ಪ್ರವಾಹದ ಬಳಿಕ ಇಲಿ ಜ್ವರ!
Team Udayavani, Sep 1, 2018, 6:00 AM IST
ತಿರುವನಂತಪುರಂ: ಪ್ರವಾಹದ ಭೀಕರತೆಯಿಂದ ಸಾವರಿಸಿಕೊಳ್ಳುತ್ತಿದ್ದಂತೆಯೇ ಕೇರಳದಲ್ಲಿ ಈಗ ಇಲಿ ಜ್ವರ ಜನರ ಜೀವನದ ಜೊತೆ ಚೆಲ್ಲಾಟ ಆರಂಭಿಸಿದೆ. ಕಳೆದ 3 ದಿನಗಳಲ್ಲಿ 12 ಜನರು ಇಲಿ ಜ್ವರದಿಂದ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆ.28 ರಂದೇ ರಾಜ್ಯ ಆರೋಗ್ಯ ಇಲಾಖೆ ಈ ಸಂಬಂಧ ಸೂಚನೆ ಹೊರಡಿಸಿದ್ದು, ಯಾವುದೇ ರೀತಿಯ ಜ್ವರ ಕಾಣಿಸಿಕೊಂಡರೂ ಅದನ್ನು ಮೊದಲು ಇಲಿ ಜ್ವರವೇ ಎಂಬುದಾಗಿ ಪರಿಶೀಲಿಸಬೇಕು ಎಂದು ಸೂಚಿಸಿದೆ. ಆರೋಗ್ಯ ಇಲಾಖೆ ಈ ಸೂಚನೆ ಹೊರಡಿಸುತ್ತಿದ್ದಂತೆಯೇ ಆತಂಕ ಜನರಲ್ಲಿ ಮನೆ ಮಾಡಿದೆ.
ಲೆಪ್ಟೋಸ್ಪಿರೋಸಿಸ್ ಎಂದು ಕರೆಯಲಾಗುವ ಈ ರೋಗ ತ್ರಿಶೂರ್, ಪಾಲಕ್ಕಾಡ್, ಕಲ್ಲಿಕೋಟೆ, ಮಳಪ್ಪುರಂ ಹಾಗೂ ಕಣ್ಣೂರು ಜಿಲ್ಲೆಗಳಲ್ಲಿ ಹೆಚ್ಚಾಗಿದ್ದು, ಕಲುಷಿತಗೊಂಡ ನೀರು ಸೇವನೆಯಿಂದ ಹರಡಿದೆ. ಇದು ಸಾಂಕ್ರಾಮಿಕ ರೋಗವಾಗಿದ್ದು, ಸಾಮಾನ್ಯವಾಗಿ ಪ್ರಾಣಿಯಿಂದ ಮನುಷ್ಯನಿಗೆ ನೀರಿನ ಮೂಲಕ ಹರಡುತ್ತದೆ. 20 ವರ್ಷಗಳ ಹಿಂದೆ ಕೂಡ ಇಲಿ ಜ್ವರ ವ್ಯಾಪಕವಾಗಿ ಹರಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ