Bihar ಬಳಿಕ ಝಾರ್ಖಂಡ್ ಸರಕಾರದಿಂದ ಜಾತಿ ಗಣತಿ
ಕಾರ್ಯಯೋಜನೆ ಸಿದ್ಧಪಡಿಸಲು ಸಿಎಂ ಆದೇಶ ಕಾಂಗ್ರೆಸ್,ಆರ್ಜೆಡಿ ಒತ್ತಡ ಬೆನ್ನಲ್ಲೇ ಈ ಬೆಳವಣಿಗೆ
Team Udayavani, Feb 19, 2024, 12:00 AM IST
ರಾಂಚಿ: ದೇಶದಲ್ಲಿ ಸ್ವಾತಂತ್ರ್ಯ ಬಂದ ಬಳಿಕ ಮೊದಲ ಬಾರಿಗೆ ಜಾತಿ ಗಣತಿ ನಡೆದದ್ದು ಬಿಹಾರದಲ್ಲಿ. ಅದೇ ಹಾದಿಯನ್ನು ತುಳಿಯಲು ಝಾರ್ಖಂಡ್ ಸರಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಜಾತಿ ಗಣತಿ ಹೇಗೆ ನಡೆಸಬೇಕು ಎಂಬುದರ ಬಗೆಗಿನ ಕರಡು ಕಾರ್ಯಯೋಜನೆ ಸಿದ್ಧಪಡಿಸಿ, ಸಂಪುಟ ಸಭೆಯ ಮುಂದೆ ಮಂಡಿಸುವಂತೆ ಸಿಬಂದಿ ತರಬೇತಿ ಇಲಾಖೆಗೆ ಸಿಎಂ ಚಂಪಯಿ ಸೊರೇನ್ ಆದೇಶ ನೀಡಿದ್ದಾರೆ.
ಎಲ್ಲವೂ ಸುಸೂತ್ರವಾಗಿ ನಡೆದರೆ ಲೋಕಸಭೆ ಚುನಾವಣೆ ಬಳಿಕ ಝಾರ್ಖಂಡ್ನಲ್ಲಿ ಜಾತಿ ಗಣತಿ ನಡೆಯುವ ಸಾಧ್ಯತೆಗಳು ಇವೆ. ರಾಜ್ಯಕ್ಕೆ ಆಗಮಿಸಿದ್ದ ರಾಹುಲ್ ಗಾಂಧಿಯವರು ತಮ್ಮ “ಭಾರತ್ ಜೋಡೋ ನ್ಯಾಯ ಯಾತ್ರೆ’ ವೇಳೆ ಕೂಡ ಜಾತಿ ಗಣತಿ ಬಗ್ಗೆ ಮಾತನಾಡಿದ್ದರು. ಕಾಂಗ್ರೆಸ್ ಮತ್ತು ಆರ್ಜೆಡಿ ಶಾಸಕರು ಕೂಡ ಈ ಬಗ್ಗೆ ಒತ್ತಾಯ ಮಾಡುತ್ತಿದ್ದಾರೆ.
9 ಕಾಂಗ್ರೆಸ್ ಶಾಸಕರು ಬಿಜೆಪಿಯತ್ತ?
ಝಾರ್ಖಂಡ್ ಸರಕಾರದಲ್ಲಿ ತಮ್ಮದೇ ಪಕ್ಷದ ಸಚಿವರನ್ನು ಬದಲು ಮಾಡಬೇಕು ಎಂದು ಕಾಂಗ್ರೆಸ್ ಶಾಸಕರು ಹೊಸದಿಲ್ಲಿಗೆ ದೌಡಾಯಿಸಿದ್ದಾರೆ. ಸಚಿವ ಸ್ಥಾನ ನೀಡದಿದ್ದರೆ ಫೆ. 23ರಿಂದ ನಡೆಯಲಿರುವ ವಿಧಾನಸಭೆ ಅಧಿವೇಶನ ಬಹಿಷ್ಕರಿಸುವುದಾಗಿಯೂ ಅವರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಇದರ ಜತೆಗೆ ಕೆಲವು ಮಂದಿ ಶಾಸಕರು ಜೈಪುರದ ಹೊಟೇಲ್ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ನಡುವೆ, 9 ಮಂದಿ ಶಾಸಕರು ಬಿಜೆಪಿಗೆ ಸೇರ್ಪಡೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
MUST WATCH
ಹೊಸ ಸೇರ್ಪಡೆ
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
IPL 2024; ಚೆನ್ನೈ ಕಿಂಗ್ಸ್ಗೆ ಚೇಸಿಂಗ್ ಕಿಂಗ್ ಸವಾಲು
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ