವಹಣೆಯ ವೆಚ್ಚಕ್ಕಾಗಿ ಸ್ನೇಹಿತರು ಅಥವಾ ಬಂಧು ಬಳಗದವರಿಂದ ನೆರವು ಪಡೆದಿದ್ದರೆ, ಗ್ರಾಮೀಣ ಪ್ರದೇಶದಲ್ಲಿ ಇವ‌ರ ಪ್ರಮಾಣ ಶೇ.3.8ರಷ್ಟಿದೆ.

ಆಸ್ತಿ ಮಾರಾಟ
ಗ್ರಾಮೀಣ ಮತ್ತು ನಗರ ಪ್ರದೇಶದ ಶೇ.0.4 ರಷ್ಟು ಬಡ ಜನರು ಆರೋಗ್ಯ ವೆಚ್ಚವನ್ನು ತುಂಬುವುದಕ್ಕಾಗಿ ತಮ್ಮ ಆಸ್ತಿಯನ್ನು ಮಾರಿದ್ದಾರೆ.

ಶೇ.3.2ರಷ್ಟು
ಗ್ರಾಮೀಣ ಭಾಗದ ಶೇ.3.2ರಷ್ಟು ಮತ್ತು ನಗರ ಪ್ರದೇಶದ ಶೇ. 3.4ರಷ್ಟು ಬಡ ಜನರು ಆರೋಗ್ಯ ಕುರಿತಾದ ಖರ್ಚುಗಳನ್ನು ಹೊಂದಿ ಸಲು ಇತರ ಮೂಲಗಳನ್ನು ಅವಲಂಬಿಸಿದ್ದರು.

31,845 ರೂ. ಸರಾಸರಿ ಖರ್ಚು
ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಪ್ರತಿಯೊಬ್ಬ ರೋಗಿಗಳ ಮೇಲೆ ಸುಮಾರು 31,845 ರೂ. ಸರಾಸರಿ ವೈದ್ಯಕೀಯ ವೆಚ್ಚವನ್ನು ವಿಧಿಸಲಾಗಿದ್ದು, ಇದರ ಪ್ರಮಾಣ ಸರಕಾರಿ ಆಸ್ಪತ್ರೆಯ ವೆಚ್ಚಕ್ಕಿಂತ (4,452 ರೂ.) ಏಳು ಪಟ್ಟು ಹೆಚ್ಚಾಗಿದೆ ಎಂದು ಎನ್‌ಎಸ್‌ಒ ವರದಿ ತಿಳಿಸಿದೆ.

ಅರ್ಧಕ್ಕಿಂತ ಹೆಚ್ಚು ಖಾಸಗಿ ಆಸ್ಪತ್ರೆಗಳು
ದೇಶದಲ್ಲಿ ಅರ್ಧಕ್ಕಿಂತ ಹೆಚ್ಚು ಖಾಸಗಿ ಆಸ್ಪತ್ರೆಗಳಿದ್ದು, ಗ್ರಾಮೀಣ ಪ್ರದೇಶದಲ್ಲಿ ಶೇ.51.9ರಷ್ಟು ಮತ್ತು ನಗರದಲ್ಲಿ ಶೇ.61.4 ರಷ್ಟು ಖಾಸಗಿ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ.

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.