ಅಯೋಧ್ಯೆ ಯಾತ್ರಾರ್ಥಿಗಳ ಸಂಖ್ಯೆ ಏರಿಕೆ ನಿರೀಕ್ಷೆ: ಯೋಗಿ ಆದಿತ್ಯನಾಥ್
Team Udayavani, Dec 18, 2022, 9:21 PM IST
ಲಕ್ನೋ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾದ ನಂತರ ಅಲ್ಲಿಗೆ ಆಗಮಿಸುವ ಯಾತ್ರಾರ್ಥಿಗಳ ಸಂಖ್ಯೆ 10 ಪಟ್ಟು ಏರಿಕೆಯಾಗಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದರು.
ಇಂಡಿಯನ್ ಅಸೋಸಿಯೇಷನ್ ಆಫ್ ಟೂರ್ ಆಪರೇಟರ್ಸ್ಗಳ 37ನೇ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಈ ಹಿಂದೆ ವರ್ಷಕ್ಕೆ ಒಂದು ಕೋಟಿ ಪ್ರವಾಸಿಗರು ಕಾಶಿಗೆ ಭೇಟಿ ನೀಡುತ್ತಿದ್ದರು.
ವೈಭಯುತ ಕಾಶಿ ಕಾರಿಡಾರ್ ನಿರ್ಮಾಣವಾದ ನಂತರ ಶ್ರಾವಣ ಮಾಸ ಒಂದರಲ್ಲೇ ಒಂದು ಕೋಟಿ ಪ್ರವಾಸಿಗರು ಕಾಶಿಗೆ ಭೇಟಿ ನೀಡಿದ್ದಾರೆ,’ ಎಂದರು.
“ರಾಜ್ಯದಲ್ಲಿ ಪ್ರವಾಸೋದ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಮಥುರಾ-ಬೃಂದಾವನದಲ್ಲಿ 30 ಸಾವಿರ ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಾಮಗಾರಿಗಳು ನಡೆಯುತ್ತಿವೆ. ಪ್ರವಾಸಿಗರಿಗೆ ಉತ್ತರ ಪ್ರದೇಶ ಸುರಕ್ಷಿತ ರಾಜ್ಯವಾಗಿದೆ,’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ