ನಾಲ್ಕು ದಿನಗಳ ತರುವಾಯ ಮಾಲೀಕರನ್ನು ಸೇರಿದ “ನಳ’
Team Udayavani, Sep 9, 2020, 11:43 PM IST
ನವದೆಹಲಿ: ದೆಹಲಿ ವಿಮಾನ ನಿಲ್ದಾಣದಲ್ಲಿ ತಪ್ಪಿಸಿಕೊಂಡಿದ್ದ ನಳ ಎಂಬ ಬೆಕ್ಕಿನ ಮರಿಯೊಂದು, ನಾಲ್ಕು ದಿನಗಳ ಹುಡುಕಾಟದ ನಂತರ ತನ್ನ ಮಾಲೀಕರಾದ ಆಸ್ತಾ ಶಾ ಅವರನ್ನು ಸೇರಿಕೊಳ್ಳುವ ಮೂಲಕ ಈ ಪ್ರಕರಣ ಸುಖಾಂತ್ಯ ಕಂಡಿದೆ.
ಆಸ್ತಾ ಶಾ ಅವರು, ಇತ್ತೀಚೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಏರ್ ಇಂಡಿಯಾ ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಿದ್ದರು. ಅವರು ತಮ್ಮೊಂದಿಗೆ ತಂದಿದ್ದ ಎರಡು ಸಾಕುಬೆಕ್ಕುಗಳನ್ನು ಅವು ಇದ್ದ ಪೆಟ್ ಬಾಕ್ಸ್ನಲ್ಲೇ ಕೂರಿಸಿ ವಿಮಾನ ನಿಲ್ದಾಣದ ಸಿಬ್ಬಂದಿಗೆ ಹಸ್ತಾಂತರಿಸಿದ್ದರು. ಅದನ್ನು ಶಾ ಪ್ರಯಾಣಿಸಿದ ವಿಮಾನದ ಸರಕು ವಿಭಾಗದಲ್ಲಿರಿಸಲಾಗಿತ್ತು.
ಆದರೆ, ದೆಹಲಿ ವಿಮಾನ ನಿಲ್ದಾಣದಲ್ಲಿನ ಬ್ಯಾಗೇಜ್ ವಿಭಾಗದಲ್ಲಿ ಪೆಟ್ ಬಾಕ್ಸ್ ಅನ್ನು ತೆರೆದು ನೋಡಿದಾಗ ನಳ ಎಂಬ ಬೆಕ್ಕಿನಮರಿ ನಾಪತ್ತೆಯಾಗಿತ್ತು. ಬಾಕ್ಸ್ನಿಂದ ಅದು ಹೇಗೋ ಹೊರಬಂದು, ದೆಹಲಿ ವಿಮಾನ ನಿಲ್ದಾಣದಲ್ಲಿ ತಪ್ಪಿಸಿಕೊಂಡಿತ್ತು. ತೀವ್ರ ಹುಡುಕಾಟದ ನಂತರ 4 ದಿನಗಳಾದ ಮೇಲೆ ನಿಲ್ದಾಣದಲ್ಲೇ ಅದು ಪತ್ತೆಯಾಗಿದೆ. ಈ ಹುಡುಕಾಟಕ್ಕೆ ದೆಹಲಿ ಮೂಲದ ವೈಲ್ಡ್ಲೈಫ್ ಎಂಬ ಸರ್ಕಾರೇತರ ಸಂಸ್ಥೆಯ ಸಿಬ್ಬಂ ದಿ ಸಹಾಯ ಮಾಡಿದ್ದಾರೆ. 4 ದಿನಗಳ ಕಾಲ ವಿಮಾನ ನಿಲ್ದಾಣದೊಳಗೆ ಅಡ್ಡಾ ಡಿಕೊಂಡಿದ್ದ ನಳನನ್ನು ಈಗ ಅದರ ಮಾಲೀಕರಿಗೆ ಒಪ್ಪಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ