Malappuram; ಆಫ್ರಿಕಾ ಫುಟ್ಬಾಲ್ ಆಟಗಾರನನ್ನು ಅಟ್ಟಾಡಿಸಿದ ಜನತೆ! ಆಗಿದ್ದೇನು?


Team Udayavani, Mar 14, 2024, 11:31 AM IST

African footballer chased, beaten by crowd in Kerala

ಕೊಚ್ಚಿ: ಆಫ್ರಿಕಾದ ಫುಟ್ ಬಾಲ್ ಆಟಗಾರನೊಬ್ಬನನ್ನು ಬೆನ್ನಟ್ಟಿದ ಜನಸಮೂಹವು ಆತನಿಗೆ ಥಳಿಸಿದ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ನಡೆದಿದೆ.

ಐವರಿ ಕೋಸ್ಟ್ ದೇಶದ ದೈರ್ರಾಸೌಬಾ ಹಾಸನ್ ಜೂನಿಯರ್ ಹಲ್ಲೆಗೊಳಗಾದ ವ್ಯಕ್ತಿ.

ಸೆವೆನ್ಸ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಜವಾಹರ್ ಮಾವೂರ್ ಎಂಬ ಫುಟ್ಬಾಲ್ ಕ್ಲಬ್ ಅನ್ನು ಹಾಸನ್ ಜೂನಿಯರ್ ಪ್ರತಿನಿಧಿಸುತ್ತಿದ್ದಾರೆ. ಸೆವೆನ್ಸ್ ಫುಟ್ಬಾಲ್ ಮಲಪ್ಪುರಂನಲ್ಲಿ ಪ್ರಸಿದ್ಧ ಕ್ರೀಡಾಕೂಟವಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಘಟನೆಯ ವಿಡಿಯೋದಲ್ಲಿ, ನೀಲಿ ಟೀ ಶರ್ಟ್ ಧರಿಸಿದ್ದ ದೈರ್ರಾಸೌಬಾ ಹಾಸನ್ ಜೂನಿಯರ್ ನನ್ನು ಅರೀಕೋಡ್‌ ನ ಮೈದಾನದಲ್ಲಿ ಜನರ ಗುಂಪು ಅಟ್ಟಾಡಿಸಿಕೊಂಡು ಹೋಗುವುದು ಕಂಡು ಬಂದಿದೆ.

ಐವರಿ ಕೋಸ್ಟ್ ಫುಟ್ಬಾಲ್ ಆಟಗಾರನನ್ನು ಜನರು ಹಿಡಿದು ಪದೇ ಪದೇ ಥಳಿಸುತ್ತಾರೆ. ಕೆಲವು ಪ್ರೇಕ್ಷಕರು ಫುಟ್ಬಾಲ್ ಆಟಗಾರ ತಮ್ಮಲ್ಲಿ ಒಬ್ಬನನ್ನು ಒದ್ದರು ಎಂದು ಆರೋಪಿಸಿದರು, ಇದು ಘಟನೆಗೆ ಕಾರಣವಾಯಿತು.

ಬಿಳಿ ಟೀ ಶರ್ಟ್ ಧರಿಸಿದ ವ್ಯಕ್ತಿಯೊಬ್ಬ ಆಫ್ರಿಕನ್ ವ್ಯಕ್ತಿಯನ್ನು ಹೊಡೆತಗಳಿಂದ ರಕ್ಷಿಸುತ್ತಿರುವುದನ್ನು ಕಾಣಬಹುದು. ಬಿಳಿ ಟಿ-ಶರ್ಟ್‌ನಲ್ಲಿರುವ ವ್ಯಕ್ತಿ ಕೋಪಗೊಂಡ ಜನರೊಂದಿಗೆ ಮಾತನಾಡುತ್ತಿರುವುದು ಕಂಡುಬರುತ್ತದೆ. ನಂತರ, ಫುಟ್‌ಬಾಲ್ ಆಟಗಾರನು ಗೇಟ್‌ ನಿಂದ ಹೊರಡುತ್ತಿರುವುದನ್ನು ಕಾಣಬಹುದು.

ಹಾಸನ್ ಜೂನಿಯರ್ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ, ಫುಟ್ಬಾಲ್ ಆಟಗಾರನು ತನ್ನ ತಂಡಕ್ಕೆ ಕಾರ್ನರ್ ಕಿಕ್ ಸಿಕ್ಕಿತು ಮತ್ತು ಅವನು ತನ್ನ ಸ್ಥಾನವನ್ನು ಪಡೆದುಕೊಳ್ಳಲು ಮುಂದಾದಾಗ, ಪ್ರೇಕ್ಷಕರು ತನ್ನನ್ನು ಜನಾಂಗೀಯ ನಿಂದನೆ ಮಾಡಿದರು. ಗುಂಪು ತನ್ನ ಮೇಲೆ ಕಲ್ಲು ತೂರಾಟ ನಡೆಸಿದೆ ಎಂದೂ ಆರೋಪಿಸಿದ್ದಾರೆ.

ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.