
ಗರಗಸದಿಂದ ಶ್ರದ್ಧಾ ದೇಹ ತುಂಡರಿಸಿದ್ದ ಅಫ್ತಾಬ್!
ಮರಣೋತ್ತರ ಪರೀಕ್ಷೆಯಲ್ಲಿ ದೃಢ
Team Udayavani, Jan 15, 2023, 7:25 AM IST

ನವದೆಹಲಿ: ಶ್ರದ್ಧಾ ವಾಲ್ಕರ್ ಮೃತದೇಹವನ್ನು ಆರೋಪಿ ಅಫ್ತಾಬ್ ಪೂನಾವಾಲಾ ಗರಗಸ ಬಳಸಿ ತುಂಡರಿಸಿರುವುದು ವೈಜ್ಞಾನಿಕ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ನವದೆಹಲಿಯ ವಿವಿಧೆಡೆ ಸಂಗ್ರಹಿಸಿದ್ದ ಶ್ರದ್ಧಾ ಅವರ 23 ಮೂಳೆಗಳನ್ನು ಪೊಲೀಸರು ವೈಜ್ಞಾನಿಕ ಪರೀಕ್ಷೆಗಾಗಿ ನವದೆಹಲಿಯ ಏಮ್ಸ್ಗೆ ಕಳುಹಿಸಿದ್ದರು. ಶ್ರದ್ಧಾ ಅವರ ತಂದೆಯ ಡಿಎನ್ಎ ಜತೆ ದಕ್ಷಿಣ ದೆಹಲಿಯ ಮೆಹೌಲಿ ಅರಣ್ಯ ಪ್ರದೇಶದಲ್ಲಿ ಸಿಕ್ಕ ಮೂಳೆಗಳ ಡಿಎನ್ಎ ಹೊಂದಿಕೆಯಾದ ಹಿನ್ನೆಲೆಯಲ್ಲಿ ಅದನ್ನು ನಡೆಸಲಾಗಿದೆ.
ಮೂಳೆ ಹಾಗೂ ಕೂದಲಿನ ಮಾದರಿಗಳನ್ನು ಹೈದರಾಬಾದ್ನಲ್ಲಿರುವ ಡಿಎನ್ಎ ಫಿಂಗರ್ಪ್ರಿಂಟಿಂಗ್ ಆ್ಯಂಡ್ ಡಯಾಗ್ನೊಸ್ಟಿಕ್(ಸಿಡಿಎಫ್ಡಿ) ಕೇಂದ್ರಕ್ಕೆ ಕಳುಹಿಸಲಾಗಿತ್ತು. ಗರಗಸ ಬಳಸಿ ಮೃತದೇಹವನ್ನು ತುಂಡರಿಸಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣ ಕುರಿತಂತೆ ಮಾಸಾಂತ್ಯಕ್ಕೆ ದೆಹಲಿಯ ಸಾಕೇತ್ ಕೋರ್ಟ್ಗೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ಆರೋಪಿ ಆಫ್ತಾಬ್ನ ಪಾಲಿಗ್ರಾಫ್ ಮತ್ತು ನಾರ್ಕೊ ಪರೀಕ್ಷೆಯ ವರದಿಯನ್ನು ಪೊಲೀಸರು ಪಡೆದಿದ್ದಾರೆ.
2022ರ ಮೇ 18ರಂದು ಶ್ರದ್ಧಾಳನ್ನು ಹತ್ಯೆ ಮಾಡಿದ್ದ ಆಫ್ತಾಬ್, ಆಕೆಯ ಮೃತದೇಹಗಳನ್ನು 35 ತುಂಡುಗಳಾಗಿ ಕತ್ತರಿಸಿ ದೇಹದ ಭಾಗಗಳನ್ನು ದೆಹಲಿ ಮತ್ತು ಗುರುಗ್ರಾಮದ ಅರಣ್ಯ ಪ್ರದೇಶದ ವಿವಿಧೆಡೆ ಎಸೆದಿದ್ದ. ನ.12ರಂದು ಪೊಲೀಸರು ಆಫ್ತಾಬ್ನನ್ನು ಬಂಧಿಸಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

Monsoon; ಒಂದು ವಾರ ವಿಳಂಬವಾಗಿ ಕೇರಳ ಪ್ರವೇಶಿಸಿದ ನೈರುತ್ಯ ಮುಂಗಾರು: ಐಎಂಡಿ

Madhya Pradesh: ಜೀಪ್ ಮೇಲೆ ಉರುಳಿ ಬಿದ್ದ ಸಿಮೆಂಟ್ ಬಲ್ಕರ್ ವಾಹನ; 7 ಮಂದಿ ಮೃತ್ಯು

500 ರೂ ನೋಟುಗಳನ್ನು ಹಿಂಪಡೆಯುವ ಯೋಚನೆಯಿಲ್ಲ: ಆರ್ ಬಿಐ ಗವರ್ನರ್ ಸ್ಪಷ್ಟನೆ
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ದೇವರುಮನೆ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆ;ಕೊಲೆ ಶಂಕೆ

Rahul Gandhi ಅವರಿಗೆ ವಿದೇಶದಲ್ಲಿ ಭಾರತವನ್ನು ಟೀಕಿಸುವ ಅಭ್ಯಾಸ: ಜೈಶಂಕರ್

BJPಗೆ ಬಜರಂಗ ಬಲಿ ಸಹಾಯ ಮಾಡಲಿಲ್ಲ,ಈಗ ಔರಂಗಜೇಬ..: ರಾವುತ್

Chikkamagaluru ; ನಾಲ್ವರು ಕುಖ್ಯಾತ ಶ್ರೀಗಂಧ ಕಳ್ಳರ ಬಂಧನ

Vijayapura ಡಿಡಿಪಿಐ ಹುದ್ದೆಗೆ ಅಧಿಕಾರಿಗಳಿಬ್ಬರ ಕಿತ್ತಾಟ;ಪೊಲೀಸರ ಮಧ್ಯ ಪ್ರವೇಶ