ಪ್ರೇಯಸಿಯ ದೇಹದ ಭಾಗಗಳನ್ನು ಕಪಾಟಿನೊಳಗಿಟ್ಟು ಮತ್ತೊಬ್ಬ ಯುವತಿಯನ್ನು ಕರೆತಂದಿದ್ದ ಹಂತಕ!
ಈತ ಆಕೆಯ ಇನ್ಸ್ ಟಾಗ್ರಾಮ್ ಖಾತೆಯನ್ನು ಬಳಸಿಕೊಂಡು ಆಕೆಯ ಸ್ನೇಹಿತರ ಸಂಪರ್ಕದಲ್ಲಿದ್ದ.
Team Udayavani, Nov 15, 2022, 12:38 PM IST
ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ಶ್ರದ್ಧಾ ವಾಕರ್ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಸಂಗತಿಗಳು ಹೊರಬರುತ್ತಿದೆ. ಲಿವ್ ಇನ್ ಸಂಗಾತಿ ಶ್ರದ್ಧಾಳನ್ನು ಹತ್ಯೆಗೈದು 35 ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿ ಬಚ್ಚಿಟ್ಟಿದ್ದ ಹಂತಕ ಅಫ್ತಾಬ್ ಅಮೀನ್ ಪೂನಾವಾಲ ಮರುದಿನ ಮತ್ತೊಬ್ಬ ಯುವತಿಯನ್ನು ಫ್ಲ್ಯಾಟ್ ಗೆ ಕರೆ ತಂದಿದ್ದ ಎಂಬ ವಿಚಾರ ಬಯಲಾಗಿದೆ.
ಇದನ್ನೂ ಓದಿ:ಸಿದ್ದರಾಮಯ್ಯನವರನ್ನು ಮತ್ತೆ ನಂಬುವ ಸ್ಥಿತಿಯಲ್ಲಿ ಕನ್ನಡಿಗರಿಲ್ಲ: ಸಿಎಂ ಬೊಮ್ಮಾಯಿ
ಅಫ್ತಾಬ್ ಪೂನಾವಾಲ (28ವರ್ಷ) ಶ್ರದ್ಧಾ ವಾಕರ್ ಎಂಬಾಕೆಯನ್ನು ಡೇಟಿಂಗ್ ಆ್ಯಪ್ ನಲ್ಲಿ ಪರಿಚಯ ಮಾಡಿಕೊಂಡಿದ್ದ. ಹೀಗೆ ಇವರಿಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ವಿವಾಹವಾಗಲು ಮನೆಯವರ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಮುಂಬೈನಿಂದ ದೆಹಲಿಗೆ ತೆರಳಿ ಅಲ್ಲಿ ಫ್ಲ್ಯಾಟ್ ವೊಂದರಲ್ಲಿ ಕಳೆದ ಮೂರು ವರ್ಷಗಳಿಂದ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದರು.
ತನ್ನನ್ನು ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಅಫ್ತಾಫ್ ಶ್ರದ್ಧಾಳನ್ನು ಕೊಚ್ಚಿ ಕೊಲೆಗೈದ ಬಳಿಕ ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು 18 ದಿನಗಳ ಕಾಲ ಒಂದೊಂದು ಭಾಗವನ್ನು ಬೇರೆ, ಬೇರೆ ಸ್ಥಳಗಳಲ್ಲಿ ಎಸೆದು ಬಂದಿದ್ದ.
ಶ್ರದ್ಧಾಳನ್ನು ಹತ್ಯೆಗೈದು ಆಕೆಯ ದೇಹದ ಭಾಗಗಳನ್ನು ಫ್ರಿಡ್ಜ್ ನಲ್ಲಿ ಇಟ್ಟಿರುವಾಗಲೇ ಅದೇ ಡೇಟಿಂಗ್ ಆ್ಯಪ್ ಮೂಲಕ ಅಫ್ತಾಬ್ ಮತ್ತೊಬ್ಬ ಯುವತಿಯನ್ನು ಪರಿಚಯಿಸಿಕೊಂಡಿದ್ದು, ಆಕೆಯನ್ನು ಅಪಾರ್ಟ್ ಮೆಂಟ್ ಗೆ ಕರೆತಂದಿದ್ದ ಎಂಬ ವಿಚಾರ ವಿಚಾರಣೆ ವೇಳೆ ಬಾಯ್ಬಿಟ್ಟಿರುವುದಾಗಿ ವರದಿ ವಿವರಿಸಿದೆ.
ಮತ್ತೊಬ್ಬ ಯುವತಿಯನ್ನು ಅಪಾರ್ಟ್ ಮೆಂಟ್ ಗೆ ಕರೆತರುವ ಮೊದಲು ಫ್ರಿಡ್ಜ್ ನಲ್ಲಿ ಅಡಗಿಸಿ ಇಟ್ಟಿದ್ದ ಶ್ರದ್ಧಾಳ ದೇಹದ ಭಾಗಗಳನ್ನು ತೆಗೆದು ಕಪಾಟಿನೊಳಗೆ ಅಡಗಿಸಿ ಇಟ್ಟಿರುವುದಾಗಿ ಮೂಲಗಳು ಹೇಳಿವೆ.
ಪ್ರೇಯಸಿ ಶ್ರದ್ಧಾಳ ಕೊಲೆ ವಿಚಾರ ಹೊರ ಬಾರದಿರಲು ಈತ ಆಕೆಯ ಇನ್ಸ್ ಟಾಗ್ರಾಮ್ ಖಾತೆಯನ್ನು ಬಳಸಿಕೊಂಡು ಆಕೆಯ ಸ್ನೇಹಿತರ ಸಂಪರ್ಕದಲ್ಲಿದ್ದ. ಆದರೆ ಕಳೆದ ಎರಡು ತಿಂಗಳಿನಿಂದ ಶ್ರದ್ಧಾಳ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಸಂಶಯ ವ್ಯಕ್ತಪಡಿಸಿದ್ದರು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?